ಆ್ಯಪ್ನಗರ

ಕಾವೇರಿ ಶುದ್ಧೀಕರಣಕ್ಕೆ ಆದ್ಯತೆ ಅಗತ್ಯ: ಸುಪ್ರೀಂಗೆ ವರದಿ

ಕಾವೇರಿ ನದಿಯಿಂದ ತಮಿಳುನಾಡಿಗೆ ಹರಿಯುವ ನೀರು ಕಲುಷಿತವಾಗಿದ್ದು, ಅದನ್ನು ಶುದ್ಧವಾಗಿರುವಂತೆ ನೋಡಿಕೊಳ್ಳಲು ಕರ್ನಾಟಕ ಸರಕಾರ ಸೂಕ್ತ ಕ್ರಮಗಳನ್ನು ಕೈಗೊಳ್ಳುವ ಅಗತ್ಯವಿದೆ ಎಂದು ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿಯು ಸುಪ್ರೀಂ ಕೋರ್ಟ್‌ಗೆ ನೀಡಿದ ವರದಿಯಲ್ಲಿ ತಿಳಿಸಿದೆ.

Vijaya Karnataka 18 Jul 2018, 8:38 am
ಹೊಸದಿಲ್ಲಿ: ಕಾವೇರಿ ನದಿಯಿಂದ ತಮಿಳುನಾಡಿಗೆ ಹರಿಯುವ ನೀರು ಕಲುಷಿತವಾಗಿದ್ದು, ಅದನ್ನು ಶುದ್ಧವಾಗಿರುವಂತೆ ನೋಡಿಕೊಳ್ಳಲು ಕರ್ನಾಟಕ ಸರಕಾರ ಸೂಕ್ತ ಕ್ರಮಗಳನ್ನು ಕೈಗೊಳ್ಳುವ ಅಗತ್ಯವಿದೆ ಎಂದು ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿಯು ಸುಪ್ರೀಂ ಕೋರ್ಟ್‌ಗೆ ನೀಡಿದ ವರದಿಯಲ್ಲಿ ತಿಳಿಸಿದೆ.
Vijaya Karnataka Web Supreme Court 1


ನದಿ ನೀರಿನ ಗುಣಮಟ್ಟ ಕುರಿತು ಪರಿಶೀಲನೆ ನಡೆಸಿ ವರದಿ ಸಲ್ಲಿಸುವಂತೆ ಕಳೆದ ಏಪ್ರಿಲ್‌ನಲ್ಲಿ ಕೋರ್ಟ್‌ ನೀಡಿದ್ದ ನಿರ್ದೇಶನದ ಮೇರೆಗೆ ಮಂಡಳಿಯು ವರದಿ ಸಲ್ಲಿಸಿದೆ. ಕಾವೇರಿ ನದಿ ಪಾತ್ರದಲ್ಲಿರುವ ಕೈಗಾರಿಕಾ ಘಟಕಗಳಿಂದ ತ್ಯಾಜ್ಯವು ನದಿ ನೀರನ್ನು ಸೇರುತ್ತಿದೆ. 2017ರ ಸೆಪ್ಟೆಂಬರ್‌ನಿಂದ 2018ರ ಮೇ ಅವಧಿವರೆಗೆ ಕೈಗೊಳ್ಳಲಾಗಿದ್ದ ನೀರಿನ ಗುಣಮಟ್ಟ ಪರಿಶೀಲನೆ ವೇಳೆ ಅದರಲ್ಲಿ ಮಾಲಿನ್ಯಕಾರಕ ಅಂಶಗಳು ಕಂಡುಬಂದಿವೆ. ತ್ಯಾಜ್ಯ ಸಂಸ್ಕರಣಾ ಘಟಕಗಳ ನವೀಕರಣ,ಅಗತ್ಯ ಮೂಲ ಸೌಕರ್ಯಗಳ ಜತೆಗೆ ಕ್ರಿಯಾ ಯೋಜನೆ ರೂಪಿಸಬೇಕು ಎಂದು ಮಂಡಳಿ ಹೇಳಿದೆ. ಅಲ್ಲದೇ ಅಂತರ-ರಾಜ್ಯ ಗಡಿಗಳಲ್ಲಿ ನೀರಿನ ಗುಣಮಟ್ಟ ಅಳೆಯುವ ಮೇಲ್ವಿಚಾರಣಾ ಕೇಂದ್ರಗಳ ಸ್ಥಾಪನೆಗೆ ಮುಂದಾಗಬೇಕು ಎಂದೂ ಮಂಡಳಿ ಹೇಳಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ