ಆ್ಯಪ್ನಗರ

ರಾಜಸ್ಥಾನದ ಬಿಜೆಪಿ ಶಾಸಕಿ ಕೊರೊನಾ ಸೋಂಕಿಗೆ ಬಲಿ!

ಕಿರಣ್ ಮಹೇಶ್ವರಿ ಅವರಿಗೆ ನವೆಂಬರ್ ಮೊದಲ ವಾರದಲ್ಲಿಯೇ ಕೊರೊನಾ ಪಾಸಿಟಿವ್ ಕಾಣಿಸಿಕೊಂಡಿತ್ತು. ಸ್ವಲ್ಪ ದಿನ ಮನೆಯಲ್ಲಿಯೇ ಚಿಕಿತ್ಸೆ ಪಡೆಯುತ್ತಿದ್ದ ಅವರ ಆರೋಗ್ಯ ದಿನದಿಂದ ದಿನ ಕ್ಷೀಣಿಸತೊಡಗಿತ್ತು. ಈ ಹಿನ್ನೆಲೆ ಅವರನ್ನು ಗುರುಗ್ರಾಮದ ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು. ಆದರೆ ಇದೀಗ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ.

Vijaya Karnataka Web 30 Nov 2020, 11:21 am
ಜೈಪುರ: ಕೊರೊನಾ ಎಂಬ ಮಹಾಮಾರಿಗೆ ಈಗಾಗಲೇ ಹಲವು ರಾಜಕಾರಣಿಗಳು ಬಲಿಯಾಗಿದ್ದು ಇದೀಗ ರಾಜಸ್ಥಾನದ ಬಿಜೆಪಿ ಶಾಸಕಿಯೊಬ್ಬರು ಅಸುನೀಗಿದ್ದಾರೆ. ರಾಜಸ್ಥಾನದ ರಾಜಸಮಂದ್ ಕ್ಷೇತ್ರದ ಬಿಜೆಪಿ ಶಾಸಕಿ ಕಿರಣ್ ಮಹೇಶ್ವರಿ(59) ಮೃತಪಟ್ಟಿದ್ದಾರೆ. ಕೊರೊನಾ ಪಾಸಿಟಿವ್‌ ಆದ ಬಳಿಕ ಗುರುಗ್ರಾಮದ ಆಸ್ಪತ್ರೆಯಲ್ಲಿ ಶಾಸಕಿ ಚಿಕಿತ್ಸೆ ಪಡೆಯುತ್ತಿದ್ದರು, ಆದರೆ ಚಿಕಿತ್ಸೆ ಫಲಿಸದೆ ಅವರು ನಿಧನ ಹೊಂದಿದ್ದಾರೆ.
Vijaya Karnataka Web bjp mla kiran maheshwari


ಕಿರಣ್ ಮಹೇಶ್ವರಿ ಅವರಿಗೆ ನವೆಂಬರ್ ಮೊದಲ ವಾರದಲ್ಲಿಯೇ ಕೊರೊನಾ ಪಾಸಿಟಿವ್ ಕಾಣಿಸಿಕೊಂಡಿತ್ತು. ಸ್ವಲ್ಪ ದಿನ ಮನೆಯಲ್ಲಿಯೇ ಚಿಕಿತ್ಸೆ ಪಡೆಯುತ್ತಿದ್ದ ಅವರ ಆರೋಗ್ಯ ದಿನದಿಂದ ದಿನ ಕ್ಷೀಣಿಸತೊಡಗಿತ್ತು. ಈ ಹಿನ್ನೆಲೆ ಅವರನ್ನು ಗುರುಗ್ರಾಮದ ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು. ರಾಜಸಮಂದ್ ಕ್ಷೇತ್ರದಲ್ಲಿ ಕಿರಣ್ ಮಹೇಶ್ವರಿ ಅವರು ಮೂರು ಬಾರಿ ಶಾಸಕಿಯಾಗಿ ಆಯ್ಕೆಯಾಗಿದ್ದು, ಭಾರೀ ಜನಪ್ರಿಯತೆ ಗಳಿಸಿದ್ದರು. ಇದೀಗ ಅವರ ಸಾವು ಅವರ ಬೆಂಬಲಿಗರಿಗೆ ಘಾಸಿ ಉಂಟುಮಾಡಿದೆ.

ಕೊರೊನಾ ಲಸಿಕೆ ಪಡೆದ ಬಳಿಕ ಆರೋಗ್ಯ ಸರಿಯಿಲ್ಲ ಎಂದು ಸುಳ್ಳು ಹೇಳಿದ ವ್ಯಕ್ತಿ ವಿರುದ್ಧ 100 ಕೋಟಿ ಮಾನನಷ್ಟ ಹೂಡಿದ ಸೇರಂ ಇನ್‌ಸ್ಟಿಟ್ಯೂಟ್‌

ಇನ್ನು ಕಿರಣ್ ಮಹೆಶ್ವರಿ ನಿಧನಕ್ಕೆ ಪ್ರಧಾನಿ ಮೋದಿ, ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಸೇರಿ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ