ಆ್ಯಪ್ನಗರ

ಉತ್ತರಾಖಾಂಡದಲ್ಲಿ ನಮಾಮಿ ಗಂಗೆ ಮಿಷನ್‌ನಡಿಯಲ್ಲಿ 6 ಮೆಗಾ ಯೋಜನೆಗಳಿಗೆ ಪ್ರಧಾನಿ ಮೋದಿ ಚಾಲನೆ!

ಪ್ರಧಾನಿ ಮೋದಿ ಚಾಲನೆ ನೀಡಿದ ಯೋಜನೆಯಲ್ಲಿ 68 ಎಂಎಲ್‌ಡಿ ಒಳಚರಂಡಿ ಸಂಸ್ಕರಣಾ ಘಟಕ ನಿರ್ಮಾಣ(ಎಸ್‌ಟಿಪಿ), ಹರಿದ್ವಾರದ ಚಾಂಡಿ ಘಾಟ್‌ನಲ್ಲಿ ಗಂಗಾ ಅವಲೋಕನ್ ವಸ್ತು ಸಂಗ್ರಹಾಲಯ, ಹರಿದ್ವಾರದ ಜಗ್ಜೀತ್‌ಪುರದಲ್ಲಿ ಈಗಾಗಲೇ ನಿರ್ಮಾಣಗೊಂಡಿರುವ 27 ಎಂಎಲ್‌ಡಿ ಎಸ್‌ಟಿಪಿ ಘಟಕಗಳ ನವೀಕರಣ, ಸರಾಯ್‌ನಲ್ಲಿ 18 ಎಂಎಲ್‌ಡಿ ಎಸ್‌ಟಿಪಿ ಯೋಜನೆಗಳ ನಿರ್ಮಾಣ ಸೇರಿದೆ.

ANI 29 Sep 2020, 1:09 pm
Vijaya Karnataka Web EjD6EUrVoAEZlnX
ಹೊಸದಿಲ್ಲಿ: ನಮಾಮಿ ಗಂಗೆ ಯೋಜನೆಯಡಿ ಪ್ರಧಾನಿ ನರೇಂದ್ರ ಮೋದಿ ಇಂದು ಉತ್ತರಾಖಾಂಡದಲ್ಲಿ ಆರು ಮೆಗಾ ಯೋಜನೆಗಳಿಗೆ ಚಾಲನೆ ನೀಡಿದ್ದಾರೆ. ಹೊಸದಿಲ್ಲಿಯಲ್ಲಿರುವ ಪ್ರಧಾನಿ ಮೋದಿ ವಿಡಿಯೋ ಕಾನ್ಫರೆನ್ಸ್ ಮೂಲಕ ಆರು ಯೋಜನೆಗಳಿಗೆ ಚಾಲನೆ ನೀಡಿದರು.

ಇನ್ನು ಪ್ರಧಾನಿ ಮೋದಿ ಚಾಲನೆ ನೀಡಿದ ಯೋಜನೆಯಲ್ಲಿ 68 ಎಂಎಲ್‌ಡಿ ಒಳಚರಂಡಿ ಸಂಸ್ಕರಣಾ ಘಟಕ ನಿರ್ಮಾಣ(ಎಸ್‌ಟಿಪಿ), ಹರಿದ್ವಾರದ ಚಾಂಡಿ ಘಾಟ್‌ನಲ್ಲಿ ಗಂಗಾ ಅವಲೋಕನ್ ವಸ್ತು ಸಂಗ್ರಹಾಲಯ, ಹರಿದ್ವಾರದ ಜಗ್ಜೀತ್‌ಪುರದಲ್ಲಿ ಈಗಾಗಲೇ ನಿರ್ಮಾಣಗೊಂಡಿರುವ 27 ಎಂಎಲ್‌ಡಿ ಎಸ್‌ಟಿಪಿ ಘಟಕಗಳ ನವೀಕರಣ, ಸರಾಯ್‌ನಲ್ಲಿ 18 ಎಂಎಲ್‌ಡಿ ಎಸ್‌ಟಿಪಿ ಯೋಜನೆಗಳ ನಿರ್ಮಾಣ ಸೇರಿದೆ.

ಇನ್ನು ಯೋಜನೆಗೆ ಚಾಲನೆ ನೀಡಿದ ಬಳಿಕ ಮಾತನಾಡಿದ ಪ್ರಧಾನಿ ಮೋದಿ "ಕಳೆದ ದಶಕಗಳಲ್ಲಿ ಗಂಗಾ ನದಿಯನ್ನು ಸ್ವಚ್ಚಗೊಳಿಸಲು ಬೃಹತ್ ಉಪಕ್ರಮಗಳನ್ನು ಕೈಗೊಳ್ಳಲಾಯಿತು. ಆದರೆ ಆ ಉಪಕ್ರಮಗಳಿಗೆ ಸಾರ್ವಜನಿಕರ ಸಹಭಾಗಿತ್ವ ಹಾಗೂ ದೂರದೃಷ್ಟಿ ಇರಲಿಲ್ಲ. ಇದರ ಪರಿಣಾಮವಾಗಿ ಗಂಗಾ ನದಿಯ ನೀರು ಸ್ವಚ್ಚ ಆಗಲೇ ಇಲ್ಲ ಎಂದು ತಿಳಿಸಿದರು.

2 ವಾರದ ಹಿಂದೆ ಉತ್ತರಪ್ರದೇಶದಲ್ಲಿ ಗ್ಯಾಂಗ್‌ರೇಪ್‌ಗೆ ಒಳಗಾಗಿದ್ದ ದಲಿತ ಯುವತಿ ಚಿಕಿತ್ಸೆ ಫಲಿಸದೆ ಸಾವು..!

ಇದೀಗ ಗಂಗೆ ಸ್ವಚ್ಚವಾಗುತ್ತಿದ್ದಾಳೆ ಎಂದು ತಿಳಿಸಿದರು. ನಮಾಮಿ ಗಂಗೆ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದು, ಗಂಗಾ ನದಿ ಶುದ್ಧೀಕರಣ, ನದಿ ವ್ಯಾಪ್ತಿಯಲ್ಲಿ ಮಾಲಿನ್ಯದ ಪ್ರಮಾಣವನ್ನು ತಗ್ಗಿಸುವುದು ಯೋಜನೆಯ ಮುಖ್ಯ ಉದ್ದೇಶವಾಗಿದೆ. ತ್ಯಾಜ್ಯ ನಿರ್ವಹಣೆ, ನದಿ ಪಾತ್ರ ಅಭಿವೃದ್ಧಿ, ಅರಣ್ಯೀಕರಣ, ಗ್ರಾಮೀಣ ನೈರ್ಮಲ್ಯ ಸೌಲಭ್ಯ, ಜೀವಸಂಕುಲಗಳ ರಕ್ಷಣೆ ಸೇರಿದಂತೆ ಇನ್ನಿತರ ವಿಶೇಷತೆಗಳನ್ನು ಯೋಜನೆ ಒಳಗೊಂಡಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ