ಆ್ಯಪ್ನಗರ

ಪ್ರಧಾನಿಯಾಗಿ ಮೋದಿ ನೇಮಕ, ಸಚಿವ ಸಂಪುಟದ ಸದಸ್ಯರ ಪಟ್ಟಿ ನೀಡಲು ರಾಷ್ಟ್ರಪತಿ ಸೂಚನೆ

ಬಿಜೆಪಿ ಸಂಸದೀಯ ಪಕ್ಷದ ನಾಯಕರಾಗಿ ಮೋದಿ ಅವರನ್ನು ಆಯ್ಕೆ ಮಾಡಿರುವ ಪತ್ರ ಹಾಗೂ ಎನ್‌ಡಿಎ ಮಿತ್ರಪಕ್ಷಗಳ ಬೆಂಬಲ ಪತ್ರಗಳನ್ನು ರಾಷ್ಟ್ರಪತಿಗಳಿಗೆ ಹಸ್ತಾಂತರಿಸಲಾಯಿತು. ಇದಕ್ಕೆ ಮುನ್ನ ಮೋದಿ ಅವರನ್ನು ಬಿಜೆಪಿ ನೇತೃತ್ವದ ಎನ್‌ಡಿಎ ಸಭೆಯಲ್ಲಿ ಸರ್ವಾನುಮತದಿಂದ ನಾಯಕರಾಗಿ ಆಯ್ಕೆ ಮಾಡಲಾಯಿತು. ಸಂಸತ್ತಿನ ಸೆಂಟ್ರಲ್ ಹಾಲ್‌ನಲ್ಲಿ ನಡೆದ ಈ ಸಭೆಯಲ್ಲಿ ಬಿಜೆಪಿ ಹಾಗೂ ಎನ್‌ಡಿಎ ಮಿತ್ರಪಕ್ಷಗಳ ಎಲ್ಲ ಸಂಸದರು ಹಾಗೂ ಹಿರಿಯ ಮುಖಂಡರು ಭಾಗವಹಿಸಿದ್ದರು.

TNN 26 May 2019, 11:30 am
ಹೊಸದಿಲ್ಲಿ: ಭಾರತೀಯ ಸಂವಿಧಾನದ 75(1)ನೇ ವಿಧಿ ಅನುಸಾರ ತಮಗಿರುವ ಅಧಿಕಾರವನ್ನು ಬಳಸಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ನರೇಂದ್ರ ಮೋದಿ ಅವರನ್ನು ದೇಶದ ಪ್ರಧಾನ ಮಂತ್ರಿಯಾಗಿ ನೇಮಿಸಿದ್ದಾರೆ. ಸಚಿವ ಸಂಪುಟಕ್ಕೆ ಸೇರ್ಪಡೆಗೊಳ್ಳುವ ಇತರ ಸದಸ್ಯರ ಹೆಸರುಗಳ ಪಟ್ಟಿಯನ್ನು ನೀಡುವಂತೆ ಹಾಗೂ ರಾಷ್ಟ್ರಪತಿ ಭವನದಲ್ಲಿ ಪ್ರಮಾಣ ವಚನ ಸ್ವೀಕರಿಸುವ ದಿನ ಹಾಗೂ ಸಮಯ ನಿಗದಿಪಡಿಸುವಂತೆ ಪ್ರಧಾನಿಗೆ ರಾಷ್ಟ್ರಪತಿ ಮನವಿ ಮಾಡಿದರು.
Vijaya Karnataka Web PM Modi-President Kovind


ಬಿಜೆಪಿ ಸಂಸದೀಯ ಪಕ್ಷದ ನಾಯಕರಾಗಿ ಮೋದಿ ಅವರನ್ನು ಆಯ್ಕೆ ಮಾಡಿರುವ ಪತ್ರ ಹಾಗೂ ಎನ್‌ಡಿಎ ಮಿತ್ರಪಕ್ಷಗಳ ಬೆಂಬಲ ಪತ್ರಗಳನ್ನು ರಾಷ್ಟ್ರಪತಿಗಳಿಗೆ ಹಸ್ತಾಂತರಿಸಲಾಯಿತು.

ಇದಕ್ಕೆ ಮುನ್ನ ಮೋದಿ ಅವರನ್ನು ಬಿಜೆಪಿ ನೇತೃತ್ವದ ಎನ್‌ಡಿಎ ಸಭೆಯಲ್ಲಿ ಸರ್ವಾನುಮತದಿಂದ ನಾಯಕರಾಗಿ ಆಯ್ಕೆ ಮಾಡಲಾಯಿತು. ಸಂಸತ್ತಿನ ಸೆಂಟ್ರಲ್ ಹಾಲ್‌ನಲ್ಲಿ ನಡೆದ ಈ ಸಭೆಯಲ್ಲಿ ಬಿಜೆಪಿ ಹಾಗೂ ಎನ್‌ಡಿಎ ಮಿತ್ರಪಕ್ಷಗಳ ಎಲ್ಲ ಸಂಸದರು ಹಾಗೂ ಹಿರಿಯ ಮುಖಂಡರು ಭಾಗವಹಿಸಿದ್ದರು.

ಹೊಸ ಹುರುಪಿನೊಂದಿಗೆ ನವಭಾರತ ನಿರ್ಮಾಣ

ವಿವಿಪ್ಯಾಟ್‌ ಮಿಸ್‌ಮ್ಯಾಚ್‌ ಇಲ್ಲ, ಫಲಿತಾಂಶ ಸರಿಯಾಗಿದೆ: ಚುನಾವಣೆ ಆಯೋಗ
ಮುಸ್ಲಿಮರಿಗೆ ನ್ಯಾಯ: ಮೋದಿ ನವ ಧ್ಯೇಯ

'ಮೋದಿ ಅವರನ್ನು 353 ಸಂಸದರು ಸರ್ವಾನುಮತದಿಂದ ಸಂಸದೀಯ ನಾಯಕರಾಗಿ ಆಯ್ಕೆ ಮಾಡಿದ್ದಾರೆ ಎಂದು ಬಿಜೆಪಿ ಅಧ್ಯಕ್ಷ ಅಮಿತ್ ಶಾ ಘೋಷಿಸಿದರು.

ಜೆಡಿಯು ನಾಯಕ ನಿತೀಶ್ ಕುಮಾರ್‌, ಶಿವಸೇನಾ ವರಿಷ್ಠ ಉದ್ಧವ್ ಠಾಕ್ರೆ, ಅಕಾಲಿದಳ ದ ಪ್ರಕಾಶ್ ಸಿಂಗ್ ಬಾದಲ್ ಅವರು ಮೋದಿ ಅವರಿಗೆ ಬೆಂಬಲ ಸೂಚಿಸಿದರು. ಬಿಜೆಪಿ ಹಿರಿಯ ನಾಯಕ ಎಲ್‌.ಕೆ ಆಡ್ವಾಣಿ ಮತ್ತು ಮುರಳಿ ಮನೋಹರ ಜೋಷಿ ಈ ಸಂದರ್ಭ ಉಪಸ್ಥಿತರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ