ಆ್ಯಪ್ನಗರ

ರಾಜೀವ್‌ ಗಾಂಧಿ ಹಂತಕರ ಬಿಡುಗಡೆಗೆ ತಮಿಳುನಾಡು ಸಚಿವ ಸಂಪುಟ ಶಿಫಾರಸು

ಭಾನುವಾರ ನಡೆದ ಸಭೆಯಲ್ಲಿ ತೀರ್ಮಾನ

Vijaya Karnataka Web 9 Sep 2018, 7:27 pm
ಚೆನ್ನೈ: ದಿವಂಗತ ರಾಜೀವ್‌ ಗಾಂಧಿ ಹಂತಕರ ಬಿಡುಗಡೆಗೆ ಶಿಫಾರಸು ಮಾಡಲು ತಮಿಳುನಾಡು ಸಚಿವ ಸಂಪುಟ ನಿರ್ಧರಿಸಿದೆ.
Vijaya Karnataka Web ರಾಜೀವ್‌ ಗಾಂಧಿ
ರಾಜೀವ್‌ ಗಾಂಧಿ


ತಮಿಳುನಾಡು ಮುಖ್ಯಮಂತ್ರಿ ಎಡಪ್ಪಾಡಿ ಪಳನಿಸ್ವಾಮಿ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಕುರಿತು ನಿರ್ಧಾರ ಕೈಗೊಳ್ಳಲಾಗಿದೆ.

ಸಂವಿಧಾನದ 161ನೇ ವಿಧಿಯನ್ವಯ ರಾಜೀವ್‌ ಹಂತಕರನ್ನು ಬಿಡುಗಡೆ ಮಾಡಲು ಶಿಫಾರಸು ಮಾಡಲು ನಿರ್ಧರಿಸಲಾಯಿತು.

ಈ ವಿಷಯವನ್ನು ತಮಿಳುನಾಡು ಮೀನುಗಾರಿಕೆ ಸಚಿವ ಡಿ. ಜಯಕುಮಾರ್‌ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.


ಏಳು ಹಂತಕರನ್ನು ಬಿಡುಗಡೆ ಮಾಡಲು ಶಿಫಾರಸು ಮಾಡಲಾಯಿತು. ರಾಜ್ಯಪಾಲರು ಈ ಕುರಿತು ಸರಕಾರದ ನಿರ್ಧಾರವನ್ನು ಅನುಷ್ಠಾನಕ್ಕೆ ತರಲಿದ್ದಾರೆ ಎಂದು ಸಚಿವರು ತಿಳಿಸಿದರು.

ರಾಜೀವ್ ಹಂತಕರಾದ ನಳಿನಿ ಶ್ರೀಹರಿಹರನ್‌, ಮುರುಗನ್‌, ಪೆರಾರಿವಾಲನ್‌, ರಾಬರ್ಟ್‌ ಪಯಾಸ್‌, ರವಿಚಂದ್ರನ್‌, ಸಂತಾನ್‌, ಜಯಕುಮಾರ್‌ ಕಳೆದ 27 ವರ್ಷಗಳಿಂದ ಜೈಲು ವಾಸ ಅನುಭವಿಸುತ್ತಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ