ಆ್ಯಪ್ನಗರ

ಶಿಮ್ಲಾ ಬಸ್ ಅಪಘಾತಕ್ಕೆ ಏಳು ಬಲಿ

ಹಿಮಾಚಲ ಪ್ರದೇಶದ ಶಿಮ್ಲಾ ಸಮೀಪದ ಸಿರಾಮುರ್ ಜಿಲ್ಲೆಯಲ್ಲಿ ಭಾನುವಾರ ಸಂಭವಿಸಿದ ಬಸ್ ಅಪಘಾತದಲ್ಲಿ 7 ಮಂದಿ ಮೃತಪಟ್ಟಿದ್ದು, 12ಕ್ಕೂ ಅಧಿಕ ಪ್ರಯಾಣಿಕರು ಗಾಯಗೊಂಡಿದ್ದಾರೆ.

Vijaya Karnataka Web 13 May 2018, 6:27 pm
ಶಿಮ್ಲಾ: ಹಿಮಾಚಲ ಪ್ರದೇಶದ ಶಿಮ್ಲಾ ಸಮೀಪದ ಸಿರಾಮುರ್ ಜಿಲ್ಲೆಯಲ್ಲಿ ಭಾನುವಾರ ಸಂಭವಿಸಿದ ಬಸ್ ಅಪಘಾತದಲ್ಲಿ 7 ಮಂದಿ ಮೃತಪಟ್ಟಿದ್ದು, 12ಕ್ಕೂ ಅಧಿಕ ಪ್ರಯಾಣಿಕರು ಗಾಯಗೊಂಡಿದ್ದಾರೆ. ರಾಜ್‌ಗಢ್ ಪ್ರದೇಶದ ನೇ ನೇತಿ ವ್ಯಾಪ್ತಿಯಲ್ಲಿ ಮಾನ್ವದಿಂದ ಸೋಲನ್‌ಗೆ ಹೊರಟಿದ್ದ ಖಾಸಗಿ ಬಸ್‌ ಚಾಲಕನ ನಿಯಂತ್ರಣ ತಪ್ಪಿ ರಸ್ತೆಗೆ ಅಪ್ಪಳಿಸಿ, ಸಮೀಪದ ಜಮೀನಿಗೆ ಉರುಳಿ ಬಿದ್ದಿದೆ.
Vijaya Karnataka Web shimla


ರಾಜ್‌ಗಢ್‌ನಿಂದ ಸುಮಾರು 25 ದೂರದಲ್ಲಿ ಈ ಅಪಘಾತ ಸಂಭವಿಸಿದ್ದು, ಮಾಹಿತಿ ತಿಳಿಯುತ್ತಲೇ ಜಿಲ್ಲಾಡಳಿತ, ಪೊಲೀಸರು ಮತ್ತು ಸ್ಥಳೀಯಾಡಳಿತ ಸಹಾಯಕ್ಕೆ ಧಾವಿಸಿ ಬಂದಿದ್ದಾರೆ. ಗಾಯಗೊಂಡವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ.

ಬಸ್‌ನ ಬಹುತೇಕ ಭಾಗ ನಜ್ಜುಗುಜ್ಜಾಗಿದ್ದರಿಂದ ಒಳಗಡೆ ಸಿಲುಕಿದ್ದವರನ್ನು ಹೊರತೆಗೆಯಲು ಜೆಸಿಬಿ ಯಂತ್ರ ಬಳಸಬೇಕಾಯಿತು ಎಂದು ಸ್ಥಳಿಯರು ತಿಳಿಸಿದ್ದಾರೆ. ಅಲ್ಲದೆ ಬಸ್ ಉರುಳಿಬಿದ್ದ ಶಬ್ಧ ಕೇಳಿ ಸ್ಥಳಿಯರು ಬಂದು ರಕ್ಷಣಾ ಕಾರ್ಯದಲ್ಲಿ ಕೈಜೋಡಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ