ಆ್ಯಪ್ನಗರ

ಪವನ್ ಗುಪ್ತಾ ಕ್ಷಮದಾನ ಅರ್ಜಿ ತಿರಸ್ಕರಿಸಿದ ರಾಷ್ಟ್ರಪತಿ: ಮುಂದೇನು?

ನಿರ್ಭಯಾ ಅತ್ಯಾಚಾರ ಪ್ರಕರಣದ ನಾಲ್ವರು ಅಪರಾಧಿಗಳಲ್ಲಿ ಓರ್ವನಾದ ಪವನ್ ಗುಪ್ತಾ ಸಲ್ಲಿಸಿದ್ದ ಕ್ಷಮದಾನ ಅರ್ಜಿಯನ್ನು ರಾಷ್ಟ್ರಪತಿ ರಾಮನಾಥ್ ಕೋವಿಂದ್ ತಿರಸ್ಕರಿಸಿದ್ದಾರೆ. ಈ ಮೂಲಕ ಅಪರಾಧಿಗಳಿಗಿದ್ದ ಎಲ್ಲ ಕಾನೂನು ಅವಕಾಶಗಳೂ ಮುಕ್ತಾಯ ಕಂಡಿದ್ದು, ನೇಣಿಗೆ ಕೊರಳೊಡ್ಡುವುದೊಂದೇ ಬಾಕಿ ಉಳಿದಿದೆ.

Vijaya Karnataka Web 4 Mar 2020, 2:36 pm
ನವದೆಹಲಿ: ಮಹತ್ವದ ಬೆಲವಣಿಗೆಯೊಂದರಲ್ಲಿ ನಿರ್ಭಯಾ ಅತ್ಯಾಚಾರ ಪ್ರಕರಣದ ನಾಲ್ವರು ಅಪರಾಧಿಗಳಲ್ಲಿ ಓರ್ವನಾದ ಪವನ್ ಗುಪ್ತಾ ಕ್ಷಮದಾದಾನ ಅರ್ಜಿಯನ್ನು ರಾಷ್ಟ್ರಪತಿ ರಾಮನಾಥ್ ಕೋವಿಂದ್ ತಿರಸ್ಕರಿಸಿದ್ದಾರೆ.
Vijaya Karnataka Web Pavan Gupta
ರಾಷ್ಟ್ರಪತಿ ರಾಮನಾಥ್ ಕೋವಿಂದ್ ನಿರ್ಭಯಾ ಪ್ರಕರಣದ ಅಪರಾಧಿ ಪವನ್ ಗುಪ್ತಾ ಕ್ಷಮದಾನ ಅರ್ಜಿಯನ್ನು ತಿರಸ್ಕರಿಸಿದ್ದಾರೆ.


ಈ ಮೂಲಕ ಪ್ರಕರಣದ ನಾಲ್ವರೂ ಅಪರಾಧಿಗಳ ಕ್ಷಮಾದಾನ ಅರ್ಜಿಯನ್ನು ರಾಷ್ಟ್ರಪತಿ ರಾಮನಾಥ್ ಕೋವಿಂದ್ ತಿರಸ್ಕರಿಸಿದಂತಾಗಿದೆ. ಇದೀಗ ಅಪರಾಧಿಗಳಿಗೆ ಹೊಸ ಡೆತ್ ವಾರೆಂಟ್ ಜಾರಿಗಾಬೇಕಿದೆ.



ತಾನು ಸಲ್ಲಿಸಿದ್ದ ಕ್ಯುರೇಟಿವ್ ಅರ್ಜಿಯನ್ನು ಸುಪ್ರೀಂಕೋರ್ಟ್ ತಿರಸ್ಕರಿಸಿದ್ದ ದಿನವೇ ಪವನ್ ಗುಪ್ತಾ ರಾಷ್ಟ್ರಪತಿಗಳಿಗೆ ಕ್ಷಮಾದಾನ ಅರ್ಜಿ ಸಲ್ಲಿಸಿದ್ದ. ಈ ಮೂಲಕ ಮಾರ್ಚ್ 3ರಂದು ಜಾರಿಯಾಗಬೇಕಿದ್ದ ಗಲ್ಲುಶಿಕ್ಷೆಗೆ ಮತ್ತೆ ಮುಂದೂಡಲ್ಪಟ್ಟಿತ್ತು.

ಇದೀಗ ಪವನ್ ಗುಪ್ತಾ ಕ್ಷಮಾದಾನ ಅರ್ಜಿಯನ್ನು ರಾಷ್ಟ್ರಪತಿಗಳು ತಿರಸ್ಕರಿಸಿದ್ದು, ಅಪರಾಧಿಗಳ ಎಲ್ಲಾ ಕಾನೂನು ಅವಕಾಶಗಳೂ ಮುಕ್ತಾಯ ಕಂಡಿದೆ. ಇದೀಗ ನಾಲ್ವರೂ ಅಪರಾಧಿಗಳು ನೇಣಿಗೆ ಕೊರಳೊಡ್ಡುವುದು ಖಚಿತವಾಗಿದೆ.

ರಾಷ್ಟ್ರಪತಿ ಮುಂದೆ ಜೀವ ಭಿಕ್ಷೆ ಕೇಳಿದ ಪವನ್: ಡೆತ್ ವಾರೆಂಟ್ ಮುಂದೂಡಲ್ಲ ಎಂದ ಕೋರ್ಟ್!

ಗಲ್ಲುಶಿಕ್ಷೆಯನ್ನು ಮುಂದೂಡಲು ಇನ್ನಿಲ್ಲದ ಪ್ರಯತ್ನ ನಡೆಸಿದ್ದ ಅಪರಾಧಿಗಳ ಪರ ವಕೀಲ ಎಪಿ ಸಿಂಗ್, ಇನ್ಯಾವ ಕಾನೂನು ದಾಳ ಉರುಳಿಸಲಿದ್ದಾರೆ ಎಂಬುದನ್ನು ಕಾದು ನೋಡಬೇಕಿದೆ.



ಇನ್ನು ರಾಷ್ಟ್ರಪತಿಗಳು ಪವನ್ ಗುಪ್ತಾ ಕ್ಷಮಾದಾನ ಅರ್ಜಿಯನ್ನ ತಿರಸ್ಕರಿಸಿರುವುದಕ್ಕೆ ಸಂತಸ ವ್ಯಕ್ತಪಡಿಸಿರುವ ನಿರ್ಭಯಾ ಪೋಷಕರ ಪರ ವಕೀಲರು, ಹೊಸ ಡೆತ್ ವಾರೆಂಟ್ ಜಾರಿಗಾಗಿ ದೆಹಲಿ ಕೋರ್ಟ್‌ಗೆ ಅರ್ಜಿ ಸಲ್ಲಿಸಲಾಗುವುದು ಎಂದು ಸ್ಪಷ್ಟಪಡಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ