ಆ್ಯಪ್ನಗರ

ಆರ್‌ಎಸ್‌ಎಸ್‌ ಉಪನ್ಯಾಸ ಸರಣಿಗೆ ರಾಹುಲ್, ಸೀತಾರಾಂ ಯೆಚೂರಿಗೆ ಆಹ್ವಾನ?

ರಾಷ್ಟ್ರೀಯ ಸ್ವಯಂ ಸೇವಕ್ ಸಂಘ ಮತ್ತು ಬಿಜೆಪಿ ವಿರುದ್ಧ ವಿವಿಧ ಆರೋಪ ಮಾಡುತ್ತಿರುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯನ್ನೇ ಸಂಘದ ಮುಖ್ಯಸ್ಥ ಮೋಹನ್ ಭಾಗ್ವತ್‌ ಅವರ ವಿಶೇಷ ಉಪನ್ಯಾಸ ಸರಣಿಗೆ ಆಹ್ವಾನಿಸುವ ಸಾಧ್ಯತೆ ಇದೆ ಎನ್ನಲಾಗಿದೆ.

Vijaya Karnataka Web 27 Aug 2018, 5:48 pm
[This story originally published in Times of India on Aug 27, 2018]
Vijaya Karnataka Web RSS Rahul


ಹೊಸದಿಲ್ಲಿ:
ರಾಷ್ಟ್ರೀಯ ಸ್ವಯಂ ಸೇವಕ್ ಸಂಘ ಮತ್ತು ಬಿಜೆಪಿ ವಿರುದ್ಧ ವಿವಿಧ ಆರೋಪ ಮಾಡುತ್ತಿರುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯನ್ನೇ ಸಂಘದ ಮುಖ್ಯಸ್ಥ ಮೋಹನ್ ಭಾಗ್ವತ್‌ ಅವರ ವಿಶೇಷ ಉಪನ್ಯಾಸ ಸರಣಿಗೆ ಆಹ್ವಾನಿಸುವ ಸಾಧ್ಯತೆ ಇದೆ ಎನ್ನಲಾಗಿದೆ.

ರಾಹುಲ್ ಜತೆಗೆ ಸಿಪಿಎಂ ಕಾರ್ಯದರ್ಶಿ ಸೀತಾರಾಮ್ ಯೆಚೂರಿಗೂ ಆಹ್ವಾನ ದೊರೆಯುವ ಸಾಧ್ಯತೆಯಿದೆ. ಸೆಪ್ಟೆಂಬರ್‌ 17ರಿಂದ 19ರವರೆಗೆ ವಿಜ್ಞಾನ ಭವನದಲ್ಲಿ ಭಾರತದ ಭವಿಷ್ಯ: ಆರ್‌ಎಸ್‌ಎಸ್‌ ದೃಷ್ಟಿಕೋನ ಎಂಬ ಹೆಸರಿನಲ್ಲಿ ಭಾಗ್ವತ್ ವಿಶೇಷ ಉಪನ್ಯಾಸ ಸರಣಿ ಇರಲಿದ್ದು, ಅದಕ್ಕೆ ಭಿನ್ನ ರಾಜಕೀಯ ನಿಲುವು, ಪಕ್ಷ ಮತ್ತು ಸಿದ್ಧಾಂತ ಹೊಂದಿರುವ ಪ್ರಮುಖರನ್ನು ಆರ್‌ಎಸ್‌ಎಸ್‌ ಆಹ್ವಾನಿಸಲಿದೆ.

ಯಾರನ್ನು ಕರೆಯಬೇಕು ಎಂಬ ಬಗ್ಗೆ ಇನ್ನೂ ನಿರ್ಧಾರ ಅಂತಿಮವಾಗಿಲ್ಲ. ಆ ಬಗ್ಗೆ ಸಂಘ ನಿರ್ಧರಿಸಲಿದೆ. ಆದರೆ ಭಿನ್ನ ದೃಷ್ಟಿಕೋನ ಹೊಂದಿರುವ ನಾಯಕರಿಗೆ ಆಹ್ವಾನವಿರಲಿದೆ ಎಂದು ಆರ್‌ಎಸ್‌ಎಸ್‌ ಪ್ರಚಾರ ಪ್ರಮುಖ್ ಅರುಣ್ ಕುಮಾರ್ ತಿಳಿಸಿದ್ದಾರೆ.

ಮೂರು ದಿನಗಳ ವಿಶೇಷ ಉಪನ್ಯಾಸ ಸರಣಿಯಲ್ಲಿ ಭಾಗ್ವತ್ ಅವರು ಜನರೊಂದಿಗೆ ಪ್ರಶ್ನೋತ್ತರ ಸಹಿತ ವಿವಿಧ ಕಾರ್ಯಕ್ರಮ ನಡೆಸಿಕೊಡಲಿದ್ದಾರೆ. ದೇಶಕ್ಕೆ ಪ್ರಮುಖವಾದ ವಿಚಾರಗಳ ಬಗ್ಗೆ ಬೆಳಕು ಚೆಲ್ಲಲಿದ್ದಾರೆ ಎಂದು ಕುಮಾರ್ ಹೇಳಿದ್ದಾರೆ.

ಕಳೆದ ಜೂನ್‌ನಲ್ಲಿ ಆರ್‌ಎಸ್‌ಎಸ್‌ ನಾಗಪುರದ ಪ್ರಧಾನ ಕಚೇರಿಯ ಕಾರ್ಯಕ್ರಮಕ್ಕೆ ಪ್ರಣಬ್ ಮುಖರ್ಜಿಯನ್ನು ಆಹ್ವಾನಿಸಿತ್ತು. ಅದಕ್ಕೆ ಕಾಂಗ್ರೆಸ್ ನಾಯಕರಿಂದ ಟೀಕೆ ವ್ಯಕ್ತವಾಗಿತ್ತು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ