ಆ್ಯಪ್ನಗರ

ಜಮ್ಮು ಕಾಶ್ಮೀರ, ಲಡಾಖ್‌ನಲ್ಲಿ ನಿಷೇಧಾಜ್ಞೆ ತೆರವು: ಶಾಲಾ-ಕಾಲೇಜು ಶೀಘ್ರ ಪುನಾರಂಭ

ಜಮ್ಮು ಕಾಶ್ಮೀರದಲ್ಲಿ ಕಳೆದ ಕೆಲವು ದಿನಗಳಿಂದ ಇದ್ದ ಉದ್ವಿಗ್ನ ವಾತಾವರಣ ತಿಳಿಯಾಗಿದೆ. ರಾಜ್ಯದಲ್ಲಿ ಒಟ್ಟಾರೆ ಪರಿಸ್ಥಿತಿ ಶಾಂತವಾಗಿದೆ ಎಂದು ಅಜಿತ್‌ ದೋವಲ್‌ ಸಮಾಧಾನ ವ್ಯಕ್ತಪಡಿಸಿದ್ದಾರೆ.

Vijaya Karnataka Web 9 Aug 2019, 9:23 pm
ಶ್ರೀನಗರ: ಜಮ್ಮು - ಕಾಶ್ಮೀರ ಹಾಗೂ ಲಡಾಖ್ ವಲಯದಲ್ಲಿ ಇತ್ತೀಚೆಗೆ ಹೇರಲಾಗಿದ್ದ ನಿಷೇಧಾಜ್ಞೆಯನ್ನು ತೆರವುಗೊಳಿಸಲಾಗಿದೆ. ಇದರಿಂದ ಶಾಲಾ-ಕಾಲೇಜುಗಳು ಶೀಘ್ರದಲ್ಲೇ ಪುನಾರಂಭಗೊಳ್ಳಲಿದೆ.
Vijaya Karnataka Web ಸೈನಿಕರು
ಸೈನಿಕರು


ಪ್ರಾರ್ಥನೆಗೆ ಮಸೀದಿಗಳು ತೆರೆದಿದ್ದು ಶುಕ್ರವಾರ ಪರಿಸ್ಥಿತಿ ಸಹಜ ಸ್ಥಿತಿಯತ್ತ ಮರಳಿದೆ.

ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವರ್ ಶ್ರೀನಗರಕ್ಕೆ ಭೇಟಿ ನೀಡಿ ಅಲ್ಲಿ ನಿಯೋಜಿತರಾಗಿರುವ ರಕ್ಷಣಾ ಪಡೆ ಮತ್ತು ಸ್ಥಳೀಯರೊಂದಿಗೆ ಮಾತುಕತೆ ನಡೆಸಿದರು.

ಜಮ್ಮು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಿದ್ದ ಸಂವಿಧಾನದ ವಿಧಿ 370 ಅನ್ನು ಕೇಂದ್ರ ಸರಕಾರ ರದ್ದುಪಡಿಸಿದ ನಂತರ ಅಲ್ಲಿನ ವಾಸ್ತವ ಸ್ಥಿತಿ ತಿಳಿಯಲು ದೋವಲ್ ಕಣಿವೆ ರಾಜ್ಯಕ್ಕೆ ಭೇಟಿ ನೀಡಿದ್ದರು.

ಶ್ರೀನಗರದ ರಾಜಭವನದಲ್ಲಿ ರಾಜ್ಯಪಾಲ ಸತ್ಯಪಾಲ್ ಮಲ್ಲಿಕ್ ಜತೆ ಮಾತುಕತೆ ನಡೆಸಿದರು. ನಾಗರಿಕರ ಸುರಕ್ಷತೆ ಖಾತರಿಯ ಜತೆಗೆ ಅಲ್ಲಿನ ಜನರಿಗೆ ದೈನಂದಿನ ಅಗತ್ಯಗಳನ್ನು ಪೂರೈಸಲು ಆದ್ಯತೆ ನೀಡುವಂತೆ ದೋವಲ್ ಹೇಳಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ