ಆ್ಯಪ್ನಗರ

ಹಿಂಸೆ ಸಮಸ್ಯೆಗೆ ಪರಿಹಾರವಲ್ಲ: ಉದ್ರಿಕ್ತ ಪ್ರತಿಭಟನಾಕಾರರಿಗೆ ರಾಹುಲ್ ಗಾಂಧಿ ಸಲಹೆ ಏನು?

ದೆಹಲಿಯ ಟ್ರ್ಯಾಕ್ಟರ್ ಪರೇಡ್‌ನಲ್ಲಿ ನಡೆದ ಹಿಂಸಾಚಾರವನ್ನು ಖಂಡಿಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಹಿಂಸೆ ಯಾವುದೇ ಸಮಸ್ಯೆಗೂ ಪರಿಹಾರವಲ್ಲ ಎಂಬುದನ್ನು ನಾವು ಮನಗಾಣಬೇಕು ಎಂದು ಸೂಚ್ಯವಾಗಿ ನುಡಿದಿದ್ದಾರೆ.

Vijaya Karnataka Web 26 Jan 2021, 4:32 pm

ಹೈಲೈಟ್ಸ್‌:

  • ದೆಹಲಿಯಲ್ಲಿ ನಿಯಂತ್ರಣಕ್ಕೆ ಬಾರದ ಹಿಂಸಾಚಾರ.
  • ಕೆಂಪು ಕೋಟೆ ಬಳಿಕ ಪೊಲೀಸರು-ರೈತರ ನಡುವೆ ಭಾರೀ ಜಟಾಪಟಿ.
  • ಹಿಂಸಾತ್ಮಕ ಪ್ರತಿಭಟನೆ ಖಂಡಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ.
  • ಹಿಂಸೆ ಯಾವುದೇ ಸಮಸ್ಯೆಗೆ ಪರಿಹಾರವಲ್ಲ ಎಂದ ರಾಹುಲ್ ಗಾಂಧಿ.
ಹೈಲೈಟ್ಸ್‌ ಮಾತ್ರವೇ ಓದಲು ಆ್ಯಪ್‌ ಡೌನ್‌ಲೋಡ್‌ ಮಾಡಿ
Vijaya Karnataka Web rahul gandhi
ಸಂಗ್ರಹ ಚಿತ್ರ
ಹೊಸದಿಲ್ಲಿ: ಕೇಂದ್ರದ ಕೃಷಿ ಕಾಯ್ದೆಗಳ ಜಾರಿ ವಿರೋಧಿಸಿ ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ನಡೆಯುತ್ತಿರುವ ರೈತರ ಟ್ರ್ಯಾಕ್ಟರ್ ಪರೇಡ್ ಹಿಂಸಾಚಾರಕ್ಕೆ ತಿರುಗಿದೆ ದೆಹಲಿಯ ಕೆಂಪು ಕೋಟೆ ಬಳಿ ಸದ್ಯ ಲಾಠಿ ಚಾರ್ಜ್ ನಡೆಯುತ್ತಿದ್ದು, ಕೆಂಪು ಕೋಟೆಗೆ ಮುತ್ತಿಗೆ ಹಾಕಿದ್ದ ರೈತರನ್ನು ಚದುರಿಸಲು ಪೊಲೀಸರು ಹರಸಾಹಸ ಪಡುತ್ತಿದ್ದಾರೆ.
ಈ ಮಧ್ಯೆ ಟ್ರ್ಯಾಕ್ಟರ್ ಪರೇಡ್‌ನಲ್ಲಿ ನಡೆದ ಹಿಂಸಾಚಾರವನ್ನು ಖಂಡಿಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಹಿಂಸೆ ಯಾವುದೇ ಸಮಸ್ಯೆಗೂ ಪರಿಹಾರವಲ್ಲ ಎಂಬುದನ್ನು ನಾವು ಮನಗಾಣಬೇಕು ಎಂದು ಸೂಚ್ಯವಾಗಿ ನುಡಿದಿದ್ದಾರೆ.

ಟ್ರ್ಯಾಕ್ಟರ್ ಪರೇಡ್ ದಾರಿ ತಪ್ಪೋದು ಬೇಡ, ವದಂತಿಗೆ ಕಿವಿಗೊಡಬೇಡಿ: ರೈತರಿಗೆ ಯೋಗೇಂದ್ರ ಯಾದವ್ ಮನವಿ

ಈ ಕುರಿತು ಟ್ವೀಟ್ ಮಾಡಿರುವ ರಾಹುಲ್ ಗಾಂಧಿ, ದೆಹಲಿಯಲ್ಲಿ ನಡೆಯುತ್ತಿರುವ ಬೆಳವಣಿಗೆಗಳು ಮನಸ್ಸಿಗೆ ನೋವುಂಟು ಮಾಡಿದೆ ಎಂದು ಖೇದ ವ್ಯಕ್ತಪಡಿಸಿದ್ದಾರೆ.


ಹಿಂಸೆ ಯಾವುದೇ ಸಮಸ್ಯೆಗೆ ಪರಿಹಾರ ನೀಡದು. ಹಿಂಸೆಯ ಮಾರ್ಗದಿಂದ ನಾವು ನಮ್ಮ ಗುರಿಯನ್ನು ತಲುಪುವುದೂ ಸಾಧ್ಯವಾಗುವುದಿಲ್ಲ. ಹೀಗಾಗಿ ಹಿಂಸೆಯನ್ನು ಕೈಬಿಟ್ಟು ನಮ್ಮ ಮೂಲ ಉದ್ದೇಶ ಈಡೇರಿಕೆಗಾಗಿ ಹೋರಾಡೋಣ ಎಂದು ರಾಹುಲ್ ಗಾಂಧಿ ಕರೆ ನೀಡಿದ್ದಾರೆ.

ಹಿಂಸಾಚಾರದಲ್ಲಿ ಯಾರಿಗೇ ಗಾಯಗಳಾದರೂ ದೇಶಕ್ಕೆ ನಷ್ಟವಾಗುತ್ತದೆ. ಹೀಗಾಗಿ ಹಿಂಸಾ ಮಾರ್ಗ ಕೈಬಿಟ್ಟು ಗುರಿ ತಲುಪಲು ಅಹಿಂಸೆಯ ಮಾರ್ಗ ಆಯ್ಕೆ ಮಾಡಿಕೊಳ್ಳುವಂತೆ ರಾಹುಲ್ ಗಾಂಧಿ ಪ್ರತಿಭಟನಾ ನಿರತ ರೈತರಿಗೆ ಸಲಹೆ ನೀಡಿದ್ದಾರೆ.

'ಕೇಂದ್ರಕ್ಕೆ ಸಂದೇಶ ರವಾನಿಸಿ ಆಯ್ತು, ನಾವಿನ್ನು ಹಿಂದಿರುಗುತ್ತೇವೆ': ಕೆಂಪುಕೋಟೆಯಲ್ಲಿ ರೈತ ಹೇಳಿದ್ದು!

ಇದೇ ವೇಳೆ ವಿವಾದಾತ್ಮಕ ಕೃಷಿ ಕಾಯ್ದೆಗಳನ್ನು ವಾಪಸ್ ಪಡೆಯುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಿರುವ ರಾಹುಲ್ ಗಾಂಧಿ, ಇಷ್ಟೆಲ್ಲಾ ಅನಾಹುತಗಳಿಗೆ ಕೇಂದ್ರದ ಭಂಡತನವೇ ಕಾರಣ ಎಂದು ಹರಿಹಾಯ್ದಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ