ಆ್ಯಪ್ನಗರ

55 ವರ್ಷಗಳಲ್ಲಿ ಆಗದ ಪರಿವರ್ತನೆ 55 ತಿಂಗಳಲ್ಲಿ ಆಗಿದೆ: ಅಮಿತ್‌ ಶಾ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿರುದ್ಧವೂ ವಾಗ್ದಾಳಿ ನಡೆಸಿದ ಶಾ, ''ರಾಜ್ಯದಲ್ಲಿ ಬಿಜೆಪಿ ತಳಮಟ್ಟದಿಂದ ಬೇರೂರುತ್ತಿದೆ. ಈ ಕಾರಣದಿಂದಾಗಿಯೇ ಬಿಜೆಪಿಯ ರಾರ‍ಯಲಿಗಳಿಗೆ ಹಾಗೂ ನಾಯಕರ ರಾಜ್ಯ ಪ್ರವೇಶಕ್ಕೆ ಅನುಮತಿ ನಿರಾಕರಿಸಲಾಗುತ್ತಿದೆ,'' ಎಂದು ಹೇಳಿದರು.

Vijaya Karnataka 10 Feb 2019, 5:00 am
ಪುಣೆ: ಅತಿ ಹಳೆಯ ರಾಜಕೀಯ ಪಕ್ಷವಾದ ಕಾಂಗ್ರೆಸ್‌ 55 ವರ್ಷ ದೇಶ ಆಳಿದರೂ ಮಹತ್ವದ ಬದಲಾವಣೆ ತರುವಲ್ಲಿ ವಿಫಲವಾಗಿದೆ ಎಂದು ಬಿಜೆಪಿ ಅಧ್ಯಕ್ಷ ಅಮಿತ್‌ ಶಾ ಟೀಕಿಸಿದ್ದಾರೆ.
Vijaya Karnataka Web shah


ಬಿಜೆಪಿ ರಾರ‍ಯಲಿ ಉದ್ದೇಶಿಸಿ ಮಾತನಾಡಿದ ಅವರು, ''ರಾಹುಲ್‌ ಬಾಬಾ ಮತ್ತು ಕುಟುಂಬದ ಕಂಪನಿಯು 55 ವರ್ಷ ದೇಶ ಆಳಿತು. ಅದೇನೂ ಸಣ್ಣ ಅವಧಿಯಲ್ಲ. ಸುದೀರ್ಘ ಕಾಲ ಆಡಳಿತ ನಡೆಸಿದರೂ ದೇಶದ ಸ್ಥಿತಿಯಲ್ಲಿ ಮಹತ್ವದ ಬದಲಾವಣೆಯೇನೂ ಆಗಿಲ್ಲ. ನರೇಂದ್ರ ಮೋದಿ 55 ತಿಂಗಳಿನಿಂದ ಆಡಳಿತ ನಡೆಸುತ್ತಿದ್ದಾರೆ. 55 ವರ್ಷಗಳಲ್ಲಿ ಕಾಂಗ್ರೆಸ್‌ನಿಂದ ಸಾಧ್ಯವಾಗದೇ ಇರುವ ಪರಿವರ್ತನೆ ಕೇವಲ 55 ತಿಂಗಳ ಅವಧಿಯಲ್ಲಿ ದೇಶದಲ್ಲಿ ಆಗಿದೆ,'' ಎಂದು ಹೇಳಿದರು.

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿರುದ್ಧವೂ ವಾಗ್ದಾಳಿ ನಡೆಸಿದ ಶಾ, ''ರಾಜ್ಯದಲ್ಲಿ ಬಿಜೆಪಿ ತಳಮಟ್ಟದಿಂದ ಬೇರೂರುತ್ತಿದೆ. ಈ ಕಾರಣದಿಂದಾಗಿಯೇ ಬಿಜೆಪಿಯ ರಾರ‍ಯಲಿಗಳಿಗೆ ಹಾಗೂ ನಾಯಕರ ರಾಜ್ಯ ಪ್ರವೇಶಕ್ಕೆ ಅನುಮತಿ ನಿರಾಕರಿಸಲಾಗುತ್ತಿದೆ,'' ಎಂದು ಹೇಳಿದರು.

''ಬಿಜೆಪಿ ರಾರ‍ಯಲಿಗಳಿಂದ ಕಾನೂನು ಮತ್ತು ಸುವ್ಯವಸ್ಥೆಗೆ ಭಂಗ ಉಂಟಾಗುತ್ತದೆ ಎಂಬುದಾಗಿ ಮಮತಾ ದೀ ಹೇಳುತ್ತಾರೆ. ಆದರೆ ಸುದ್ದಿ ಚಾನೆಲ್‌ವೊಂದು ನಡೆಸಿದ ಕುಟುಕು ಕಾರ್ಯಾಚರಣೆಯಲ್ಲಿ ಅಂತಹ ಯಾವುದೇ ಸಮಸ್ಯೆ ಉಂಟಾಗದು ಎಂಬುದಾಗಿ ಅಧಿಕಾರಿಯೊಬ್ಬರು ಅಭಿಪ್ರಾಯಪಟ್ಟಿದ್ದಾರೆ. ಬಿಜೆಪಿ ಬಗ್ಗೆ ಮಮತಾ ಬ್ಯಾನರ್ಜಿ ಎಷ್ಟು ಭಯ ಶುರುವಾಗಿದೆ ಎಂಬುದಕ್ಕೆ ಇದೇ ಸಾಕ್ಷಿ,'' ಎಂದು ನುಡಿದರು.

ಮಹಾರಾಷ್ಟ್ರದ 48 ಲೋಕಸಭಾ ಕ್ಷೇತ್ರಗಳ ಪೈಕಿ 45ರಲ್ಲಿ ಗೆಲುವು ಸಾಧಿಸುವ ಗುರಿಯನ್ನು ಅಮಿತ್‌ ಶಾ ಪಕ್ಷದ ರಾಜ್ಯ ನಾಯಕರಿಗೆ ನೀಡಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ