ಆ್ಯಪ್ನಗರ

ಅಧ್ಯಕ್ಷರಾಗಿ ರಾಹುಲ್ ಮುಂದುವರಿಕೆ, ಬದಲಾವಣೆ ಪ್ರಶ್ನೆ ಇಲ್ಲ: ರಣದೀಪ್ ಸುರ್ಜೇವಾಲಾ

ರಾಹುಲ್ ಗಾಂಧಿ ರಾಜೀನಾಮೆ ವಿಚಾರದಲ್ಲಿ ಮನಸ್ಸು ಬದಲಾಯಿಸುತ್ತಿಲ್ಲ. ಆದರೆ ಪಕ್ಷದ ಪ್ರಮುಖ ನಾಯಕರ ಪ್ರಕಾರ ಬದಲಾವಣೆಯ ಪ್ರಶ್ನೆಯೇ ಇಲ್ಲ.

Times Now 14 Jun 2019, 9:24 am
ಹೊಸದಿಲ್ಲಿ: ಲೋಕಸಭಾ ಚುನಾವಣೆಯಲ್ಲಾದ ಅವಮಾನಕರ ಸೋಲಿನ ಬಳಿಕ ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿ ಮುಂದುವರಿಯಲು ಬಯಸುವುದಿಲ್ಲ ಎಂದು ರಾಹುಲ್ ಗಾಂಧಿ ಹೇಳಿದ್ದರು. ಆದರೆ ಪಕ್ಷದ ಪ್ರಮುಖ ನಾಯಕರ ಪ್ರಕಾರ ಈಗ ಅವರಿಗೆ ಸೂಕ್ತವಾದ ವಿಕಲ್ಪವಿಲ್ಲ. ಹೀಗಾಗಿ ಬದಲಾವಣೆ ಪ್ರಶ್ನೆಯೇ ಇಲ್ಲ ಎನ್ನುತ್ತಿದ್ದಾರೆ.
Vijaya Karnataka Web Rahul Gandhi 1200 Image


ಪಕ್ಷದ ವರಿಷ್ಠ ನಾಯಕರ ಪ್ರಕಾರ, ಚುನಾವಣೆಯಲ್ಲಿ ಸೋಲು- ಗೆಲುವು ಸಾಮಾನ್ಯ. ತನ್ನ ರಾಜಕಾರಣದ ಯಾತ್ರೆಯಲ್ಲಿ ಕಾಂಗ್ರೆಸ್ ಬಹಳಷ್ಟು ಕಠಿಣ ಸಂದರ್ಭಗಳನ್ನು ಎದುರಿಸಿದೆ. ಅದೆಲ್ಲವನ್ನು ದಾಟಿ ಮುಂದುವರಿಯಲು ಪಕ್ಷ ಸಫಲವಾಗಿದೆ ಎಂದು ಪಕ್ಷದ ವರಿಷ್ಠ ನಾಯಕರು ಹೇಳುತ್ತಿದ್ದಾರೆ.

ಕಾಂಗ್ರೆಸ್ ವಕ್ತಾರ ರಣದೀಪ್ ಸುರ್ಜೇವಾಲಾ ಅವರು ಹೇಳುವ ಪ್ರಕಾರ, ರಾಹುಲ್ ಪಕ್ಷದ ಅಧ್ಯಕ್ಷರಾಗಿ ಮುಂದುವರಿಯಲಿದ್ದಾರೆ. ಅವರು ಅಧ್ಯಕ್ಷರಾಗಿದ್ದರು, ಮುಂದೆಯೂ ಅಧ್ಯಕ್ಷರಾಗಿ ನಮ್ಮನ್ನು ಮುನ್ನಡೆಸಲಿದ್ದಾರೆ.

ಹೊಸದಿಲ್ಲಿಯಲ್ಲಿ ಕಾಂಗ್ರೆಸ್ ಕೋರ್ ಕಮಿಟಿ ಸಭೆ ನಡೆದಿತ್ತು. ಆ ಸಭೆಯಲ್ಲಿ ಗಾಂಧಿ ಪರಿವಾರದ ಯಾರೊಬ್ಬರು ಕೂಡ ಭಾಗವಹಿಸಿರಲಿಲ್ಲ ಎಂಬುದಿಲ್ಲಿ ವಿಶೇಷ. ರಾಹುಲ್ ತಮ್ಮ ನಿರ್ಧಾರಕ್ಕೆ ಬದ್ಧರಾಗಿದ್ದರೆ, ಅವರ ಹೆಗಲಿಗಿರುವ ಹೊಣಗಾರಿಕೆಯನ್ನು ಯಾರಿಗೆ ವಹಿಸುವುದು ಎಂಬ ಬಗ್ಗೆ ಪಕ್ಷದಲ್ಲಿ ಗೊಂದಲವಿದೆ ಎಂದು ಹೇಳಲಾಗುತ್ತಿದೆ.

ಚುನಾವಣಾ ಸೋಲಿನ ಬೆನ್ನಲ್ಲಿ ಕಳೆದ ತಿಂಗಳು ನಡೆದ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆಯಲ್ಲಿ ರಾಹುಲ್ ಗಾಂಧಿ ಅವರು ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುವ ಪ್ರಸ್ತಾಪವನ್ನು ಮುಂದಿಟ್ಟಿದ್ದರು. ಚುನಾವಣಾ ಸೋಲಿಗೆ ನೈತಿಕ ಹೊಣೆ ನನ್ನದು ಎಂದವರು ಹೇಳಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ