ಆ್ಯಪ್ನಗರ

ಗೋಡೆ ಮೇಲೆ ಮೂತ್ರ ಮಾಡಿ 'ಪರಂಪರೆ' ಎಂದ ರಾಜಸ್ಥಾನ ಸಚಿವ

ರಾಜಸ್ಥಾನದ ಸಚಿವ ಶಂಭು ಸಿಂಗ್ ಖತೇಸರ್ ಸಾರ್ವಜನಿಕ ಸ್ಥಳದ ಗೋಡೆಯೊಂದರ ಮೇಲೆ ಮೂತ್ರ ವಿಸರ್ಜನೆ ಮಾಡುತ್ತಿರುವ ಚಿತ್ರ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

Navbharat Times 8 Oct 2018, 3:22 pm
[This story originally published in Navbharat Times on Oct 08, 2018]
Vijaya Karnataka Web singh


ಅಜ್ಮೀರ್:
ರಾಜಸ್ಥಾನದ ಸಚಿವ ಶಂಭು ಸಿಂಗ್ ಖತೇಸರ್ ಸಾರ್ವಜನಿಕ ಸ್ಥಳದ ಗೋಡೆಯೊಂದರ ಮೇಲೆ ಮೂತ್ರ ವಿಸರ್ಜನೆ ಮಾಡುತ್ತಿರುವ ಚಿತ್ರ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಇದಕ್ಕೆ ಪ್ರತಿಕ್ರಿಯೆ ನೀಡಿರುವ ಸಚಿವರು, ತೆರೆದ ಪ್ರದೇಶದಲ್ಲಿ ಮೂತ್ರ ವಿಸರ್ಜನೆ ಮಾಡುವುದು ಹಳೆಪರಂಪರೆ ಎಂದು ಹೇಳುವ ಮೂಲಕ ಮತ್ತೊಂದು ವಿವಾದವನ್ನು ಮೈಮೇಲೆ ಎಳೆದುಕೊಂಡಿದ್ದಾರೆ.

ಸಚಿವರು ಮೂತ್ರ ವಿಸರ್ಜನೆ ಮಾಡಿದ ಸ್ಥಳದ ಪಕ್ಕದಲ್ಲಿಯೇ ಬಿಜೆಪಿ ಪಕ್ಷದ ರ‍್ಯಾಲಿಯೊಂದನ್ನು ಆಯೋಜಿಸಲಾಗಿತ್ತು ಎಂದು ಹೇಳಲಾಗುತ್ತಿದೆ.

ಸಾಮಾಜಿಕ ಜಾಲತಾಣಗಳಲ್ಲಿ ಈ ಚಿತ್ರ ವೈರಲ್ ಆಗುತ್ತಿದ್ದಂತೆ ನೆಟ್ಟಿಗರು ಪ್ರಧಾನಿ ನರೇಂದ್ರ ಮೋದಿ ಅವರ ಸ್ವಚ್ಛ ಭಾರತ ಅಭಿಯಾನವನ್ನು ಪ್ರಶ್ನಿಸತೊಡಗಿದ್ದಾರೆ.

ಬಯಲು ಪ್ರದೇಶದಲ್ಲಿ ಬಹಿರ್ದೆಸೆ ನಡೆಸುವುದು ಹಲವಾರು ರೋಗಗಳಿಗೆ ಕಾರಣವಾಗುತ್ತದೆ. ಆದರೆ, ಮೂತ್ರ ವಿಸರ್ಜನೆಯಿಂದ ಯಾವುದೇ ಸಮಸ್ಯೆ ಉಂಟಾಗುವುದಿಲ್ಲ ಎಂದಿರು ಸಚಿವ ಶಂಭು ಸಿಂಗ್, 'ನಾನು ಮೂತ್ರ ವಿಸರ್ಜಿಸಿದ ಸಮೀಪ ಯಾವುದೇ ಶೌಚಾಲಯಗಳು ಇರಲಿಲ್ಲ. ಅನಿವಾರ್ಯವಾಗಿ ತೆರದ ಪ್ರದೇಶದಲ್ಲಿ ಮೂತ್ರ ವಿಸರ್ಜಿಸಬೇಕಾಯಿತು ಎಂದು ನುನುಚಿಕೊಂಡಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ