ಆ್ಯಪ್ನಗರ

ರಾಮ ಮಂದಿರ ನಿರ್ಮಾಣಕ್ಕೆ 5 ಲಕ್ಷ ರೂ. ದೇಣಿಗೆ ನೀಡಿದ ರಾಷ್ಟ್ರಪತಿ ರಾಮನಾಥ್ ಕೋವಿಂದ್

ಅಯೋಧ್ಯೆಯಲ್ಲಿ ಭವ್ಯ ರಾಮ ಮಂದಿರ ನಿರ್ಮಾಣಕ್ಕೆ ದೇಣಿಗೆ ಸಂಗ್ರಹಿಸುವ ಕಾರ್ಯಕ್ಕೆ ಶ್ರೀರಾಮ ಜನ್ಮಭೂಮಿ ಟ್ರಸ್ಟ್ ಅಧಿಕೃತವಾಗಿ ಚಾಲನೆ ನೀಡಿದ್ದು, ರಾಷ್ಟ್ರಪತಿ ರಾಮನಾಥ್ ಕೋವಿಂದ್ 5,00,100 ರೂ.ಗಳನ್ನು ದೇಣಿಗೆ ನೀಡಿದ್ದಾರೆ.

Vijaya Karnataka Web 15 Jan 2021, 4:53 pm
ಹೊಸದಿಲ್ಲಿ: ಅಯೋಧ್ಯೆಯಲ್ಲಿ ಭವ್ಯ ರಾಮ ಮಂದಿರ ನಿರ್ಮಾಣಕ್ಕೆ ದೇಣಿಗೆ ಸಂಗ್ರಹಿಸುವ ಕಾರ್ಯಕ್ಕೆ ಶ್ರೀರಾಮ ಜನ್ಮಭೂಮಿ ಟ್ರಸ್ಟ್ ಅಧಿಕೃತವಾಗಿ ಚಾಲನೆ ನೀಡಿದ್ದು, ರಾಷ್ಟ್ರಪತಿ ರಾಮನಾಥ್ ಕೋವಿಂದ್ 5,00,100 ರೂ.ಗಳನ್ನು ದೇಣಿಗೆ ನೀಡಿದ್ದಾರೆ.
Vijaya Karnataka Web Kovind ANI
ಸಂಗ್ರಹ ಚಿತ್ರ


ರಾಷ್ಟ್ರಪತಿ ಭವನದಲ್ಲಿ ತಮ್ಮನ್ನು ಭೇಟಿ ಮಾಡಿದ ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ನ ಉಪಾಧ್ಯಕ್ಷ ಗೋವಿಂದ್ ದೇವ್ ಗಿರಿಜಿ ಮಹಾರಾಜ್ ಹಾಗೂ ವಿಹೆಚ್‌ಪಿ ಕಾರ್ಯಕಾರಿ ಅಧ್ಯಕ್ಷ ಅಲೋಕ್ ಕುಮಾರ್ ಅವರಿಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ 5,00,100 ರೂ.ಗಳ ಚೆಕ್‌ನ್ನು ನೀಡಿದರು.

ಅದರಂತೆ ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಕೂಡ 1 ಲಕ್ಷ ರೂ. ದೇಣಿಗೆ ನೀಡಿದ್ದು, ತಮ್ಮ ಕುಟುಂಬದ ವತಿಯಿಂದ ಒಂದು ಇಟ್ಟಿಗೆಯನ್ನು ಕಾಣಿಕೆಯನ್ನಾಗಿ ನೀಡಲಾಗುವುದು ಎಂದು ಚೌಹಾಣ್ ಸ್ಪಷ್ಟಪಡಿಸಿದ್ದಾರೆ.

ಅಯೋಧ್ಯೆ ರಾಮ ಮಂದಿರ ನಿರ್ಮಾಣಕ್ಕೆ ಧರ್ಮಸ್ಥಳದಿಂದ 25 ಲಕ್ಷ ನಿಧಿ: ಡಾ. ಹೆಗ್ಗಡೆ ಘೋಷಣೆ!
ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವುದು ಕೇವಲ ರಾಮ ಮಂದಿರ ಮಾತ್ರವಲ್ಲ, ಬದಲಿಗೆ ರಾಷ್ಟ್ರೀಯ ಮಂದಿರ ಎಂದು ಶಿವರಾಜ್ ಸಿಂಗ್ ಚೌಹಾನ್ ಈ ವೇಳೆ ಅಭಿಪ್ರಾಯಪಟ್ಟಿದ್ದಾರೆ.

ಪಾಟ್ನಾದಲ್ಲಿ ಸಮರ್ಪಣ ನಿಧಿ ಸಂಗ್ರಹ ಅಭಿಯಾನಕ್ಕೆ ಚಾಲನೆ ನೀಡಿದ ಬಿಜೆಪಿ ಹಿರಿಯ ನಾಯಕ ಸುಶೀಲ್ ಕುಮಾರ್ ಮೋದಿ, ರಾಮ ಮಂದಿರ ನಿರ್ಮಾಣಕ್ಕಾಗಿ ರಾಜ್ಯದ ಪ್ರತಿ ಹಿಂದೂ ಕುಟುಂಬವೂ ತಮ್ಮದೇ ಆದ ಕಾಣಿಕೆ ನೀಡಲಿದೆ ಎಂಬ ಭರವಸೆ ಇದೆ ಎಂದು ಹೇಳಿದ್ದಾರೆ.



ಅನ್ಯ ಧರ್ಮೀಯರೂ ದೇಣಿಗೆ ನೀಡಬಹುದೇ ಎಂದು ಕೇಳಲಾದ ಪ್ರಶ್ನೆಗೆ ಯಾಕಾಗಬಾರದು ಎಂದು ಉತ್ತರಿಸಿದ ಸುಶೀಲ್ ಕುಮಾರ್ ಮೋದಿ, ಇದು ರಾಷ್ಟ್ರವನ್ನು ಒಗ್ಗೂಡಿಸುವ ಕಾರ್ಯವಾಗಿರುವುದರಿಂದ ಸಮಸ್ತ ದೇಶಬಾಂಧವರು ಕೈಜೋಡಿಸಬಹುದು ಎಂದು ಸ್ಪಷ್ಟಪಡಿಸಿದರು.



ಸಮರ್ಪಣ ನಿಧಿ ಸಂಗ್ರಹ ಅಭಿಯಾನಕ್ಕೆ ಅಧಿಕೃತ ಚಾಲನೆ ನೀಡಿರುವ ಶ್ರೀರಾಮ ಜನ್ಮಭೂಮಿ ಟ್ರಸ್ಟ್, ಫೆ.27ರವರೆಗೆ ಈ ಅಭಿಯಾನವನ್ನು ದೇಶಾದ್ಯಂತ ಹಮ್ಮಿಕೊಂಡಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ