ಆ್ಯಪ್ನಗರ

ರಕ್ಷಣಾ ಸಭೆಗಳಿಗೆ ಗೈರಾಗುವ ರಾಹುಲ್ ಗಡಿ ಸುರಕ್ಷತೆ ಬಗ್ಗೆ ಪ್ರಶ್ನೆ ಮಾಡುತ್ತಾರೆ: ಬಿಜೆಪಿ ತಿರುಗೇಟು!

ಭಾರತ-ಚೀನಾ ಗಡಿ ತಕರಾರು ಕುರಿತು ಪದೇ ಪದೇ ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಮೇಲೆ ವಾಗ್ದಾಳಿ ಮಾಡುತ್ತಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಬಿಜೆಪಿ ತಿರುಗೇಟು ನೀಡಿದೆ. ಗಡಿ ಸುರಕ್ಷತೆ ಕುರಿತು ಪ್ರಶ್ನೆ ಕೇಳುವ ಮೊದಲು ರಾಹುಲ್ ರಕ್ಷಣಾ ಸ್ಥಾಯಿ ಸಮಿತಿಯ ಸಭೆಗಳಿಗೆ ಹಾಜರಾಗಲಿ ಎಂದು ಬಿಜೆಪಿ ವ್ಯಂಗ್ಯವಾಡಿದೆ.

Vijaya Karnataka Web 6 Jul 2020, 3:51 pm
ನವದೆಹಲಿ: ಭಾರತ-ಚೀನಾ ಗಡಿ ಘರ್ಷಣೆ ಹಾಗೂ ಗಡಿ ತಕರಾರು ಕುರಿತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನಿರಂತರವಾಗಿ ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಮೇಲೆ ವಾಗ್ದಾಳಿ ಮಾಡುತ್ತಿದ್ದಾರೆ.
Vijaya Karnataka Web Rahul Gandhi
ಸಂಗ್ರಹ ಚಿತ್ರ


ನಿತ್ಯವೂ ಮೋದಿ ಸರ್ಕಾರಕ್ಕೆ ಪ್ರಶ್ನೆಗಳನ್ನು ಕೇಳುತ್ತಿರುವ ರಾಹುಲ್ ಗಾಂಧಿ, ಚೀನಾ ನಮ್ಮ ನೆಲ ಕಬಳಿಸಿದೆ ಎಂಬ ಗುಮಾನಿಗಳಿಗೆ ಉತ್ತರ ನೀಡಬೇಕು ಎಂದು ಆಗ್ರಹಿಸುತ್ತಲೇ ಇದ್ದಾರೆ.

ರಾಹುಲ್ ಗಾಂಧಿ ಅವರ ಸರಣಿ ಪ್ರಶ್ನೆಗಳಿಗೆ ಸೂಕ್ತ ತಿರುಗೇಟು ನೀಡಿರುವ ಬಿಜೆಪಿ, ರಾಹುಲ್ ಮೊದಲು ರಕ್ಷಣಾ ಸಭೆಗಳಿಗೆ ಹಾಜರಾಗಲಿ ಸಾಕು ಎಂದು ಕುಹುಕವಾಡಿದೆ.

ನೋಟು ರದ್ದತಿ, ಜಿಎಸ್‌ಟಿಯಂತೆ ಕೊರೊನಾ ನಿಯಂತ್ರಣದಲ್ಲೂ ಮೋದಿ ವಿಫಲ: ರಾಹುಲ್ ಗಾಂಧಿ‌ ವ್ಯಂಗ್ಯ


ರಕ್ಷಣಾ ಸ್ಥಾಯಿ ಸಮಿತಿಯ ಸಭೆಗಳಿಗೆ ಗೈರಾಗುವ ರಾಹುಲ್ ಗಾಂಧಿ, ಬಳಿಕ ಎಲ್ಲರ ಮುಂದೆ ಬಂದು ಗಡಿ ತಕರಾರಿನ ಕುರಿತು ಮೋದಿ ಸರ್ಕಾರಕ್ಕೆ ಪ್ರಶ್ನೆಗಳನ್ನು ಕೇಳುತ್ತಾರೆ ಎಂದು ಬಿಜೆಪಿ ತಿರುಗೇಟು ನೀಡಿದೆ.

ಈ ಕುರಿತು ಟ್ವೀಟ್ ಮಾಡಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ, ರಕ್ಷಣಾ ಸ್ಥಾಯಿ ಸಮಿತಿ ಸಭೆಗಳಿಗೆ ಬರದ ರಾಹುಲ್ ಅವರಿಂದ ಮೋದಿ ಸರ್ಕಾರ ಗಡಿ ಸುರಕ್ಷತೆಯ ಪಾಠ ಹೇಳಿಸಿಕೊಳ್ಳಬೇಕಿಲ್ಲ ಎಂದು ಹರಿಹಾಯ್ದಿದ್ದಾರೆ.

ಸೂರ್ಯ, ಚಂದ್ರ ಹಾಗೂ ಸತ್ಯವನ್ನು ಬಚ್ಚಿಡಲು ಸಾಧ್ಯವಿಲ್ಲ: ರಾಹುಲ್ ಟ್ವೀಟ್ ಮರ್ಮವೇನು?

ತಮ್ಮ ಜವಾಬ್ದಾರಿಗಳಿಂದ ನುಣುಚಿಕೊಳ್ಳುವ ರಾಹುಲ್ ಗಾಂಧಿ, ಮೋದಿ ಸರ್ಕಾರವನ್ನು ಪ್ರಶ್ನೆ ಮಾಡುತ್ತಾ ದೇಶದ ನೈತಿಕತೆಗೆ ಪೆಟ್ಟು ನೀಡುತ್ತಿದ್ದಾರೆ ಎಂದು ಜೆಪಿ ನಡ್ಡಾ ಕಿಡಿಕಾರಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ