ಆ್ಯಪ್ನಗರ

ಲಾಕ್‌ಡೌನ್ ಉಲ್ಲಂಘಿಸಿದವರಿಗೆ ಶಿಕ್ಷೆ: ಕೇಂದ್ರದ ಅಧಿಸೂಚನೆ ತಿಳಿಯುವುದು ಕಡ್ಡಾಯ!

ಕೊರೊನಾ ವೈರಸ್ ಹರಡುವಿಕೆ ತಡೆಗಟ್ಟುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಈಗಾಗಲೇ ದೇಶದ 75 ಜಿಲ್ಲೆಗಳಲ್ಲಿ ಲಾಕ್‌ಡೌನ್ ಘೋಷಿಸಿದೆ. ಇದೇ ವೇಳೆ ಲಾಕ್‌ಡೌನ್ ಆದೇಶ ಪಾಲಿಸದವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುಂತೆ ಆಯಾ ರಾಜ್ಯ ಸರ್ಕಾರಗಳಿಗೆ ಕೇಂದ್ರ ಸರ್ಕಾರ ಸೂಚನೆ ನೀಡಿದೆ.

Vijaya Karnataka Web 23 Mar 2020, 12:50 pm
ನವದೆಹಲಿ: ಕೊರೋನಾ ವೈರಸ್ ವಿರುದ್ಧದ ಹೋರಾಟದ ಭಾಗವಾಗಿ ಘೋಷಿಸಲಾಗಿರುವ ಲಾಕ್‌ಡೌನ್ ಆದೇಶವನ್ನು ಪಾಲಿಸದಿದ್ದರೆ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಕೇಂದ್ರ ಸರ್ಕಾರ ಎಚ್ಚರಿಸಿದೆ.
Vijaya Karnataka Web Modi
ಕೊರೊನಾವೈರಸ್ ಹಿನ್ನೆಲೆಯಲ್ಲಿ ಘೋಷಿಸಲಾಗಿರುವ ಲಾಕ್‌ಡೌನ್ ಆದೇಶವನ್ನು ಪಾಲಿಸದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಕೇಂದ್ರ ಸರ್ಕಾರ ಎಲ್ಲಾ ರಾಜ್ಯ ಸರ್ಕಾರಗಳಿಗೆ ಸೂಚನೆ ನೀಡಿದೆ.


ದೇಶದ 75 ಜಿಲ್ಲೆಗಳಲ್ಲಿ ಲಾಕ್‌ಡೌನ್ ಘೋಷಣೆ ಮಾಡಲಾಗಿದ್ದು, ಈ ನಿಯಮ ಮೀರಿದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವುದು ಆಯಾ ರಾಜ್ಯ ಸರ್ಕಾರಗಳ ಕರ್ತವ್ಯ ಎಂದು ಕೇಂದ್ರ ಅಧಿಸೂಚನೆ ಹೊರಡಿಸಿದೆ.

ಕೆಲವರು ಇನ್ನೂ ಸಿರಿಯಸ್ ಆಗಿಲ್ಲ: ಗರಂ ಆದ ಪ್ರಧಾನಿ ಮೋದಿ!

ಲಾಕ್‌ಡೌನ್ ನಿಯಮವನ್ನು ಕಟ್ಟುನಿಟ್ಟಾಗಿ ಜಾರಿ ತರಲು ರಾಜ್ಯ ಸರ್ಕಾರಕ್ಕೆ ಕೇಂದ್ರ ಸರ್ಕಾರ ಸೂಚಿಸಿದ್ದು, ನಿಯಮ ಉಲ್ಲಂಘಿಸುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಸ್ಪಷ್ಟ ನಿರ್ದೇಶನ ನೀಡಿದೆ.


ಲಾಕ್‌ಡೌನ್ ಆದೇಶವನ್ನು ಕಟ್ಟುನಿಟ್ಟಾಗಿ ಪಾಲಿಸಲೇಬೇಕು ಎಂದು ಕೇಂದ್ರ ಸರ್ಕಾರ ತನ್ನ ಆದೇಶದಲ್ಲಿ ತಿಳಿಸಿದೆ. ಅಲ್ಲದೇ ಈ ನಿಯಮಗಳ ಜಾರಿಯ ಹೊಣೆ ಆಯಾ ರಾಜ್ಯ ಸರ್ಕಾರಗಳದ್ದು ಎಂದು ಸ್ಪಷ್ಟಪಡಿಸಿದೆ.

ಕೊರೊನಾ ಅವಾಂತರ: ಸಾರಿಗೆ ಬಂದ್, ದೇಶದ 75 ಜಿಲ್ಲೆಗಳು ಲಾಕ್‌ಡೌನ್!

ಭಾರತದಲ್ಲಿ ಈಗಾಗಲೇ 425 ಮಂದಿಯಲ್ಲಿ ವೈರಸ್ ದೃಢಪಟ್ಟಿದ್ದು, 8 ಮಂದಿ ಬಲಿಯಾಗಿದ್ದಾರೆ. ನಿತ್ಯ ಕೊರೋನಾ ಪೀಡಿತರ ಸಂಖ್ಯೆ ಹೆಚ್ಚುತ್ತಲೇ ಇರುವುದು ಆತಂಕಕ್ಕೆ ಎಡೆ ಮಾಡಿಕೊಟ್ಟಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ