ಆ್ಯಪ್ನಗರ

ರಾಹುಲ್ ಬಾಬಾ, ನಿಮ್ಮ ಇಟಲಿಯ ಕನ್ನಡಕ ತೆಗೆದಿಟ್ಟು ಅಭಿವೃದ್ಧಿ ಕಡೆ ನೋಡಿ: ಅಮಿತ್ ಶಾ ವ್ಯಂಗ್ಯ

Amit Shah In Arunachal Pradesh: ರಾಹುಲ್ ಗಾಂಧಿ ಅವರು ತಮ್ಮ ಇಟಲಿಯ ಗಾಜುಗಳನ್ನು ತೆಗೆದಿಟ್ಟು, ಅರುಣಾಚಲ ಪ್ರದೇಶದಲ್ಲಿ ಕಳೆದ ಎಂಟು ವರ್ಷಗಳಲ್ಲಿ ಪ್ರಧಾನಿ ಮೋದಿ ಹಾಗೂ ಸಿಎಂ ಪೇಮ ಖಂಡು ಮಾಡಿದ ಅಭಿವೃದ್ಧಿ ಕಾರ್ಯಗಳನ್ನು ನೋಡಬೇಕು ಎಂದು ಗೃಹ ಸಚಿವ ಅಮಿತ್ ಶಾ ವ್ಯಂಗ್ಯವಾಡಿದ್ದಾರೆ.

Edited byಅಮಿತ್ ಎಂ.ಎಸ್ | Vijaya Karnataka Web 22 May 2022, 5:57 pm

ಹೈಲೈಟ್ಸ್‌:

  • ಅರುಣಾಚಲ ಪ್ರದೇಶದಲ್ಲಿ ವಿವಿಧ ಯೋಜನೆಗಳಿಗೆ ಗೃಹ ಸಚಿವ ಅಮಿತ್ ಶಾ ಚಾಲನೆ
  • ಇಟಲಿಯ ಕನ್ನಡಕ ತೆಗೆದಿಟ್ಟು ಅಭಿವೃದ್ಧಿ ನೋಡಿ ಎಂದು ರಾಹುಲ್‌ ಗಾಂಧಿಗೆ ವ್ಯಂಗ್ಯ
  • ಎಂಟು ವರ್ಷಗಳಲ್ಲಿ ಅರುಣಾಚಲ ಪ್ರದೇಶದಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯ ನಡೆದಿದೆ

ಹೈಲೈಟ್ಸ್‌ ಮಾತ್ರವೇ ಓದಲು ಆ್ಯಪ್‌ ಡೌನ್‌ಲೋಡ್‌ ಮಾಡಿ
Vijaya Karnataka Web rahul gandhi must take off his italian glasses see development says amit shah in arunchal pradesh
ರಾಹುಲ್ ಬಾಬಾ, ನಿಮ್ಮ ಇಟಲಿಯ ಕನ್ನಡಕ ತೆಗೆದಿಟ್ಟು ಅಭಿವೃದ್ಧಿ ಕಡೆ ನೋಡಿ: ಅಮಿತ್ ಶಾ ವ್ಯಂಗ್ಯ
ನಮ್ಸೈ: "ನಿಮ್ಮ ಇಟಲಿಯ ಕನ್ನಡಕವನ್ನು ತೆಗೆದು, ಅರುಣಾಚಲ ಪ್ರದೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಸಿಎಂ ಪೇಮ ಖಂಡು ನಡೆಸಿರುವ ಅಭಿವೃದ್ಧಿ ಕಾರ್ಯಗಳನ್ನು ನೋಡಿ" ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಕೇಂದ್ರ ಗೃಹ ಸಚಿವ ಅಮಿತ್ ಶಾ ಟೀಕಾಪ್ರಹಾರ ನಡೆಸಿದ್ದಾರೆ.
ಅರುಣಾಚಲ ಪ್ರದೇಶದ ನಮ್ಸೈ ಜಿಲ್ಲೆಯಲ್ಲಿ ಭಾನುವಾರ ಸುಮಾರು 1,000 ಕೋಟಿ ರೂ ಮೊತ್ತದ ವಿವಿಧ ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ರಕ್ತದ ನದಿಯನ್ನೇ ಹರಿಸುತ್ತೇವೆ ಎಂದವರಿಗೆ ಕಲ್ಲು ಎಸೆಯಲೂ ಧೈರ್ಯ ಇರಲಿಲ್ಲ..! ಅಮಿತ್ ಶಾ ವ್ಯಂಗ್ಯ..!

"ಕಳೆದ ಎಂಟು ವರ್ಷಗಳಲ್ಲಿ ಏನು ನಡೆದಿದೆ ಎಂದು ಕಾಂಗ್ರೆಸ್ ನಾಯಕರು ಕೇಳುತ್ತಾರೆ. ಈ ಜನರು ತಮ್ಮ ಕಣ್ಣುಗಳನ್ನು ಮುಚ್ಚಿಕೊಂಡು ಎಚ್ಚರವಾಗಿ ಇದ್ದಾರೆ ಎನಿಸುತ್ತದೆ. ರಾಹುಲ್ ಬಾಬ (ರಾಹುಲ್ ಗಾಂಧಿ) ತಮ್ಮ ಇಟಾಲಿಯನ್ ಕನ್ನಡಕವನ್ನು ತೆಗೆದು ಹಾಕಬೇಕು ಮತ್ತು ಪ್ರಧಾನಿ ಮೋದಿ ಹಾಗೂ ಸಿಎಂ ಪೇಮ ಖಂಡು ಅವರು ಮಾಡಿರುವ ಅಭಿವೃದ್ಧಿ ಕಾರ್ಯಗಳನ್ನು ನೀಡಬೇಕು" ಎಂದು ವ್ಯಂಗ್ಯವಾಡಿದರು.


"ಅರುಣಾಚಲ ಪ್ರದೇಶದಲ್ಲಿ ಮೂಲಸೌಕರ್ಯ ಸುಧಾರಣೆಗೆ, ಕಾನೂನು ಮತ್ತು ಸುವ್ಯವಸ್ಥೆ ಬಲಪಡಿಸಲು ಹಾಗೂ ಪ್ರವಾಸೋದ್ಯಮ ವಲಯದ ಉತ್ತೇಜನಕ್ಕೆ ಕಳೆದ ಎಂಟು ವರ್ಷಗಳಲ್ಲಿ ಅಪಾರ ಕೆಲಸಗಳನ್ನು ಕೈಗೊಳ್ಳಲಾಗಿದೆ. ಪೇಮ ಖಂಡು ಮತ್ತು ನರೇಂದ್ರ ಮೋದಿ ಅವರು ಕಳೆದ ಎಂಟು ವರ್ಷಗಳಲ್ಲಿ ಮಾಡಿರುವ ಅಭಿವೃದ್ಧಿ ಕೆಲಸಗಳನ್ನು ಹಿಂದಿನ 50 ವರ್ಷಗಳಲ್ಲಿ ಮಾಡಿರಲಿಲ್ಲ" ಎಂದು ಅಮಿತ್ ಶಾ ಹೇಳಿದರು.
ಸಾರ್ವಜನಿಕ ಕಾರ್ಯಕ್ರಮದಲ್ಲಿ ‘ಪ್ರಧಾನಮಂತ್ರಿ ಅಮಿತ್ ಶಾ’ ಎಂದು ಕರೆದ ಅಸ್ಸಾಂ ಸಿಎಂ!

ಗೃಹ ಸಚಿವ ಅಮಿತ್ ಶಾ ಅವರು ಅರುಣಾಚಲ ಪ್ರದೇಶದ ಎರಡು ದಿನಗಳ ಪ್ರವಾಸದಲ್ಲಿದ್ದಾರೆ. ಅವರು ರಾಜ್ಯದಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದಾರೆ. ಇದಕ್ಕೂ ಮುನ್ನ ಅವರು ನಮ್ಸೈ ಜಿಲ್ಲೆಯ ಗೋಲ್ಡ್ ಪಗೋಡಾಕ್ಕೆ ಭೇಟಿ ನೀಡಿದರು. ಈ ವೇಳೆ ಕೇಂದ್ರ ಸಚಿವ ಕಿರೆನ್ ರಿಜಿಜು ಹಾಗೂ ಸಿಎಂ ಪೇಮ ಖಂಡು ಹಾಜರಿದ್ದರು.

ಚೀನಾದ ಗಡಿ ಭಾಗಕ್ಕೆ ಇರುವ ರಾಜ್ಯದಲ್ಲಿನ ಭದ್ರತೆ ಮತ್ತು ಅಭಿವೃದ್ಧಿಯ ಪರಾಮರ್ಶೆ ಮಾಡಿದ ಬಳಿಕ ಸೇನೆ, ಇಂಡೋ-ಟಿಬೆಟ್ ಗಡಿ ಪೊಲೀಸ್, ಸೇವಾ ಆಯ್ಕೆ ಮಂಡಳಿ, ಅಸ್ಸಾಂ ರೈಫಲ್ಸ್, ಗಡಿ ರಸ್ತೆ ಸಂಸ್ಥೆ ಮತ್ತು ರಾಷ್ಟ್ರೀಯ ಹೆದ್ದಾರಿ ಮೂಲಸೌಕರ್ಯ ಅಭಿವೃದ್ಧಿ ನಿಗಮದ ಸಿಬ್ಬಂದಿ ಜತೆ ಸಂವಾದ ನಡೆಸಿದರು. ರಾಹುಲ್ ಗಾಂಧಿ ಅವರು ಪ್ರಸ್ತುತ ಬ್ರಿಟನ್ ಪ್ರವಾಸದಲ್ಲಿದ್ದಾರೆ.
ಲೇಖಕರ ಬಗ್ಗೆ
ಅಮಿತ್ ಎಂ.ಎಸ್
ವಿಜಯ ಕರ್ನಾಟಕದ ಡಿಜಿಟಲ್ ವಿಭಾಗದಲ್ಲಿ ಪತ್ರಕರ್ತ. 2009ರಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯವಾಗಿದ್ದಾರೆ. ದಿನಪತ್ರಿಕೆಗಳು ಮತ್ತು ವೆಬ್‌ ಪೋರ್ಟಲ್‌ಗಳಲ್ಲಿ ವರದಿಗಾರಿಕೆ, ಸಿನಿಮಾ ವರದಿಗಾರಿಕೆ, ಡೆಸ್ಕ್ ಹಾಗೂ ಜಿಲ್ಲಾ ಕರೆಸ್ಪಾಂಡೆಂಟ್ ಆಗಿ ಕೆಲಸ ಮಾಡಿದ ಅನುಭವ ಇವರಿಗಿದೆ. ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳು ಪ್ರಮುಖ ಆಸಕ್ತಿಯ ವಿಭಾಗಗಳು. ಮಾನವಾಸಕ್ತಿಯ ಹಾಗೂ ಸ್ಫೂರ್ತಿದಾಯಕ ಕಥನಗಳನ್ನು ನಿರೂಪಿಸುವುದು ವೃತ್ತಿಯಲ್ಲಿನ ನೆಚ್ಚಿನ ಸಂಗತಿ. ಪ್ರವಾಸ, ಕ್ರಿಕೆಟ್, ಓದು, ಕೃಷಿ ಇತರೆ ಇವರ ಆಸಕ್ತಿ ಮತ್ತು ಹವ್ಯಾಸಗಳು.... ಇನ್ನಷ್ಟು ಓದಿ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ