ಆ್ಯಪ್ನಗರ

"ಕಾಂಗ್ರೆಸ್‌ನಲ್ಲಿ ಸಾಮರ್ಥ್ಯಕ್ಕೆ ಬೆಲೆ ಇಲ್ಲ": ರಾಜಸ್ಥಾನದಲ್ಲಿ ಪೈಲಟ್‌ ವಜಾಕ್ಕೆ ಸಿಂಧಿಯಾ ಟೀಕೆ

ರಾಜಸ್ಥಾನದಲ್ಲಿ ಸಚಿನ್‌ ಪೈಲಟ್‌ರನ್ನು ಡಿಸಿಎಂ ಸ್ಥಾನದಿಂದ ಕೆಳಗಿಳಿಸಿದ್ದಕ್ಕೆ ಬಿಜೆಪಿ ನಾಯಕ ಜ್ಯೋತಿರಾಧಿತ್ಯ ಸಿಂಧಿಯಾ ಟೀಕಿಸಿದ್ದು, ಕಾಂಗ್ರೆಸ್‌ನಲ್ಲಿ ಸಾಮರ್ಥ್ಯಕ್ಕೆ ಬೆಲೆ ಇಲ್ಲ ಎಂದು ಹೇಳಿದ್ದಾರೆ. ಇದು ರಾಜಸ್ಥಾನ ಮಾತ್ರವಲ್ಲ ಎಲ್ಲ ರಾಜ್ಯಗಳಲ್ಲಿ ಕಂಡುಬರುತ್ತಿರುವ ದೃಶ್ಯ ಎಂದು ಜರಿದಿದ್ದಾರೆ.

ANI 14 Jul 2020, 7:14 pm
ಹೊಸದಿಲ್ಲಿ: ರಾಜಸ್ಥಾನದಲ್ಲಿ ಸೃಷ್ಟಿಯಾದ ಕಾಂಗ್ರೆಸ್‌ ಬಿಕ್ಕಟ್ಟಿಗೆ ಸಂಬಂಧಿಸಿದಂತೆ ಕೆಲ ದಿನಗಳ ಹಿಂದಷ್ಟೇ ಕಾಂಗ್ರೆಸ್‌ ತೊರೆದು ಬಿಜೆಪಿ ಸೇರಿದ್ದ ಜ್ಯೋತಿರಾಧಿತ್ಯ ಸಿಂಧಿಯಾ ಮತ್ತೊಮ್ಮೆ ಪ್ರತಿಕ್ರಿಯಿಸಿದ್ದು, ಸದ್ಯದ ಪರಿಸ್ಥಿತಿಯಲ್ಲಿ ಕಾಂಗ್ರೆಸ್ ಪಕ್ಷದಲ್ಲಿ ಸಾಮರ್ಥ್ಯಕ್ಕೆ ಬೆಲೆಯಿಲ್ಲ ಎಂದು ಟೀಕಿಸಿದ್ದಾರೆ.
Vijaya Karnataka Web rajasthan congress crisis there is no place for ability in the congress party says jyotiraditya scindia
"ಕಾಂಗ್ರೆಸ್‌ನಲ್ಲಿ ಸಾಮರ್ಥ್ಯಕ್ಕೆ ಬೆಲೆ ಇಲ್ಲ": ರಾಜಸ್ಥಾನದಲ್ಲಿ ಪೈಲಟ್‌ ವಜಾಕ್ಕೆ ಸಿಂಧಿಯಾ ಟೀಕೆ


ಸಚಿನ್‌ ಪೈಲಟ್‌ ಅವರನ್ನು ರಾಜಸ್ಥಾನ ಕಾಂಗ್ರೆಸ್‌ ಪಕ್ಷದ ಅಧ್ಯಕ್ಷ ಹಾಗೂ ಉಪ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಿರುವುದನ್ನು ಟೀಕಿಸಿದ ಬಿಜೆಪಿ ನಾಯಕ, ಕಾಂಗ್ರೆಸ್ ಪಕ್ಷದಲ್ಲಿ ಸದ್ಯದ ಪರಿಸ್ಥಿತಿಯಲ್ಲಿ ಸಾಮರ್ಥ್ಯಕ್ಕೆ ಬೆಲೆಯಿಲ್ಲ. ಇದು ಎಲ್ಲ ರಾಜ್ಯಗಳಲ್ಲೂ ಕಂಡುಬರುತ್ತಿದೆ ಎಂದು ಹೇಳಿದ್ದಾರೆ.‌

ಕಳೆದ ಮೂರು ದಿನಗಳಿಂದ‌ ರಾಜಸ್ಥಾನದಲ್ಲಿ ಅಶೋಕ್‌ ಗೆಹ್ಲೋಟ್‌ ಹಾಗೂ ಸಚಿನ ಪೈಲಟ್‌ ನಡುವಿನ ಭಿನ್ನಮತ ತಾರಕಕ್ಕೇರಿದೆ. ಈ ಕುರಿತು ಭಾನುವಾರವೂ ಟ್ವೀಟ್‌ ಮೂಲಕ ಪ್ರತಿಕ್ರಿಯಿಸಿದ್ದ ಸಿಂಧಿಯಾ, ಸಚಿನ್‌ ಪೈಲಟ್‌ಗೆ ಬೆಂಬಲ ವ್ಯಕ್ತಪಡಿಸಿ ಕಾಂಗ್ರೆಸ್‌ ನಾಯಕತ್ವದ ವಿರುದ್ಧ ಕಿಡಿಕಾರಿದ್ದರು.

'ಸಚಿನ್‌ ಪೈಲಟ್‌ ಕಡೆಗಣನೆಯಿಂದ ಬೇಸರವಾಗಿದೆ': ಉರಿಯೋ ಬೆಂಕಿಗೆ ತುಪ್ಪ ಸುರಿದ್ರಾ ಸಿಂಧಿಯಾ..?

ಭಾನುವಾರ ಮಾಡಿದ ಟ್ವೀಟ್‌ನಲ್ಲಿ, ರಾಜಸ್ಥಾನ ಸಿಎಂ ಅಶೋಕ್‌ ಗೆಹ್ಲೋಟ್‌ ಕೂಡ ನನ್ನ ಹಿಂದಿನ ಸಹೋದ್ಯೋಗಿ ಸಚಿನ್ ಪೈಲಟ್‌ ಅವರನ್ನು ಕಡೆಗಣನೆ ಮಾಡುತ್ತಿರುವುದು, ಕಿರುಕುಳ ನೀಡುತ್ತಿರುವುದನ್ನು ನೋಡಿ ದುಃಖವಾಗಿದೆ. ಕಾಂಗ್ರೆಸ್‌ನಲ್ಲಿ ಪ್ರತಿಭೆ ಮತ್ತು ಸಾಮರ್ಥ್ಯಕ್ಕೆ ಬೆಲೆಯಿಲ್ಲ ಎಂಬುದು ಮತ್ತೊಮ್ಮೆ ಸಾಬೀತಾಗಿದೆ ಎಂದು ಹೇಳಿದ್ದರು.

ಮಧ್ಯಪ್ರದೇಶದ ನಂತರ ರಾಜಸ್ಥಾನದಲ್ಲಿ ಕಾಂಗ್ರೆಸ್‌ಗೆ ಬಿಗ್‌ ಶಾಕ್‌..! ಸಿಂಧಿಯಾ ಹಾದಿಯಲ್ಲಿ ನಡೀತಾರಾ ಪೈಲಟ್‌..?

ಇನ್ನು, ಸಚಿನ್ ಪೈಲಟ್‌ ಬಂಡಾಯ ತಣ್ಣಗಾಗದಿರುವುದಕ್ಕೆ ಕಾಂಗ್ರೆಸ್‌‌ ಹೈಕಮಾಂಡ್ ಸಚಿನ್‌ ಪೈಲಟ್‌ರನ್ನು ಪ್ರದೇಶ ಕಾಂಗ್ರೆಸ್‌ ಸಮಿತಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಿ ಆದೇಶ ಹೊರಡಿಸಿತ್ತು. ಕಾಂಗ್ರೆಸ್‌ ಹೈಕಮಾಂಡ್‌ನ ಈ ನಿರ್ಧಾರದಿಂದ ರಾಜಸ್ಥಾನದಲ್ಲಿ ಸರಕಾರ ಪತನವಾಗುವ ಮುನ್ಸೂಚನೆ ಕಾಣುತ್ತಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ