ಆ್ಯಪ್ನಗರ

ವರ್ಷಾಂತ್ಯದಲ್ಲಿ ರಾಮ ಮಂದಿರ ನಿರ್ಮಾಣ ಆರಂಭ: ವಿಎಚ್‌ಪಿ

ಶಾಸನಬದ್ಧ ಅಡೆತಡೆಗಳೆಲ್ಲವನ್ನೂ ನಿವಾರಿಸಿಕೊಂಡು ಕಾನೂನು ಮತ್ತು ಸಂವಿಧಾನಾತ್ಮಕವಾಗಿಯೇ ಅಯೋಧ್ಯೆಯಲ್ಲಿ ಈ ವರ್ಷಾಂತ್ಯದಲ್ಲಿ ರಾಮ ಮಂದಿರ ನಿರ್ಮಾಣ ಕಾರ್ಯ ಆರಂಭಗೊಳ್ಳಲಿದೆ ಎಂದು ವಿಶ್ವ ಹಿಂದೂ ಪರಿಷತ್‌ ಕಾರ್ಯಾಧ್ಯಕ್ಷ ಅಲೋಕ್‌ ಕುಮಾರ್‌ ಗುರುವಾರ ಹೇಳಿದ್ದಾರೆ.

Vijaya Karnataka 6 Jul 2018, 10:05 am
ಹೊಸದಿಲ್ಲಿ: ಶಾಸನಬದ್ಧ ಅಡೆತಡೆಗಳೆಲ್ಲವನ್ನೂ ನಿವಾರಿಸಿಕೊಂಡು ಕಾನೂನು ಮತ್ತು ಸಂವಿಧಾನಾತ್ಮಕವಾಗಿಯೇ ಅಯೋಧ್ಯೆಯಲ್ಲಿ ಈ ವರ್ಷಾಂತ್ಯದಲ್ಲಿ ರಾಮ ಮಂದಿರ ನಿರ್ಮಾಣ ಕಾರ್ಯ ಆರಂಭಗೊಳ್ಳಲಿದೆ ಎಂದು ವಿಶ್ವ ಹಿಂದೂ ಪರಿಷತ್‌ ಕಾರ್ಯಾಧ್ಯಕ್ಷ ಅಲೋಕ್‌ ಕುಮಾರ್‌ ಗುರುವಾರ ಹೇಳಿದ್ದಾರೆ.
Vijaya Karnataka Web Ram mandir


''ರಾಮ ಜನ್ಮಭೂಮಿ ವಿವಾದದ ವಿಚಾರಣೆಯನ್ನು ಸುಪ್ರೀಂ ಕೋರ್ಟ್‌ ದಿನನಿತ್ಯದ ಆಧಾರದ ಮೇಲೆ ನಡೆಸುವ ನಿರೀಕ್ಷೆ ಇದೆ. ಹಾಗೇನಾದರೂ ಆದಲ್ಲಿ, ಸೆಪ್ಟೆಂಬರ್‌ ಕೊನೆಯಲ್ಲಿ ಅಂತಿಮ ಆದೇಶ ಹೊರಬೀಳಲಿದೆ,'' ಎಂದು ಕುಮಾರ್‌ ಸುದ್ದಿಗಾರರಿಗೆ ತಿಳಿಸಿದರು.

ಜುಲೈ 6ರಂದು ವಿಚಾರಣೆಗೆ ಚಾಲನೆ ದೊರೆಯಲಿದೆ. ಒಂದು ವೇಳೆ, ವಿಚಾರಣೆ ಆರಂಭಕ್ಕೆ ತೊಡಕೇನಾದರೂ ಎದುರಾದಲ್ಲಿ ಮಾರ್ಗದರ್ಶನಕ್ಕಾಗಿ 'ಸಂತ ಸಮಾಜ'ವನ್ನು ಸಂಪರ್ಕಿಸಲಾಗುವುದು ಎಂದು ಅವರು ಹೇಳಿದರು.

ವರ್ಷಾಂತ್ಯದೊಳಗೆ ರಾಮ ಲಲ್ಲಾ ಮಂದಿರ ನಿರ್ಮಾಣ ಕಾರ್ಯ ಆರಂಭಗೊಳ್ಳಲಿದೆ ಎಂಬ ನಿಮ್ಮ ಆಶಾವಾದಕ್ಕೆ ಏನು ಕಾರಣ ಎಂದು ಕೇಳಿದ್ದಕ್ಕೆ, ''ಕಾನೂನು ನಮ್ಮ ಕಡೆ ಇದೆ ಎಂದು ನಾನು ನಂಬಿದ್ದೇನೆ,'' ಎಂದು ಕುಮಾರ್‌ ಉತ್ತರಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ