ಆ್ಯಪ್ನಗರ

ರಫೇಲ್‌ ಡೀಲ್‌ ತನಿಖೆಗೆ ಸುಪ್ರೀಂ ತಿರಸ್ಕಾರ: ಸಂಸತ್ತಿನಲ್ಲಿ ಗದ್ದಲ, ರಾಹುಲ್‌ ಕ್ಷಮೆಯಾಚಿಸಬೇಕು ಎಂದ ಬಿಜೆಪಿ

ರಫೇಲ್‌ ಡೀಲ್‌ ಕುರಿತ ಸುಪ್ರೀಂ ಕೋರ್ಟ್‌ ತೀರ್ಪು ರಾಜ್ಯಸಭೆಯಲ್ಲಿಯೂ ಪ್ರತಿಧ್ವನಿಸಿತು. ಆಡಳಿತ ಪಕ್ಷ ಹಾಗೂ ಪ್ರತಿಪಕ್ಷ ಸದಸ್ಯರ ನಡುವೆ ಗದ್ದಲ, ವಾಕ್ಸಮರ ನಡೆಯಿತು.

Vijaya Karnataka Web 14 Dec 2018, 11:43 am
ಹೊಸದಿಲ್ಲಿ: ಬಹುಕೋಟಿ ರಫೇಲ್‌ ಯುದ್ಧ ವಿಮಾನ ಖರೀದಿ ಒಪ್ಪಂದಕ್ಕೆ ಸಂಬಂಧಿಸಿದಂತೆ ಯಾವುದೇ ತನಿಖೆ ಅಗತ್ಯವಿಲ್ಲ ಎಂದು ಸುಪ್ರೀಂ ಕೋರ್ಟ್‌ ನೀಡಿದ ಬೆನ್ನಲ್ಲೇ ಸಂಸತ್ತಿನಲ್ಲಿ ಬಿಜೆಪಿ, ಕಾಂಗ್ರೆಸ್ ಸದಸ್ಯರ ನಡುವೆ ತೀವ್ರ ವಾಕ್ಸಮರ ನಡೆದಿದೆ.

ಸುಪ್ರೀಂ ತೀರ್ಪು ಕೇಂದ್ರ ಸರಕಾರಕ್ಕೆ ಬಿಗ್ ರಿಲೀಫ್‌ ನೀಡಿದ್ದಲ್ಲದೇ ಪ್ರತಿಪಕ್ಷ ಕಾಂಗ್ರೆಸ್‌ ವಿರುದ್ಧ ಬಿಜೆಪಿಗೆ ಅಸ್ತ್ರವೊಂದು ದೊರೆತಂತಾಗಿದೆ.

ರಫೇಲ್‌ ಯುದ್ಧ ವಿಮಾನ ಗುಣಮಟ್ಟದಲ್ಲಿ ಹಾಗೂ ಮೌಲ್ಯದಲ್ಲಿ ಯಾವುದೇ ಲೋಪವಿಲ್ಲ ಎಂದು ಸುಪ್ರೀಂ ಕೋರ್ಟ್‌ ನ್ಯಾಯಪೀಠವೇ ಸ್ಪಷ್ಟಪಡಿಸಿದೆ. ಈ ಬಗ್ಗೆ ರಾಹುಲ್‌ ಗಾಂಧಿ ಇಡೀ ದೇಶಕ್ಕೆ ಬರಿ ಸುಳ್ಳು ಹೇಳಿದ್ದಾರೆ ಎಂದು ಬಿಜೆಪಿ ಸದಸ್ಯರು ಕಾಂಗ್ರೆಸ್‌ ವಿರುದ್ಧ ಗುಡುಗಿದರು.

ಮೋದಿ ಹಾಗೂ ಕೇಂದ್ರದ ವಿರುದ್ಧ ಸುಳ್ಳು ಹೇಳಿರುವ ರಾಹುಲ್‌ ಇಡೀ ದೇಶಕ್ಕೆ ಕ್ಷಮೆ ಕೋರಬೇಕು ಎಂದು ಬಿಜೆಪಿ ಸದಸ್ಯರು ಒತ್ತಾಯಿಸಿದರು. ಸುಪ್ರೀಂ ಕೋರ್ಟ್‌ ತೀರ್ಪು ಹೊರಬರುತ್ತಿದ್ದಂತೆ ಲೋಕಸಭೆಯಲ್ಲಿ ಬಿಜೆಪಿ ಸದಸ್ಯರು ಕಾಂಗ್ರೆಸ್‌ ನಾಯಕರ ವಿರುದ್ಧ ಘೋಷಣೆಗಳನ್ನು ಕೂಗಿದರು.

ರಫೇಲ್‌ ಡೀಲ್‌ ಕುರಿತ ಸುಪ್ರೀಂ ಕೋರ್ಟ್‌ ತೀರ್ಪು ರಾಜ್ಯಸಭೆಯಲ್ಲಿಯೂ ಪ್ರತಿಧ್ವನಿಸಿತು.

ಆಡಳಿತ ಪಕ್ಷ ಹಾಗೂ ಪ್ರತಿಪಕ್ಷ ಸದಸ್ಯರ ನಡುವೆ ಗದ್ದಲ, ವಾಕ್ಸಮರ ನಡೆಯಿತು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ