ಆ್ಯಪ್ನಗರ

ಲಾಲು ಆರೋಗ್ಯ ವಿಚಾರಿಸಿದ ರಾಹುಲ

ಅನಾರೋಗ್ಯದ ಹಿನ್ನೆಲೆಯಲ್ಲಿ ಏಮ್ಸ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿರುವ ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವರನ್ನು ಭೇಟಿಯಾಗಿರುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಆರೋಗ್ಯ ವಿಚಾರಿಸಿದ್ದಾರೆ.

TIMESOFINDIA.COM 30 Apr 2018, 2:17 pm
ಹೊಸದೆಲ್ಲಿ: ಅನಾರೋಗ್ಯದ ಹಿನ್ನೆಲೆಯಲ್ಲಿ ಏಮ್ಸ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿರುವ ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವರನ್ನು ಭೇಟಿಯಾಗಿರುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಆರೋಗ್ಯ ವಿಚಾರಿಸಿದ್ದಾರೆ.
Vijaya Karnataka Web Rahul- Gandhi


ಮಾರ್ಚ್ 29 ರಂದು ಏಮ್ಸ್‌ಗೆ ದಾಖಲಾಗಿದ್ದ ಲಾಲು ಹೃದಯ ಮತ್ತು ಕಿಡ್ನಿ ಸಂಬಂಧಿ ಸಮಸ್ಯೆಗಳಿಗೆ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರಿಗೆ ಚಿಕಿತ್ಸೆ ನೀಡಲು ಏಮ್ಸ್ ಆಡಳಿತ ಮಂಡಳಿ 5 ಜನ ತಜ್ಞ ವೈದ್ಯರಿಂದ ಕೂಡಿದ ತಂಡವನ್ನು ನೇಮಿಸಿದೆ. ಔಷಧ ವಿಭಾಗದ ಮುಖ್ಯಸ್ಥರಾದ ಡಾ. ನವನೀತ್ ವಿಗ್ ಈ ಸಮಿತಿಯ ನೇತೃತ್ವ ವಹಿಸಿದ್ದು, ಶಸ್ತ್ರಚಿಕಿತ್ಸೆ, ಹೃದಯಶಾಸ್ತ್ರ, ಮೂತ್ರಪಿಂಡ ಶಾಸ್ತ್ರ, ಮತ್ತು ನರವಿಜ್ಞಾನ ವಿಭಾಗದ ವೈದ್ಯರು ಸಹ ಈ ಸಮಿತಿಯಲ್ಲಿದ್ದಾರೆ.

ಡಿಸೆಂಬರ್ 23ರಿಂದ ಲಾಲು, ಸೆರೆವಾಸ ಅನುಭವಿಸುತ್ತಿದ್ದಾರೆ. ಬಿರ್ಸಾ ಮುಂಡಾ ಜೈಲಿನಲ್ಲಿದ್ದ ಅವರು ಮಾರ್ಚ್ 17 ರಂದು ಅನಾರೋಗ್ಯದ ಹಿನ್ನೆಲೆಯಲ್ಲಿ ರಾಜೇಂದ್ರ ವೈದ್ಯಕೀಯ ಕಾಲೇಜಿಗೆ ದಾಖಲಾಗಿದ್ದರು. ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಏಮ್ಸ್ ಆಸ್ಪತ್ರೆಗೆ ವರ್ಗಾಯಿಸಲಾಗಿತ್ತು.

ಬಹುಕೋಟಿ ಮೇವು ಹಗರಣಕ್ಕೆ ಸಂಬಂಧಿಸಿದ ನಾಲ್ಕನೇ ಪ್ರಕರಣದಲ್ಲಿ ರಾಂಚಿಯ ಸಿಬಿಐ ನ್ಯಾಯಾಲಯ ಲಾಲುಗೆ 14 ವರ್ಷ ಜೈಲು ಶಿಕ್ಷೆ ವಿಧಿಸಿದೆ. ಈ ಮೊದಲಿನ ಮೂರು ಪ್ರಕರಣಗಳಿಗೆ ಹೋಲಿಸಿದರೆ ಈ ಬಾರಿ ಅವರಿಗೆ ಅತ್ಯಂತ ಹೆಚ್ಚು ಶಿಕ್ಷೆಯಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ