ಆ್ಯಪ್ನಗರ

ಎನ್‌ಡಿಎಗೆ ಸೇನೆ, ವೈಎಸ್‌ಆರ್‌ ಕಾಂಗ್ರೆಸ್‌ ಸೇರ್ಪಡೆಗೆ ಪ್ರಶಾಂತ್‌ ಮಧ್ಯಸ್ಥಿಕೆ?

ಬಿಜೆಪಿ-ಶಿವಸೇನೆ ಮೈತ್ರಿ ಕುರಿತು ಇನ್ನೂ ಸ್ಪಷ್ಟ ಚಿತ್ರಣ ಹೊರಬೀಳದೇ ಇರುವ ಸಂದರ್ಭದಲ್ಲಿ ಈ ಹೇಳಿಕೆ ಮಹತ್ವ ಪಡೆದಿದೆ. ರಾಜ್ಯದಲ್ಲಿ ಲೋಕಸಭೆ ಚುನಾವಣೆ ಹಾಗೂ ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಶಿವಸೇನೆ ಪ್ರಚಾರ ತಂತ್ರಕ್ಕೆ ಸಾಥ್‌ ನೀಡುವುದಾಗಿ ಪ್ರಶಾಂತ್‌ ಕಿಶೋರ್‌ ಭರವಸೆ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

Vijaya Karnataka 6 Feb 2019, 5:00 am
ಮುಂಬಯಿ: ಚುನಾವಣಾ ರಣತಂತ್ರ ನಿಪುಣ ಹಾಗೂ ಜೆಡಿಯು ಉಪಾಧ್ಯಕ್ಷ ಪ್ರಶಾಂತ್‌ ಕಿಶೋರ್‌ ಅವರು ಶಿವಸೇನೆ ಮುಖ್ಯಸ್ಥ ಉದ್ಧವ್‌ ಠಾಕ್ರೆ ಅವರನ್ನು ಮಂಗಳವಾರ ಭೇಟಿ ಮಾಡಿರುವುದು ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿದೆ.
Vijaya Karnataka Web prashanth mediates shiv sena ysr congress to join nda
ಎನ್‌ಡಿಎಗೆ ಸೇನೆ, ವೈಎಸ್‌ಆರ್‌ ಕಾಂಗ್ರೆಸ್‌ ಸೇರ್ಪಡೆಗೆ ಪ್ರಶಾಂತ್‌ ಮಧ್ಯಸ್ಥಿಕೆ?


ಮುಂಬಯಿಯಲ್ಲಿರುವ ಠಾಕ್ರೆ ನಿವಾಸದಲ್ಲಿ ಈ ಭೇಟಿ ನಡೆದಿದೆ. ಒಂದು ಗಂಟೆಗೂ ಹೆಚ್ಚುಕಾಲ ನಡೆದ ಮಾತುಕತೆ ವೇಳೆ ಠಾಕ್ರೆ ಪುತ್ರ ಹಾಗೂ ಯುವಸೇನಾ ಅಧ್ಯಕ್ಷ ಆದಿತ್ಯ ಠಾಕ್ರೆ ಸಹ ಉಪಸ್ಥಿತರಿದ್ದರು. ಭೇಟಿ ಬಳಿಕ, ''ಎನ್‌ಡಿಎ ಭಾಗವಾಗಿ ಮಹಾರಾಷ್ಟ್ರದಲ್ಲಿ ಶಿವಸೇನೆಯು ಬಲ ತುಂಬಲಿದೆ,'' ಎಂಬ ವಿಶ್ವಾಸವನ್ನು ಪ್ರಶಾಂತ್‌ ಕಿಶೋರ್‌ ವ್ಯಕ್ತಪಡಿಸಿದ್ದಾರೆ. ಬಿಜೆಪಿ-ಶಿವಸೇನೆ ಮೈತ್ರಿ ಕುರಿತು ಇನ್ನೂ ಸ್ಪಷ್ಟ ಚಿತ್ರಣ ಹೊರಬೀಳದೇ ಇರುವ ಸಂದರ್ಭದಲ್ಲಿ ಈ ಹೇಳಿಕೆ ಮಹತ್ವ ಪಡೆದಿದೆ. ರಾಜ್ಯದಲ್ಲಿ ಲೋಕಸಭೆ ಚುನಾವಣೆ ಹಾಗೂ ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಶಿವಸೇನೆ ಪ್ರಚಾರ ತಂತ್ರಕ್ಕೆ ಸಾಥ್‌ ನೀಡುವುದಾಗಿ ಪ್ರಶಾಂತ್‌ ಕಿಶೋರ್‌ ಭರವಸೆ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಇನ್ನು ಆಂಧ್ರಪ್ರದೇಶದಲ್ಲಿ ವೈಎಸ್‌ಆರ್‌ ಕಾಂಗ್ರೆಸ್‌ ಪಾರ್ಟಿ ಮುಖ್ಯಸ್ಥ ಜಗನ್‌ಮೋಹನ್‌ ರೆಡ್ಡಿ ಜತೆಗೂ ಪ್ರಶಾಂತ್‌ ಕಿಶೋರ್‌ 2017ರಿಂದಲೂ ಕೆಲಸ ಮಾಡುತ್ತಿದ್ದಾರೆ. ಜೆಡಿಯು ಉಪಾಧ್ಯಕ್ಷರಾಗಿ ನೇಮಕಗೊಂಡ ಬಳಿಕವವೂ ಜಗನ್‌ಗೆ ಸಲಹೆ ನೀಡುವುದನ್ನು ಮುಂದುವರಿಸಿದ್ದಾರೆ. ಹೀಗಾಗಿ ಜಗನ್‌ ಕೂಡ ಎನ್‌ಡಿಎ ಸೇರುವ ಅಥವಾ ಚುನಾವಣೆ ಬಳಿಕ ಎನ್‌ಡಿಎ ಬೆಂಬಲ ನೀಡುವ ಸಾಧ್ಯತೆ ದಟ್ಟವಾಗಿದೆ ಎಂದು ಹೇಳಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ