ಆ್ಯಪ್ನಗರ

ಬಿಹಾರ ಬಸ್‌ ಅಪಘಾತಕ್ಕೆ 27 ಬಲಿ

ದ್ವಿಚಕ್ರ ವಾಹನಕ್ಕೆ ಡಿಕ್ಕಿಯಾಗುವುದನ್ನು ತಡೆಯಲು ಹೋಗಿ ಅಪಘಾತ

Vijaya Karnataka Web 3 May 2018, 9:07 pm
ಪಟನಾ: ಬಿಹಾರದ ಮೋತಿಹಾರಿಯಲ್ಲಿ ಗುರುವಾರ ನಡೆದ ಬಸ್‌ ಅಪಘಾತದಲ್ಲಿ ಕನಿಷ್ಠ 27 ಮಂದಿ ಮೃತಪಟ್ಟಿದ್ದಾರೆ. ಮುಝಾಫರ್‌ಪುರ್‌ದಿಂದ ಹೊಸದಿಲ್ಲಿಗೆ ತೆರಳುತ್ತಿದ್ದ ಖಾಸಗಿ ಬಸ್‌ ರಾಷ್ಟ್ರೀಯ ಹೆದ್ದಾರಿ 28ರ ಬೆಲ್ವ ಗ್ರಾಮದ ಬಳಿ ಸಾಗುತ್ತಿದ್ದಾಗ ದ್ವಿಚಕ್ರ ವಾಹನವೊಂದಕ್ಕೆ ಡಿಕ್ಕಿಯಾಗುವುದನ್ನು ತಡೆಯಲು ಹೋಗಿ ಅಪಘಾತ ಸಂಭವಿಸಿದೆ.
Vijaya Karnataka Web bihar bus accident


ಚಾಲಕನ ನಿಯಂತ್ರಣ ಕಳೆದುಕೊಂಡ ಬಸ್‌ ರಸ್ತೆ ಪಕ್ಕ ಉರುಳಿಬಿದ್ದು, ಕೂಡಲೇ ಬೆಂಕಿ ಹತ್ತಿಕೊಂಡಿದೆ. ಬಸ್ಸಿನಲ್ಲಿ 32 ಮಂದಿ ಪ್ರಯಾಣಿಕರಿದ್ದು, ಬಸ್‌ ಉರುಳಿದ ಕೂಡಲೇ ಸ್ಥಳೀಯರು ರಕ್ಷಣೆಗೆ ಧಾವಿಸಿದರಾದರೂ, ಬೆಂಕಿ ಬಸ್‌ನ ಎಲ್ಲೆಡೆ ವ್ಯಾಪಿಸಿದ್ದರಿಂದ ಮತ್ತು ಮಳೆ ಬಂದಿದ್ದರಿಂದ ರಕ್ಷಣಾ ಕಾರ್ಯಕ್ಕೆ ಅಡ್ಡಿಯುಂಟಾಗಿದೆ.

ಗಾಯಗೊಂಡವರನ್ನು ಕೂಡಲೇ ಸ್ಥಳೀಯ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ನೀಡಲಾಗಿದೆ. ಬಿಹಾರ ವಿಪತ್ತು ನಿರ್ವಹಣಾ ಸಚಿವ ದಿನೇಶ್‌ ಚಂದ್ರ ಯಾದವ್‌ ಬಸ್ ಅಪಘಾತದಲ್ಲಿ 27 ಮಂದಿ ಸಾವನ್ನಪ್ಪಿರುವುದನ್ನು ದೃಢಪಡಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ