ಆ್ಯಪ್ನಗರ

ಒಂದು ರಾಷ್ಟ್ರ, ಒಂದು ಚುನಾವಣೆಗೆ ಸಂಸದರು ಒಪ್ಪಿಗೆ ಸೂಚಿಸಲಿ: ರಾಷ್ಟ್ರಪತಿ

ಸುಭದ್ರ ಮತ್ತು ಬಲಿಷ್ಠ ಹಾಗೂ ಸಂಘಟಿತ ಭಾರತ ನಿರ್ಮಾಣಕ್ಕೆ ಎಲ್ಲರೂ ಕೈ ಜೋಡಿಸಬೇಕು. 2014ರಲ್ಲಿ ನಡೆದ ಚುನಾವಣೆಯಲ್ಲಿ ದೇಶದ ಅಭಿವೃದ್ಧಿಗೆ ಜನ ಒತ್ತು ನೀಡಿದರು. ಈಗ ಅದು ಮುಂದುವರಿದಿದೆ ಎಂದು ರಾಮನಾಥ್‌ ಕೋವಿಂದ್‌ ಹೇಳಿದರು.

Vijaya Karnataka Web 20 Jun 2019, 5:43 pm
ಹೊಸದಿಲ್ಲಿ: ಒಂದು ರಾಷ್ಟ್ರ ಒಂದು ಚುನಾವಣೆ ಇಂದಿನ ಕಾಲಕ್ಕೆ ಅತ್ಯಗತ್ಯವಾಗಿದೆ. ಈ ನಿಟ್ಟಿನಲ್ಲಿ ಸಂಸತ್‌ ಸದಸ್ಯರು ಒಪ್ಪಿಗೆ ಸೂಚಿಸಬೇಕು ಎಂದು ರಾಷ್ಟ್ರಪತಿ ರಾಮನಾಥ್‌ ಕೋವಿಂದ್ ಕರೆ ನೀಡಿದ್ದಾರೆ.
Vijaya Karnataka Web ರಾಮನಾಥ್‌ ಕೋವಿಂದ್‌
ರಾಮನಾಥ್‌ ಕೋವಿಂದ್‌


ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರಕಾರದ ಎರಡನೇ ಅವಧಿಯ ಮೊದಲ ಜಂಟಿ ಅಧಿವೇಶನವನ್ನು ಉದ್ದೇಶಿಸಿ ರಾಮನಾಥ್‌ ಕೋವಿಂದ್‌ ಭಾಷಣ ಮಾಡಿದರು.

ಸುಭದ್ರ ಮತ್ತು ಬಲಿಷ್ಠ ಹಾಗೂ ಸಂಘಟಿತ ಭಾರತ ನಿರ್ಮಾಣಕ್ಕೆ ಎಲ್ಲರೂ ಕೈ ಜೋಡಿಸಬೇಕು. 2014ರಲ್ಲಿ ನಡೆದ ಚುನಾವಣೆಯಲ್ಲಿ ದೇಶದ ಅಭಿವೃದ್ಧಿಗೆ ಜನ ಒತ್ತು ನೀಡಿದರು. ಈಗ ಅದು ಮುಂದುವರಿದಿದೆ ಎಂದು ರಾಮನಾಥ್‌ ಕೋವಿಂದ್‌ ಹೇಳಿದರು.

ವಿಶ್ವದ ಅತಿ ದೊಡ್ಡ ಪ್ರಜಾಪ್ರಭುತ್ವ ಹಬ್ಬವಾದ ಭಾರತದ ಲೋಕಸಭಾ ಚುನಾವಣೆ ಅತ್ಯಂತ ಯಶಸ್ವಿಯಾಗಿ, ಶಾಂತಿಯುತವಾಗಿ ನಡೆಯಲು ಚುನಾವಣೆ ಆಯೋಗದ ಅಧಿಕಾರಿಗಳು ಕಾರಣ. 61 ಕೋಟಿಗೂ ಹೆಚ್ಚು ಮತದಾರರು ತಮ್ಮ ಹಕ್ಕ ಚಲಾಯಿಸಿದ್ದಾರೆ. ಮಹಿಳಾ ಮತದಾರರು ಸ್ವಯಂ ಪ್ರೇರಿತರಾಗಿ ಮತ ಚಲಾಯಿಸಿದ್ದಾರೆ. ಹೀಗಾಗಿ ಈ ಬಾರಿ ಮಹಿಳಾ ಸಂಸದರ ಸಂಖ್ಯೆಯೂ (78) ಹೆಚ್ಚಾಗಿರುವುದು ವಿಶೇಷ ಎಂದು ರಾಮನಾಥ್‌ ಕೋವಿಂದ್‌ ವಿವರಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ