ಆ್ಯಪ್ನಗರ

ಉಪ ಸಭಾಪತಿ ಚುನಾವಣೆ: ಬಿಜೆಪಿಯಿಂದ ತನ್ನ ರಾಜ್ಯಸಭಾ ಸದಸ್ಯರಿಗೆ 3 ವಾಕ್ಯದ ವಿಪ್‌ ಜಾರಿ

ಸೆಪ್ಟೆಂಬರ್‌ 14ರಂದು ನಡೆಯಲಿರುವ ರಾಜ್ಯಸಭಾ ಉಪಸಭಾಪತಿ ಚುನಾವಣೆ ಹಿನ್ನೆಲೆ ಬಿಜೆಪಿ ತನ್ನ ರಾಜ್ಯಸಭಾ ಸದಸ್ಯರಿಗೆ ವಿಪ್‌ ಜಾರಿಗೊಳಿಸಲಾಗಿದ್ದು, ಅಂದು ಕಡ್ಡಾಯವಾಗಿ ಎಲ್ಲ ಸದಸ್ಯರು ಸದನಕ್ಕೆ ಹಾಜರಾಗಬೇಕು ಎಂದು ತಿಳಿಸಿದೆ.

ANI 9 Sep 2020, 2:07 pm
ಹೊಸದಿಲ್ಲಿ: ಬಿಜೆಪಿ ತನ್ನ ರಾಜ್ಯಸಭಾ ಸದಸ್ಯರಿಗೆ ಸೆಪ್ಟೆಂಬರ್‌ 14ರಂದು ಸದನದಲ್ಲಿ ಕಡ್ಡಾಯವಾಗಿ ಹಾಜರಿರಬೇಕು ಎಂದು ಮೂರು ವಾಕ್ಯದ ವಿಪ್‌ ಜಾರಿ ಮಾಡಿದೆ. ಮೂಲಗಳ ಪ್ರಕಾರ ಸೆಪ್ಟೆಂಬರ್‌ 14ರಂದು ರಾಜ್ಯಸಭಾ ಉಪಚುನಾವಣೆ ನಡೆಯಲಿದ್ದು, ಆ ಕಾರಣಕ್ಕಾಗಿ ವಿಪ್‌ ಜಾರಿಗೊಳಿಸಲಾಗಿದೆ ಎನ್ನಲಾಗಿದೆ.
Vijaya Karnataka Web rajya sabha deputy chairperson post election bjp issues 3 line whip to all its rajya sabha mps
ಉಪ ಸಭಾಪತಿ ಚುನಾವಣೆ: ಬಿಜೆಪಿಯಿಂದ ತನ್ನ ರಾಜ್ಯಸಭಾ ಸದಸ್ಯರಿಗೆ 3 ವಾಕ್ಯದ ವಿಪ್‌ ಜಾರಿ


ಸೆಪ್ಟೆಂಬರ್‌ 14ರಿಂದ ಸಂಸತ್‌ನ ಮುಂಗಾರು ಅಧಿವೇಶನ ಕೂಡ ಆರಂಭವಾಗಲಿದೆ. ಉಪಸಭಾಪತಿಯಾಗಿದ್ದ ಜೆಡಿಯುನ ಹರಿವಂಶ್‌ ಅವರ ರಾಜ್ಯಸಭೆ ಸದಸ್ಯತ್ವ ಅವಧಿ ಕೊನೆಗೊಂಡಿದ್ದರಿಂದ ಸ್ಥಾನ ತೆರವಾಗಿದೆ. ಆ ಸ್ಥಾನಕ್ಕೆ ಸೆಪ್ಟೆಂಬರ್‌ 14ರಂದು ಮಧ್ಯಾಹ್ನ 3ಕ್ಕೆ ಚುನಾವಣೆ ನಡೆಯಲಿದೆ. ಎನ್‌ಡಿಎ ಅಭ್ಯರ್ಥಿಯ ಗೆಲುವು ಬಹುತೇಕ ಖಚಿತವಾಗಿದೆ.


ತೆರವಾಗಿರುವ ರಾಜ್ಯಸಭೆ ಉಪ ಸಭಾಪತಿ ಸ್ಥಾನಕ್ಕೆ ಪ್ರತಿಪಕ್ಷಗಳ ಸಹಮತದೊಂದಿಗೆ ಜಂಟಿ ಅಭ್ಯರ್ಥಿಯನ್ನು ಕಣಕ್ಕಿಳಿಸಲು ಕಾಂಗ್ರೆಸ್‌ ನಿರ್ಧರಿಸಿದೆ. ಮಂಗಳವಾರ ವರ್ಚುವಲ್‌ ಸಭೆಯಲ್ಲಿ ಈ ಬಗ್ಗೆ ಚರ್ಚೆ ನಡೆದಿದ್ದು, ಎನ್‌ಡಿಎ ಹೊರತುಪಡಿಸಿ ಉಳಿದ ಪಕ್ಷಗಳ ಬೆಂಬಲದೊಂದಿಗೆ ಜಂಟಿ ಅಭ್ಯರ್ಥಿಯನ್ನು ಕಣಕ್ಕಿಳಿಸಲು ನಿರ್ಧರಿಸಲಾಗಿದ್ದು, ಸೆಪ್ಟೆಂಬರ್‌ 11ರ ಮಧ್ಯಾಹ್ನದವರೆಗೂ ನಾಮಪತ್ರ ಸಲ್ಲಿಸಲು ಅವಕಾಶವಿದೆ.

ರಾಜ್ಯಸಭೆ ಉಪ ಸಭಾಪತಿ ಸ್ಥಾನಕ್ಕೆ 'ಕೈ'ನಿಂದ ಜಂಟಿ ಅಭ್ಯರ್ಥಿ..! ಎನ್‌ಡಿಎಗೆ ಗೆಲುವು ಖಚಿತ ಎನ್ನುತ್ತಿರುವ ನಂಬರ್ಸ್‌

245 ಸದಸ್ಯ ಬಲದ ರಾಜ್ಯಸಭೆಯಲ್ಲಿ ಸದ್ಯ 12 ಸ್ಥಾನಗಳು ಖಾಲಿ ಇವೆ. ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟ 117, ಕಾಂಗ್ರೆಸ್‌ ನೇತೃತ್ವದ ಯುಪಿಎ 60 ಹಾಗೂ ತಟಸ್ಥ ಪಕ್ಷಗಳು 67 ಸದಸ್ಯರನ್ನು ಹೊಂದಿವೆ. ಹೀಗಾಗಿ ಚುನಾವಣೆ ನಡೆದರೂ ಎನ್‌ಡಿಎ ಅಭ್ಯರ್ಥಿಯೇ ಗೆಲುವು ಸಾಧಿಸುವುದು ಖಚಿತವಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ