ಆ್ಯಪ್ನಗರ

ರಾಜನಾಥ್‌ಗೆ ಬಿಜೆಪಿ ಪ್ರಣಾಳಿಕೆ ಸಮಿತಿ ಸಾರಥ್ಯ

ವಿತ್ತ ಸಚಿವ ಅರುಣ್‌ ಜೇಟ್ಲಿ ಅವರಿಗೆ ಹೆಚ್ಚುವರಿಯಾಗಿ ಪ್ರಚಾರ ವಿಭಾಗದ ಸಾರಥ್ಯವನ್ನೂ ವಹಿಸಲಾಗಿದೆ. ಕೇಂದ್ರ ಸಚಿವ ನಿತಿನ್‌ ಗಡ್ಕರಿ ಅವರಿಗೆ 'ಸಾಮಾಜಿಕ ಮತ್ತು ಸ್ವಯಂ ಸೇವಾ ಸಂಸ್ಥೆಗಳ' ಸಮಿತಿಯ ಮುಖ್ಯಸ್ಥರ ಹೊಣೆಗಾರಿಕೆ ನೀಡಲಾಗಿದೆ.

Vijaya Karnataka Web 6 Jan 2019, 9:30 pm
ಹೊಸದಿಲ್ಲಿ: 2019ರ ಲೋಕಸಭೆ ಮಹಾಚುನಾವಣೆಗೆ ಸಿದ್ಧತೆ ಚುರುಕುಗೊಳಿಸಿರುವ ಬಿಜೆಪಿ, ಪ್ರಣಾಳಿಕೆ ಸೇರಿದಂತೆ ವಿವಿಧ ಅಂಶಗಳತ್ತ ಗಮನ ಕೇಂದ್ರೀಕರಿಸಲು 17 ಪ್ರತ್ಯೇಕ ಸಮಿತಿಗಳನ್ನು ರಚಿಸಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ ಈ ಸಮಿತಿಯ ಮುಖ್ಯಸ್ಥರನ್ನು ಭಾನುವಾರ ಅಂತಿಮಗೊಳಿಸಿದ್ದಾರೆ.
Vijaya Karnataka Web ರಾಜ್‌ನಾಥ್‌ ಸಿಂಗ್‌
ರಾಜ್‌ನಾಥ್‌ ಸಿಂಗ್‌


20 ಸದಸ್ಯರ ಬಿಜೆಪಿ ಪ್ರಣಾಳಿಕೆ (ಸಂಕಲ್ಪ ಪತ್ರ) ಸಮಿತಿಯ ಮುಖ್ಯಸ್ಥರನ್ನಾಗಿ ಕೇಂದ್ರ ಗೃಹ ಸಚಿವ ರಾಜನಾಥ್‌ ಸಿಂಗ್‌ ಅವರನ್ನು ನೇಮಿಸಲಾಗಿದೆ.

ಕೇಂದ್ರ ಸಚಿವರಾದ ಅರುಣ್‌ ಜೇಟ್ಲಿ, ನಿರ್ಮಲಾ ಸೀತಾರಾಮನ್‌, ರವಿಶಂಕರ್‌ ಪ್ರಸಾದ್‌, ಪಿಯೂಶ್‌ ಗೋಯಲ್‌, ಮುಖ್ತಾರ್‌ ಅಬ್ಬಾಸ್‌ ನಕ್ವಿ, ಮಧ್ಯ ಪ್ರದೇಶ ಮಾಜಿ ಸಿಎಂ ಶಿವರಾಜ್‌ ಸಿಂಗ್‌ ಚೌಹಾಣ್‌ ಸಹ ಈ ಸಮಿತಿಯ ಸದಸ್ಯರಾಗಿದ್ದು, ಪ್ರಣಾಳಿಕೆ ಸಿದ್ಧಪಡಿಸುವಲ್ಲಿ ರಾಜನಾಥ್‌ ಸಿಂಗ್‌ ಅವರಿಗೆ ನೆರವಾಗಲಿದ್ದಾರೆ.

ಈ ಮಧ್ಯೆ, ವಿತ್ತ ಸಚಿವ ಅರುಣ್‌ ಜೇಟ್ಲಿ ಅವರಿಗೆ ಹೆಚ್ಚುವರಿಯಾಗಿ ಪ್ರಚಾರ ವಿಭಾಗದ ಸಾರಥ್ಯವನ್ನೂ ವಹಿಸಲಾಗಿದೆ.

ಕೇಂದ್ರ ಸಚಿವ ನಿತಿನ್‌ ಗಡ್ಕರಿ ಅವರಿಗೆ 'ಸಾಮಾಜಿಕ ಮತ್ತು ಸ್ವಯಂ ಸೇವಾ ಸಂಸ್ಥೆಗಳ' ಸಮಿತಿಯ ಮುಖ್ಯಸ್ಥರ ಹೊಣೆಗಾರಿಕೆ ನೀಡಲಾಗಿದೆ. ಚುನಾವಣಾ ಸಾಹಿತ್ಯ ರಚನೆ ಮಾಡುವ ಸಮಿತಿಯ ಜವಾಬ್ದಾರಿಯನ್ನು ಸಚಿವೆ ಸುಷ್ಮಾ ಸ್ವರಾಜ್‌ಗೆ ವಹಿಸಲಾಗಿದೆ.

ರವಿಶಂಕರ್‌ ಪ್ರಸಾದ್‌ ಅವರು ಪಕ್ಷದ ಮಾಧ್ಯಮ ಸಮಿತಿಯ ಮುಖ್ಯಸ್ಥರಾಗಿಯೂ ಅವಳಿ ಜವಾಬ್ದಾರಿಗಳನ್ನು ನಿರ್ವಹಿಸಲಿದ್ದಾರೆ.

ಕೇಂದ್ರದ ಮತ್ತೊಬ್ಬ ಸಚಿವ ಪ್ರಕಾಶ್‌ ಜಾವಡೇಕರ್‌ ಅವರಿಗೆ ಬುದ್ಧಿಜೀವಿಗಳ ಸಭೆಗಳನ್ನು ಆಯೋಜಿಸುವ ಸಮಿತಿಯ ನೇತೃತ್ವ ನೀಡಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ