ಜೈಪುರ: ಲೋಕಸಭೆ ಚುನಾವಣೆ ಸೋಲಿನ ಹಿನ್ನೆಲೆಯಲ್ಲಿ ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ರಾಹುಲ್ ಗಾಂಧಿ ನೀಡಿರುವ ರಾಜೀನಾಮೆಯನ್ನು ಅಂಗೀಕರಿಸಬಾರದು ಎಂದು ರಾಜಸ್ಥಾನ ಪ್ರದೇಶ ಕಾಂಗ್ರೆಸ್ ಸಮಿತಿಯು ಅಖಿಲ ಭಾರತ ಕಾಂಗ್ರೆಸ್ ಸಮಿತಿಯನ್ನು ಆಗ್ರಹಿಸಿದೆ. ಲೋಕಸಭೆ ಚುನಾವಣೆ ಫಲಿತಾಂಶದ ಪರಾಮರ್ಶೆಗೆ ಸಭೆ ಸೇರಿದ್ದ ಪ್ರದೇಶ ಕಾಂಗ್ರೆಸ್ ಸಮಿತಿ ಕಾರ್ಯಕಾರಿಣಿಯು, ಪಕ್ಷದಲ್ಲಿ ತೀವ್ರ ಸ್ವರೂಪದ ಸಾಂಸ್ಥಿಕ ಬದಲಾವಣೆ ಮಾಡುವ ಅಧಿಕಾರವನ್ನು ರಾಹುಲ್ ಗಾಂಧಿಯವರಿಗೆ ನೀಡುವ ನಿರ್ಣಯವನ್ನೂ ಕೈಗೊಂಡಿತು. ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಹಾಗೂ ರಾಜಸ್ಥಾನ ಕಾಂಗ್ರೆಸ್ ಅಧ್ಯಕ್ಷರೂ ಆಗಿರುವ ಉಪ ಮುಖ್ಯಮಂತ್ರಿ ಸಚಿನ್ ಪೈಲಟ್ ಅವರೂ ಸಭೆಯಲ್ಲಿ ಭಾಗವಹಿಸಿದ್ದರು. ರಾಜ್ಯ ಕಾಂಗ್ರೆಸ್ನಲ್ಲಿರುವ ಆಂತರಿಕ ಭಿನ್ನಾಭಿಪ್ರಾಯಗಳನ್ನು ಸೌಹಾರ್ದವಾಗಿ ಬಗೆಹರಿಸಬೇಕು ಎಂದು ಹಿರಿಯ ಶಾಸಕರು ಸಲಹೆ ಮಾಡಿದರು.
ರಾಹುಲ್ ರಾಜೀನಾಮೆ ತಿರಸ್ಕರಿಸಲು ರಾಜಸ್ಥಾನ ಕಾಂಗ್ರೆಸ್ ಆಗ್ರಹ
ಲೋಕಸಭೆ ಚುನಾವಣೆ ಫಲಿತಾಂಶದ ಪರಾಮರ್ಶೆಗೆ ಸಭೆ ಸೇರಿದ್ದ ಪ್ರದೇಶ ಕಾಂಗ್ರೆಸ್ ಸಮಿತಿ ಕಾರ್ಯಕಾರಿಣಿಯು, ಪಕ್ಷದಲ್ಲಿ ತೀವ್ರ ಸ್ವರೂಪದ ಸಾಂಸ್ಥಿಕ ಬದಲಾವಣೆ ಮಾಡುವ ಅಧಿಕಾರವನ್ನು ರಾಹುಲ್ ಗಾಂಧಿಯವರಿಗೆ ನೀಡುವ ನಿರ್ಣಯವನ್ನೂ ಕೈಗೊಂಡಿತು
PTI 30 May 2019, 5:00 am