ಆ್ಯಪ್ನಗರ

ಸಚಿನ್ ಪೈಲಟ್‌ರನ್ನು ಹುದ್ದೆಯಿಂದ ಕೆಳಗಿಳಿಸುವ ಗೆಹ್ಲೋಟ್ ತೀರ್ಮಾನಕ್ಕೆ ರಾಜ್ಯಪಾಲರಿಂದ ಅಸ್ತು!

ಸಚಿನ್ ಪೈಲಟ್ ಅವರನ್ನು ರಾಜಸ್ಥಾನ ಉಪ ಮುಖ್ಯಮಂತ್ರಿ ಹುದ್ದೆಯಿಂದ ಕೆಳಗಿಳಿಸುವ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರ ತೀರ್ಮಾನಕ್ಕೆ ರಾಜ್ಯಪಾಲ ಕಾಲರಾಜ್ ಮಿಶ್ರಾ ಅಂಕಿತ ಹಾಕಿದ್ದಾರೆ.

Vijaya Karnataka Web 14 Jul 2020, 3:23 pm
ಜೈಪುರ್: ಮಹತ್ವದ ಬೆಳವಣಿಗೆಯೊಂದರಲ್ಲಿ ಸಚಿನ್ ಪೈಲಟ್ ಅವರನ್ನು ರಾಜಸ್ಥಾನ ಉಪ ಮುಖ್ಯಮಂತ್ರಿ ಹುದ್ದೆಯಿಂದ ಕೆಳಗಿಳಿಸುವ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರ ತೀರ್ಮಾನಕ್ಕೆ ರಾಜ್ಯಪಾಲ ಕಾಲರಾಜ್ ಮಿಶ್ರಾ ಅಂಕಿತ ಹಾಕಿದ್ದಾರೆ.
Vijaya Karnataka Web Ashok Gehlot
ರಾಜ್ಯಪಾಲರನ್ನು ಭೇಟಿಯಾಧ ಅಶೋಕ್ ಗೆಹ್ಲೋಟ್


ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯ ಬಳಿಕ ರಾಜಭವನಕ್ಕೆ ತೆರಳಿ ರಾಜ್ಯಪಾಲರನ್ನು ಭೇಟಿಯಾದ ಗೆಹ್ಲೋಟ್, ಪೈಲಟ್ ಅವರನ್ನು ಹುದ್ದೆಯಿಂದ ಕೆಳಗಿಳಿಸುವ ತೀರ್ಮಾನವನ್ನು ಮನವರಿಕೆ ಮಾಡಿಕೊಟ್ಟರು.

ಉಪ ಮುಖ್ಯಮಂತ್ರಿ ಹುದ್ದೆಯಿಂದ ಸಚಿನ್ ಪೈಲಟ್‌ ಔಟ್: ಅಧ್ಯಕ್ಷ ಸ್ಥಾನವನ್ನೂ ಕಿತ್ತುಕೊಂಡ ಕಾಂಗ್ರೆಸ್!

ಗೆಹ್ಲೋಟ್ ತೀರ್ಮಾನಕ್ಕೆ ಒಪ್ಪಿಗೆ ಸೂಚಿಸಿದ ರಾಜ್ಯಪಾಲ ಕಾಲರಾಜ್ ಮಿಶ್ರಾ, ವಿಶ್ವೇಂದರ್ ಸಿಂಗ್ ಹಾಗೂ ರಮೇಶ್ ಮೀನಾ ಅವರನ್ನೂ ಸಚಿವ ಸ್ಥಾನದಿಂದ ವಜಾಗೊಳಿಸಲು ಸಮ್ಮತಿ ಸೂಚಿಸಿದರು.


ಇನ್ನು ಪೈಲಟ್ ಅವರನ್ನು ರಾಜಸ್ಥಾನ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಸ್ಥಾನದಿಂದಲೂ ಕೆಳಗಿಳಿಸಲಾಗಿದ್ದು, ಅವರ ಜಾಗಕ್ಕೆ ಗೋವಿಂದ್ ಸಿಂಗ್ ದೋತಾಸ್ರಾ ಅವರನ್ನು ನೇಮಕ ಮಾಡಲಾಗಿದೆ.

ಸತ್ಯವನ್ನು ಗೊಂದಲದಲ್ಲಿಡಬಹುದೇ ಹೊರತು ಸೋಲಿಸಲಾಗದು: ಸಚಿನ್ ಪೈಲಟ್ ಪ್ರತಿಕ್ರಿಯೆ!

ಈ ಎಲ್ಲ ಬೆಳವಣಿಗೆಗಳಿಗೆ ಅಷ್ಟೇ ಚುರುಕಾಗಿ ಪ್ರತಿಕ್ರಿಯೆ ನೀಡಿರುವ ಸಚಿನ್ ಪೈಲಟ್, ಸತ್ಯವನ್ನು ಗೊಂದಲದಲ್ಲಿಡಬಹುದೇ ಹೊರತು ಸೋಲಿಸಲು ಆಗುವುದಿಲ್ಲ ಎಂದು ಮಾರ್ಮಿಕವಾಗಿ ಪ್ರತಿಕ್ರಿಯೆ ನೀಡಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ