ಆ್ಯಪ್ನಗರ

ಅಯೋಧ್ಯೆಗೆ ಭೇಟಿ ನೀಡಲು ಪ್ರಧಾನಿ ಮೋದಿಗೆ ರಾಮ ಜನ್ಮಭೂಮಿ ಟ್ರಸ್ಟ್‌ ಆಹ್ವಾನ

​ಈ ನಡುವೆ, ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕೆ ಟ್ರಸ್ಟ್‌ ರಚಿಸಿರುವ ಮಾದರಿಯಲ್ಲಿಯೇ ಕೇಂದ್ರ ಸರಕಾರವು ಮಸೀದಿ ನಿರ್ಮಾಣಕ್ಕೂ ಟ್ರಸ್ಟ್‌ ರಚನೆ ಮಾಡಬೇಕು ಎಂದು ಎನ್‌ಸಿಪಿ ಮುಖ್ಯಸ್ಥ ಶರದ್‌ ಪವಾರ್‌ ಆಗ್ರಹಿಸಿದ್ದಾರೆ.

Agencies 20 Feb 2020, 9:22 pm

ಹೊಸದಿಲ್ಲಿ: ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್‌ ಸದಸ್ಯರು ಗುರುವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು ದಿಲ್ಲಿಯ ಅವರ ನಿವಾಸದಲ್ಲಿ ಭೇಟಿ ಮಾಡಿದರು. ಟ್ರಸ್ಟ್‌ ಅಧ್ಯಕ್ಷರಾಗಿರುವ ಮಹಾಂತ ನೃತ್ಯ ಗೋಪಾಲ ದಾಸ್‌, ಪ್ರಧಾನ ಕಾರ್ಯದರ್ಶಿ ಚಂಪತ್‌ ರಾಯ್‌, ಖಜಾಂಚಿ ಸ್ವಾಮಿ ಗೋವಿಂದ ದೇವ್‌ ಗಿರಿ ಹಾಗೂ ಇತರ ಸದಸ್ಯರು ನಿಯೋಗದಲ್ಲಿದ್ದರು.
Vijaya Karnataka Web Narendra Modi


"ಅಯೋಧ್ಯೆಗೆ ಭೇಟಿ ನೀಡುವಂತೆ ಪ್ರಧಾನಿಯವರಿಗೆ ಮನವಿ ಮಾಡಿದ್ದೇವೆ," ಎಂದು ಬಳಿಕ ನೃತ್ಯ ಗೋಪಾಲ ದಾಸ್‌ ಸುದ್ದಿಗಾರರಿಗೆ ತಿಳಿಸಿದರು.

ಈ ನಡುವೆ, ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕೆ ಟ್ರಸ್ಟ್‌ ರಚಿಸಿರುವ ಮಾದರಿಯಲ್ಲಿಯೇ ಕೇಂದ್ರ ಸರಕಾರವು ಮಸೀದಿ ನಿರ್ಮಾಣಕ್ಕೂ ಟ್ರಸ್ಟ್‌ ರಚನೆ ಮಾಡಬೇಕು ಎಂದು ಎನ್‌ಸಿಪಿ ಮುಖ್ಯಸ್ಥ ಶರದ್‌ ಪವಾರ್‌ ಆಗ್ರಹಿಸಿದ್ದಾರೆ.

ರಾಮಮಂದಿರ ಟ್ರಸ್ಟ್‌ ಮೊದಲ ಸಭೆ ಪೂರ್ಣ; ನೃತ್ಯ ಗೋಪಾಲ್‌ದಾಸ್‌ ಅಧ್ಯಕ್ಷ, ಮೋದಿ ಮಾಜಿ ಸಲಹೆಗಾರ ನಿರ್ಮಾಣ ಸಮಿತಿ ಮುಖ್ಯಸ್ಥ, 15 ದಿನದಲ್ಲಿ ನಿರ್ಮಾಣ ದಿನಾಂಕ ಪ್ರಕಟ

"ಪ್ರಧಾನಿಯವರ ನವ ಭಾರತದಲ್ಲಿ ರಾಜಕೀಯ ಲಾಭಕ್ಕೆ ಕ್ರಿಮಿನಲ್‌ಗಳಿಗೂ ಗೌರವ ನೀಡಲಾಗುತ್ತದೆ. ಬಾಬ್ರಿ ಮಸೀದಿ ಧ್ವಂಸ ಪ್ರಕರಣದಲ್ಲಿಆರೋಪಿಯಾಗಿರುವ ನೃತ್ಯ ಗೋಪಾಲ ದಾಸ್‌ ಅವರನ್ನು ರಾಮಮಂದಿರ ಟ್ರಸ್ಟ್‌ ಅಧ್ಯಕ್ಷರಾಗಿ ನೇಮಕ ಮಾಡಿರುವುದೇ ಇದಕ್ಕೆ ಸಾಕ್ಷಿ," ಎಂದು ಎಐಎಂಐಎಂ ಮುಖ್ಯಸ್ಥ ಹಾಗೂ ಸಂಸದ ಅಸಾದುದ್ದೀನ್‌ ಓವೈಸಿ ಟೀಕಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ