ಆ್ಯಪ್ನಗರ

ರಾಷ್ಟ್ರಪತಿ ಕೋವಿಂದ್‌ ಏಮ್ಸ್‌ಗೆ ದಾಖಲು, ಮಂಗಳವಾರ ಹೃದಯ ಶಸ್ತ್ರಚಿಕಿತ್ಸೆ ಸಾಧ್ಯತೆ

ರಾಮನಾಥ್‌ ಕೋವಿಂದ್‌ ಅವರನ್ನು ಶನಿವಾರ ದಿಲ್ಲಿಯ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಮಂಗಳವಾರ ಬೆಳಿಗ್ಗೆ ಬೈಪಾಸ್‌ ಸರ್ಜರಿಗೆ ಸಿದ್ಧತೆ ನಡೆಯುತ್ತಿದೆ ಎಂದು ರಾಷ್ಟ್ರಪತಿ ಭವನ ಶನಿವಾರ ತಿಳಿಸಿದೆ.

Agencies 27 Mar 2021, 8:35 pm
ಹೊಸದಿಲ್ಲಿ: ರಾಷ್ಟ್ರಪತಿ ರಾಮನಾಥ್‌ ಕೋವಿಂದ್‌ ಅವರನ್ನು ಶನಿವಾರ ದಿಲ್ಲಿಯಲ್ಲಿರುವ ಅಖಿಲ ಭಾರತ ವೈದ್ಯ ವಿಜ್ಞಾನ ಸಂಸ್ಥೆ (ಏಮ್ಸ್‌)ಗೆ ದಾಖಲಿಸಲಾಗಿದ್ದು, ಬೈಪಾಸ್‌ ಸರ್ಜರಿಗೆ ಸಿದ್ಧತೆ ನಡೆಯುತ್ತಿದೆ ಎಂದು ರಾಷ್ಟ್ರಪತಿ ಭವನ ತಿಳಿಸಿದೆ.
Vijaya Karnataka Web kovind


"ಭಾರತದ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರನ್ನು ಇಂದು (ಮಾರ್ಚ್ 27, 2021) ಮಧ್ಯಾಹ್ನ ದೆಹಲಿಯ ಏಮ್ಸ್‌ಗೆ ಸ್ಥಳಾಂತರಿಸಲಾಗಿದೆ. ತನಿಖೆಯ ನಂತರ, ಮಾರ್ಚ್ 30, ಮಂಗಳವಾರ ಬೆಳಿಗ್ಗೆ ಯೋಜಿತ ಬೈಪಾಸ್ ಸರ್ಜರಿಗೆ ಒಳಗಾಗಲು ವೈದ್ಯರು ಸಲಹೆ ನೀಡಿದ್ದಾರೆ. ರಾಷ್ಟ್ರಪತಿಗಳ ಆರೋಗ್ಯ ಸ್ಥಿರವಾಗಿದೆ ಮತ್ತು ಅವರು ಏಮ್ಸ್ ತಜ್ಞರ ಆರೈಕೆಯಲ್ಲಿದ್ದಾರೆ," ಎಂದು ರಾಷ್ಟ್ರಪತಿ ಭವನವು ಪ್ರಕಟಣೆಯಲ್ಲಿ ತಿಳಿಸಿದೆ.

ರಾಷ್ಟ್ರಪತಿ ರಾಮನಾಥ್‌ ಕೋವಿಂದ್‌ (75) ಎದೆನೋವಿನಿಂದ ಶುಕ್ರವಾರ ಸೇನೆಯ ರೆಫರಲ್‌ ಮತ್ತು ಸಂಶೋಧನಾ ಆಸ್ಪತ್ರೆಗೆ ದಾಖಲಾಗಿದ್ದರು. ಅವರನ್ನು ಹೆಚ್ಚಿನ ತಪಾಸಣೆಗಾಗಿ ಏಮ್ಸ್‌ಗೆ ಕಳುಹಿಸಲಾಗುವುದು ಎಂದು ಸೇನಾ ಆಸ್ಪತ್ರೆ ತಿಳಿಸಿತ್ತು.

ರಾಷ್ಟ್ರಪತಿ ರಾಮನಾಥ್ ಕೋವಿಂದ್‌ಗೆ ಎದೆನೋವು: ಆರೋಗ್ಯ ವಿಚಾರಿಸಿದ ಪ್ರಧಾನಿ!
"ನಿಯಮಿತ ವೈದ್ಯಕೀಯ ತಪಾಸಣೆಯ ನಂತರ ರಾಷ್ಟ್ರಪತಿಗಳನ್ನು ವೈದ್ಯರು ನೋಡಿಕೊಳ್ಳುತ್ತಿದ್ದಾರೆ. ಅವರ ಆರೋಗ್ಯದ ಬಗ್ಗೆ ತಿಳಿದುಕೊಂಡಿರುವ ಎಲ್ಲಾ ಹಿತೈಷಿಗಳಿಗೆ ರಾಷ್ಟ್ರಪತಿಗಳು ಧನ್ಯವಾದಗಳನ್ನು ವ್ಯಕ್ತಪಡಿಸಿದ್ದಾರೆ," ಎಂದು ರಾಷ್ಟ್ರಪತಿಗಳ ಕಚೇರಿ ಟ್ವೀಟ್ ಮಾಡಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ