ಆ್ಯಪ್ನಗರ

ಸ್ಪೀಕರ್‌ ವಿರುದ್ಧ ದಂಡೆತ್ತಿದ ಅತೃಪ್ತರ ದಂಡು; ಸುಪ್ರೀಂ ಅಂಗಳಕ್ಕೆ ಚೆಂಡು?

ರಾಜೀನಾಮೆ ಅಂಗೀಕರಿಸದೆ, ಶಾಸಕ ಸ್ಥಾನದಿಂದ ಅನರ್ಹಗೊಳಿಸಿದ ಸ್ಪೀಕರ್‌ ನಿರ್ಧಾರವನ್ನು ಪ್ರಶ್ನಿಸಿ, ರೆಬೆಲ್‌ ಶಾಸಕರು ಸುಪ್ರೀಂ ಅಂಗಳಕ್ಕೆ ತೆರಳಲು ನಿರ್ಧರಿಸಿದ್ದಾರೆ

THE ECONOMIC TIMES 29 Jul 2019, 5:38 pm
ಹೊಸದಿಲ್ಲಿ: ಶಾಸಕ ಸ್ಥಾನದಿಂದ ಅನರ್ಹಗೊಳಿಸಿದ ಸ್ಪೀಕರ್‌ ನಿರ್ಧಾರವನ್ನು ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸುವ ನಿಟ್ಟಿನಲ್ಲಿ ರೆಬೆಲ್‌ ಶಾಸಕರು ಹೆಜ್ಜೆ ಇಟ್ಟಿದ್ದಾರೆ.
Vijaya Karnataka Web supreme


ರಮೇಶ್‌ ಜಾರಕಿಹೊಳಿ ಹಾಗೂ ಮಹೇಶ್‌ ಕುಮಾತಳ್ಳಿ ಸೋಮವಾರ ಸುಪ್ರೀಂ ಕೋರ್ಟ್‌ನಲ್ಲಿ ಸ್ಪೀಕರ್‌ ಆದೇಶವನ್ನು ರದ್ದುಗೊಳಿಸುವಂತೆ ಮನವಿ ಮಾಡಿ ಅರ್ಜಿ ಸಲ್ಲಿಸಿದ್ದಾರೆ.

ಅಂತೆಯೇ ಪಕ್ಷೇತರ ಶಾಸಕರಾಗಿದ್ದ ಆರ್‌. ಶಂಕರ್‌ ಅವರೂ, ತಮ್ಮನ್ನು ಅನರ್ಹಗೊಳಿಸಿರುವ ಸ್ಪೀಕರ್‌ ನಿರ್ಧಾರವನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಿದ್ದಾರೆ. ರಾಜೀನಾಮೆಯನ್ನು ಅಂಗೀಕರಿಸದೇ, ಪಕ್ಷಾಂತರ ನಿಷೇಧ ಕಾಯ್ದೆಯನ್ವಯ ಶಾಸಕ ಸ್ಥಾನದಿಂದ ಅನರ್ಹಗೊಳಿಸಿರುವ ನಿರ್ಧಾರವನ್ನು ಅವರು ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ.

ಸ್ಪೀಕರ್‌ ತೀರ್ಮಾನ ಸಂವಿಧಾನದ ಸೆಕ್ಷನ್‌ 190ರ ಉಲ್ಲಂಘನೆಯಾಗಿದೆ. ಅಂತೆಯೇ ಸಂವಿಧಾನದ ಆರ್ಟಿಕಲ್‌ 14 ಮೂಲಭೂತ ಹಕ್ಕುಗಳ ಉಲ್ಲಂಘನೆಯೂ ಆಗಿದೆ ಎಂದು ಅರ್ಜಿಯಲ್ಲಿ ತಿಳಿಸಲಾಗಿದೆ.

ಸ್ಪೀಕರ್‌ ರಾಜೀನಾಮೆ ಸ್ವೀಕರಿಸುವಂತೆ ಆದೇಶ ಮಾಡುವಂತೆ ಈ ಹಿಂದೆ ರೆಬೆಲ್‌ ಶಾಸಕರು ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು.
ಈ ಹಿಂದೆ ಸ್ಪೀಕರ್‌ ರಮೇಶ್‌ ಕುಮಾರ್‌, ರಾಜೀನಾಮೆ ಸರಿಯಾದ ಫಾರ್ಮೆಟ್‌ನಲ್ಲಿ ಇಲ್ಲ ಎಂದಿದ್ದರು. ಅಷ್ಟೇ ಅಲ್ಲದೆ ಶಾಸಕರು ಸ್ವತಃ ಭೇಟಿ ಮಾಡಿ ರಾಜೀನಾಮೆ ಕೊಟ್ಟಿರಲಿಲ್ಲ ಎಂದಿದ್ದರು. ಆ ಬಳಿಕ ಎಲ್ಲ ಶಾಸಕರು ಅವರನ್ನು ವಿಧಾನಸೌಧದಲ್ಲಿ ಭೇಟಿ ಮಾಡಿ ರಾಜೀನಾಮೆ ನೀಡಲಾಗಿತ್ತು. ಅದನ್ನು ಅಂಗೀಕರಿಸದೇ, ಇದೀಗ ನೇರ ಪಕ್ಷಾಂತರ ಕಾಯ್ದೆಯಡಿ ಶಾಸಕ ಸ್ಥಾನದಿಂದ ಅನರ್ಹಗೊಳಿಸಲಾಗಿದೆ. ಈ ನಿರ್ಧಾರ ಕಾನೂನು ಬಾಹಿರ ಎನ್ನಲಾಗಿದೆ. ಈ ಪ್ರಕ್ರಿಯೆ ಸರಿಯಲ್ಲ ಎಂದು ಶಾಸಕರು ತಮ್ಮ ವಿವರಣೆಯನ್ನು ಮಂಡಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ