ಆ್ಯಪ್ನಗರ

ಸಾಲ ರೈಟ್‌ ಆಫ್‌ ಮಾಡಿದ್ದಕ್ಕೆ ಕೇಂದ್ರ ಸರಕಾರ ಸಂಸತ್ತಿನಲ್ಲಿ ಸತ್ಯ ಮುಚ್ಚಿಟ್ಟಿದ್ದು: ರಾಹುಲ್‌ ಗಾಂಧಿ

ಪ್ರಮುಖ 50 ಸುಸ್ತಿದಾರರ ಪಟ್ಟಿಯನ್ನು ನೀಡುವಂತೆ ಆಗ್ರಹಿಸಿದ್ದೆ. ಆದರೆ ಕೇಂದ್ರ ಸರಕಾರ ಆ ಸಮಯದಲ್ಲಿ ಯಾವುದೇ ಉತ್ತರವನ್ನು ನೀಡದೇ ಎಲ್ಲವನ್ನೂ ಮರೆಮಾಚಿತ್ತು ಎಂದು ರಾಹುಲ್‌ ಗಾಂಧಿ ಆರೋಪಿಸಿದ್ದಾರೆ.

Vijaya Karnataka Web 28 Apr 2020, 7:59 pm
ಹೊಸದಿಲ್ಲಿ: ಬ್ಯಾಂಕ್‌ಗಳಿಂದ ಸಾಲ ಪಡೆದು ಸುಸ್ತಿದಾರರಿಗೆ 50ಕ್ಕೂ ಹೆಚ್ಚು ಮಂದಿಯ ಪಟ್ಟಿಯನ್ನು ಭಾರತೀಯ ರಿಸರ್ವ್‌ ಬ್ಯಾಂಕ್‌ ನೀಡಿರುವ ಬೆನ್ನಲ್ಲೇ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಕೇಂದ್ರ ಸರಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
Vijaya Karnataka Web ರಾಹುಲ್ ಗಾಂಧಿ
ರಾಹುಲ್ ಗಾಂಧಿ


ಸುಸ್ತಿದಾರರ ಸಾಲವನ್ನು ರೈಟ್‌ ಆಫ್‌ ಮಾಡಿದ್ದ ಕಾರಣಕ್ಕಾಗಿಯೇ ಕೇಂದ್ರ ಸರಕಾರ ಸಂಸತ್ತಿನಲ್ಲಿ ನನ್ನ ಪ್ರಶ್ನೆಗೆ ಉತ್ತರ ನೀಡದೇ ಎಲ್ಲವನ್ನೂ ಮುಚ್ಚಿಟ್ಟಿತ್ತು ಎಂದು ಕಿಡಿಕಾರಿದ್ದಾರೆ.

ಈ ಹಿಂದೆ ಸಂಸತ್ತಿನಲ್ಲಿ ನಡೆದ ಚರ್ಚೆಯ ವೇಳೆ ಮಾತನಾಡಿದ್ದ ನಾನು, ಪ್ರಮುಖ 50 ಸುಸ್ತಿದಾರರ ಪಟ್ಟಿಯನ್ನು ನೀಡುವಂತೆ ಆಗ್ರಹಿಸಿದ್ದೆ. ಆದರೆ ಕೇಂದ್ರ ಸರಕಾರ ಆ ಸಮಯದಲ್ಲಿ ಯಾವುದೇ ಉತ್ತರವನ್ನು ನೀಡದೇ ಎಲ್ಲವನ್ನೂ ಮರೆಮಾಚಿತ್ತು ಎಂದು ರಾಹುಲ್‌ ಗಾಂಧಿ ಆರೋಪಿಸಿದ್ದಾರೆ.


ಈ ಸಂಬಂಧ ಟ್ವೀಟ್‌ ಮಾಡಿರುವ ರಾಹುಲ್‌ ಗಾಂಧಿ, ಕೇಂದ್ರ ಸರಕಾರವನ್ನು ಪ್ರಶ್ನಿಸಿದ ಸಂದರ್ಭದಲ್ಲಿ ಯಾವುದೇ ಉತ್ತರ ನೀಡಿಲ್ಲ. ಆದರೆ ಈಗ ಭಾರತೀಯ ರಿಸರ್ವ್‌ ಬ್ಯಾಂಕ್‌ ಸುಸ್ತಿದಾರರ ಪಟ್ಟಿಯನ್ನೇ ನೀಡಿದೆ ಎಂದು ತಿಳಿಸಿದ್ದಾರೆ.

ಆರ್‌ಟಿಐಗೆ ಉತ್ತರ ನೀಡಿರುವ ಆರ್‌ಬಿಐ ಈಗ ನೀರವ್‌ ಮೋದಿ, ಮೆಹುಲ್‌ ಚೋಕ್ಸಿ, ಸಾಹಿತ್‌ ಬಾಜ್ಪಾ ಹಾಗೂ ಬಿಜೆಪಿಗೆ ಬೇಕಿರುವ ಸ್ನೇಹಿತರ ಹೆಸರುಗಳುಳ್ಳ 50 ಸುಸ್ತಿದಾರರ ಪಟ್ಟಿಯನ್ನು ನೀಡಿದೆ ಎಂದು ರಾಹುಲ್ ಗಾಂಧಿ ಟ್ವೀಟಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ