ಆ್ಯಪ್ನಗರ

ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಆರೋಪ: ಬಿಜೆಪಿ ನಾಯಕ ಚಿನ್ಮಯಾನಂದ ಬಂಧಿಸಿದ ಎಸ್‌ಐಟಿ

ತನ್ನದೇ ಕಾಲೇಜಿನ ಕಾನೂನು ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿದ ಆರೋಪ ಎದುರಿಸುತ್ತಿರುವ ಬಿಜೆಪಿ ನಾಯಕ, ಕೇಂದ್ರದ ಮಾಜಿ ಸಚಿವ ಚಿನ್ಮಯಾನಂದ ಅವರನ್ನು ಎಸ್‌ಐಟಿ ಅಧಿಕಾರಿಗಳು ಬಂಧಿಸಿದ್ದಾರೆ.

Navbharat Times 20 Sep 2019, 2:44 pm
ಶಹಜಾನ್‌ಪುರ: ಕಾನೂನು ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿದ ಆರೋಪ ಎದುರಿಸುತ್ತಿರುವ ಕೇಂದ್ರದ ಮಾಜಿ ಸಚಿವ ಮತ್ತು ಬಿಜೆಪಿ ಮುಖಂಡ ಚಿನ್ಮಯಾನಂದ ಅವರನ್ನು ಎಸ್‌ಐಟಿ ಅಧಿಕಾರಿಗಳು ಬಂಧಿಸಿದ್ದಾರೆ.
Vijaya Karnataka Web sit


ಸದ್ಯ ಚಿನ್ಮಯಾನಂದ ಅವರನ್ನು ವೈದ್ಯಕೀಯ ಪರೀಕ್ಷೆಗಾಗಿ ಆಸ್ಪತ್ರೆಗೆ ದಾಖಲಿಸಿರುವ ಎಸ್‌ಐಟಿ ಅಧಿಕಾರಿಗಳು, ಇಂದು (ಶುಕ್ರವಾರ) ನ್ಯಾಯಾಲಯಕ್ಕೆ ಹಾಜರು ಪಡಿಸಲಿದ್ದಾರೆ.

ಸ್ನಾನದ ವಿಡಿಯೋ ಮಾಡಿ ಅತ್ಯಾಚಾರ: ಚಿನ್ಮಯಾನಂದ ವಿರುದ್ಧ 43 ದೃಶ್ಯದ ತುಣುಕು ಕೊಟ್ಟ ವಿದ್ಯಾರ್ಥಿನಿ

ತನ್ನ ಮೇಲೆ ಅತ್ಯಾಚಾರ ಎಸಗಿರುವ ಸ್ವಾಮಿ ಚಿನ್ಮಯಾನಂದ ಅವರನ್ನು ಕೂಡಲೇ ಬಂಧಿಸದೇ ಇದ್ದರೆ ಆತ್ಮಹತ್ಯೆಗೆ ಶರಣಾಗುವುದಾಗಿ ಲೈಂಗಿಕ ಕಿರುಕುಳದ ಆರೋಪ ಮಾಡಿದ ಯುವತಿ ಬೆದರಿಕೆ ಹಾಕಿದ್ದರು.

ಎಸ್‌ಐಟಿ ಅಧಿಕಾರಿಗಳು ಸ್ವಾಮಿ ಚಿನ್ಮಯಾನಂದ ನಿವಾಸದಿಂದಲೇ ಅವರನ್ನು ಬಂಧಿಸಿ ಕರೆದೊಯ್ದಿದ್ದಾರೆ ಎಂದು ಮಾಹಿತಿ ನೀಡಿರುವ ಚಿನ್ಮಯಾನಂದ ಪರ ವಕೀಲ ಪೂಜಾ ಸಿಂಗ್, ಎಸ್‌ಐಟಿ ಅಧಿಕಾರಿಗಳು ಎಫ್‌ಐಆರ್ ಅಥವಾ ಯಾವುದೇ ಅಧಿಕೃತ ಮಾಹಿತಿ ಪ್ರತಿ ನೀಡದೇ ಅವರನ್ನು ಬಂಧಿಸಿದ್ದಾರೆಂದು ಆರೋಪಿಸಿದ್ದಾರೆ.

ಯುವತಿಯ ಆರೋಪ


ಸ್ವಾಮಿ ವಿವೇಕಾನಂದ ಕಾಲೇಜಿನಲ್ಲಿ ಕಾನೂನು ಪದವಿಗಾಗಿ ಪ್ರವೇಶ ಪಡೆದ ಸಂದರ್ಭದಲ್ಲಿ ಸ್ವಾಮಿ ಚಿನ್ಮಯಾನಂದ ನನಗೆ ಕೆಲಸ ನೀಡುವ ಭರವಸೆ ನೀಡಿದರು. ಅಂದು ಕತ್ತಲಾಗುವವರೆಗೂ ನಾನು ಕಾಲೇಜಿನಲ್ಲೇ ಇರಬೇಕಾದ ಅನಿವಾರ್ಯತೆ ಸೃಷ್ಟಿಸಿದರು. ಬಳಿಕ ಕಾಲೇಜು ಸಿಬ್ಬಂದಿಯ ಬಲವಂತದ ಮೇರೆಗೆ ನಾನು ಹಾಸ್ಟೇಲ್‌ನಲ್ಲಿಯೇ ಉಳಿದುಕೊಂಡೆ. ಈ ವೇಲೆ ನಾನು ಸೇರಿದಂತೆ ಹಲವು ವಿದ್ಯಾರ್ಥಿನಿಯರ ಮೇಲೆ ಚಿನ್ಮಯಾನಂದ ಲೈಂಗಿಕ ಕೌರ್ಜನ್ಯ ಎಸಗಿದರು. ಆದರೆ, ಈ ಸಂಬಂಧ ನಾನೊಬ್ಬಳೆ ಧ್ವನಿ ಎತ್ತುವ ಧೈರ್ಯ ತೆಗೆದುಕೊಂಡೆ ಎನ್ನುವುದು ಯುವತಿಯ ಆರೋಪವಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ