ಆ್ಯಪ್ನಗರ

ರಾಜ್ಯಸಭೆ ಉಪ ಸಭಾಪತಿಯಾಗಿ NDA ಅಭ್ಯರ್ಥಿ ಹರಿವಂಶ್‌ ನಾರಾಯಣ್‌ ಸಿಂಗ್‌ ಆಯ್ಕೆ

ರಾಜ್ಯಸಭೆಯ ಉಪ ಸಭಾಪತಿ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಬಿ.ಕೆ.ಹರಿಪ್ರಸಾದ್ ವಿರುದ್ಧ ಆಡಳಿತಾರೂಢ ಎನ್‌ಡಿಎ ಅಭ್ಯರ್ಥಿ ಜೆಡಿಯು ಸಂಸದ ಹರಿವಂಶ್‌ ನಾರಾಯಣ್‌ ಸಿಂಗ್‌ ಜಯ ಸಾಧಿಸಿದ್ದಾರೆ

Times Now 9 Aug 2018, 12:44 pm
ಹೊಸದಿಲ್ಲಿ: ರಾಜ್ಯಸಭೆಯ ಉಪ ಸಭಾಧ್ಯಕ್ಷರ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಬಿ.ಕೆ.ಹರಿಪ್ರಸಾದ್ ವಿರುದ್ಧ ಆಡಳಿತಾರೂಢ ಎನ್‌ಡಿಎ ಅಭ್ಯರ್ಥಿ ಜೆಡಿಯು ಸಂಸದ ಹರಿವಂಶ್‌ ನಾರಾಯಣ್‌ ಸಿಂಗ್‌ ಜಯ ಸಾಧಿಸಿದ್ದಾರೆ.
Vijaya Karnataka Web nda


ಕಾಂಗ್ರೆಸ್ ಅಭ್ಯರ್ಥಿ ಬಿ.ಕೆ.ಹರಿಪ್ರಸಾದ್ 105 ಮತ ಪಡೆದಿದ್ದರೆ, ಎನ್‌ಡಿಎ ಅಭ್ಯರ್ಥಿ ಹರಿವಂಶ್‌ ನಾರಾಯಣ್‌ ಸಿಂಗ್‌ 125 ಮತ ಪಡೆಯುವ ಮೂಲಕ ಗೆಲುವಿನ ನಗೆ ಬೀರಿದ್ದಾರೆ.

ಕುರಿಯನ್‌ ಅವರ ನಿವೃತ್ತಿಯಿಂದ ತೆರವಾಗಿರುವ ಈ ಸ್ಥಾನಕ್ಕೆ ಇಂದು ಚುನಾವಣೆಯ ಮುಹೂರ್ತ ನಿಗದಿಯಾಗಿತ್ತು.


245 ಸದಸ್ಯ ಬಲದ ರಾಜ್ಯಸಭೆಯಲ್ಲಿ ಉಪ ಸಭಾಪತಿಯಾಗಿ ಆಯ್ಕೆಯಾಗಲು ಕನಿಷ್ಠ 123 ಸದಸ್ಯರ ಬೆಂಬಲ ಅಗತ್ಯವಿದೆ. ಆಡಳಿತಾರೂಢ ಬಿಜೆಪಿಗಾಗಲೀ ಪ್ರತಿಪಕ್ಷ ಗಳ ನೇತೃತ್ವ ವಹಿಸಿರುವ ಕಾಂಗ್ರೆಸ್‌ ಬಳಿಯಾಗಲೀ ಅಗತ್ಯ ಸದಸ್ಯರ ಬಲ ಇರದೇ ಇರುವುದರಿಂದ ಚುನಾವಣೆ ತೀವ್ರ ಕುತೂಹಲ ಕೆರಳಿಸಿತ್ತು.

ರಾಜ್ಯಸಭೆಯ ನೂತನ ಉಪ ಸಭಾಪತಿಯಾಗಿ ಆಯ್ಕೆಯಾಗಿರುವ ಹರಿವಂಶ್‌ ನಾರಾಯಣ್‌ ಸಿಂಗ್‌ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಅಭಿನಂದನೆ ಸಲ್ಲಿಸಿದರು.



ರಾಜ್ಯಸಭೆ ಉಪ ಸಭಾಪತಿ ಸ್ಥಾನಕ್ಕೆ ಚುನಾವಣೆ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ