ಹೊಸದಿಲ್ಲಿ: ರಾಷ್ಟ್ರದ ಮೊದಲ ಪ್ರಧಾನಿ ಜವಾಹರಲಾಲ್ ನೆಹರೂ ಅವರ 55ನೇ ವಾರ್ಷಿಕ ಪುಣ್ಯ ಸ್ಮರಣೆಯ ಸಂದರ್ಭ ಪಿಎಂ ನರೇಂದ್ರ ಮೋದಿ ಸೇರಿದಂತೆ ಅನೇಕ ಗಣ್ಯರು ಸ್ಮರಣಾರ್ಥ ಗೌರವಾರ್ಪಣೆ ಸಲ್ಲಿಸಿದ್ದಾರೆ.
ಹೊಸದಿಲ್ಲಿಯ ಶಾಂತಿವನದಲ್ಲಿರುವ ಜವಾಹರಲಾಲ್ ನೆಹರೂ ಅವರ ಸಮಾಧಿಗೆ ಹಲವು ರಾಜಕಾರಣಿಗಳು ಮತ್ತು ಕಾಂಗ್ರೆಸ್ ಕಾರ್ಯಕರ್ತರು ಗೌರವಾರ್ಪಣೆ ಮಾಡಿದ್ದಾರೆ.
ನಮ್ಮ ರಾಷ್ಟ್ರಕ್ಕೆ ಪಂಡಿತ್ ಜವಾಹರಲಾಲ್ ನೆಹರೂ ಜೀ ನೀಡಿದ ಕೊಡುಗೆಗಳು ನಮ್ಮ ನೆನಪಿನಲ್ಲಿದೆ. ಅವರ 55ನೇ ಪುಣ್ಯ ಸ್ಮರಣೆಯಂದು ಗೌರವ ಸಲ್ಲಿಸುತ್ತಿದ್ದೇವೆ ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.
ಮಾಜಿ ರಾಷ್ಟ್ರಪತಿ ಪ್ರಣವ್ ಮುಖರ್ಜಿ, ಮಾಜಿ ಉಪ ರಾಷ್ಟ್ರಪತಿ ಹಮಿದ್ ಅನ್ಸಾರಿ, ಕಾಂಗ್ರೆಸ್ ಮುಖ್ಯಸ್ಥ ರಾಹುಲ್ ಗಾಂಧಿ, ಯುಪಿಎ ವರಿಷ್ಠೆ ಸೋನಿಯಾ ಗಾಂಧಿ, ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಮುಂತಾದ ಗಣ್ಯರು ದಿಲ್ಲಿಯ ಶಾಂತಿವನದಲ್ಲಿರುವ ನೆಹರೂ ಸಮಾಧಿಗೆ ಗೌರವಾರ್ಪಣೆ ಸಲ್ಲಿಸಿದ್ದಾರೆ.
ಮಹಾತ್ಮ ಗಾಂಧಿ ಅವರ ನಾಯಕತ್ವದಲ್ಲಿ ಭಾರತ ಸ್ವತಂತ್ರ ಪ್ರಜಾಪ್ರಭುತ್ವ ರಾಷ್ಟ್ರವಾಗಿ ಹೊರಹೊಮ್ಮಿದ ಬಳಿಕ ಜವಾಹರಲಾಲ್ ನೆಹರೂ ಅವರು ಮೊದಲ ಪ್ರಧಾನಿಯಾದರು. ಕೊನೆಯುಸಿರು ಇರುವವ ವರೆಗೆ, ಅಂದರೆ ಮೇ 27, 1964ರ ವರೆಗೂ ನೆಹರೂ ಪ್ರಧಾನಿಯಾಗಿ ಸೇವೆ ಸಲ್ಲಿಸಿದ್ದಾರೆ.
ಹೊಸದಿಲ್ಲಿಯ ಶಾಂತಿವನದಲ್ಲಿರುವ ಜವಾಹರಲಾಲ್ ನೆಹರೂ ಅವರ ಸಮಾಧಿಗೆ ಹಲವು ರಾಜಕಾರಣಿಗಳು ಮತ್ತು ಕಾಂಗ್ರೆಸ್ ಕಾರ್ಯಕರ್ತರು ಗೌರವಾರ್ಪಣೆ ಮಾಡಿದ್ದಾರೆ.
ನಮ್ಮ ರಾಷ್ಟ್ರಕ್ಕೆ ಪಂಡಿತ್ ಜವಾಹರಲಾಲ್ ನೆಹರೂ ಜೀ ನೀಡಿದ ಕೊಡುಗೆಗಳು ನಮ್ಮ ನೆನಪಿನಲ್ಲಿದೆ. ಅವರ 55ನೇ ಪುಣ್ಯ ಸ್ಮರಣೆಯಂದು ಗೌರವ ಸಲ್ಲಿಸುತ್ತಿದ್ದೇವೆ ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.
ಮಾಜಿ ರಾಷ್ಟ್ರಪತಿ ಪ್ರಣವ್ ಮುಖರ್ಜಿ, ಮಾಜಿ ಉಪ ರಾಷ್ಟ್ರಪತಿ ಹಮಿದ್ ಅನ್ಸಾರಿ, ಕಾಂಗ್ರೆಸ್ ಮುಖ್ಯಸ್ಥ ರಾಹುಲ್ ಗಾಂಧಿ, ಯುಪಿಎ ವರಿಷ್ಠೆ ಸೋನಿಯಾ ಗಾಂಧಿ, ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಮುಂತಾದ ಗಣ್ಯರು ದಿಲ್ಲಿಯ ಶಾಂತಿವನದಲ್ಲಿರುವ ನೆಹರೂ ಸಮಾಧಿಗೆ ಗೌರವಾರ್ಪಣೆ ಸಲ್ಲಿಸಿದ್ದಾರೆ.
ಮಹಾತ್ಮ ಗಾಂಧಿ ಅವರ ನಾಯಕತ್ವದಲ್ಲಿ ಭಾರತ ಸ್ವತಂತ್ರ ಪ್ರಜಾಪ್ರಭುತ್ವ ರಾಷ್ಟ್ರವಾಗಿ ಹೊರಹೊಮ್ಮಿದ ಬಳಿಕ ಜವಾಹರಲಾಲ್ ನೆಹರೂ ಅವರು ಮೊದಲ ಪ್ರಧಾನಿಯಾದರು. ಕೊನೆಯುಸಿರು ಇರುವವ ವರೆಗೆ, ಅಂದರೆ ಮೇ 27, 1964ರ ವರೆಗೂ ನೆಹರೂ ಪ್ರಧಾನಿಯಾಗಿ ಸೇವೆ ಸಲ್ಲಿಸಿದ್ದಾರೆ.