ಆ್ಯಪ್ನಗರ

ರಾಷ್ಟ್ರೀಯ ಹೆದ್ದಾರಿಯಲ್ಲಿ ಸ್ಪೀಡ್ ಬ್ರೇಕರ್ ತೆಗೆಯಿರಿ

ಸುಗಮ ಸಂಚಾರಕ್ಕಾಗಿ ರಾಷ್ಟ್ರೀಯ ಹೆದ್ದಾರಿಗಳಲ್ಲಿರುವ ಸ್ಪೀಡ್ ಬ್ರೇಕರ್‌ಗಳನ್ನು ತೆಗೆದು ಹಾಕುವಂತೆ ಕೇಂದ್ರ ರಸ್ತೆ ಸಾರಿಗೆ ಸಚಿವಾಲಯವು ರಾಜ್ಯ ಸರಕಾರಗಳು, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ, ಪಿಡಬ್ಲ್ಯುಡಿ, ಬಿಆರ್‌ಒಗಳಿಗೆ ನಿರ್ದೇಶನ ನೀಡಿದೆ.

ಏಜೆನ್ಸೀಸ್ 15 Apr 2016, 1:59 pm
ಹೊಸದಿಲ್ಲಿ: ಸುಗಮ ಸಂಚಾರಕ್ಕಾಗಿ ರಾಷ್ಟ್ರೀಯ ಹೆದ್ದಾರಿಗಳಲ್ಲಿರುವ ಸ್ಪೀಡ್ ಬ್ರೇಕರ್‌ಗಳನ್ನು ತೆಗೆದು ಹಾಕುವಂತೆ ಕೇಂದ್ರ ರಸ್ತೆ ಸಾರಿಗೆ ಸಚಿವಾಲಯವು ರಾಜ್ಯ ಸರಕಾರಗಳು, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ, ಪಿಡಬ್ಲ್ಯುಡಿ, ಬಿಆರ್‌ಒ ಗಳಿಗೆ ನಿರ್ದೇಶನ ನೀಡಿದೆ.
Vijaya Karnataka Web remove speed breakers from national highways road transport ministry
ರಾಷ್ಟ್ರೀಯ ಹೆದ್ದಾರಿಯಲ್ಲಿ ಸ್ಪೀಡ್ ಬ್ರೇಕರ್ ತೆಗೆಯಿರಿ


ಇದಕ್ಕೆ ಸಂಬಂಧಿಸಿದಂತೆ ಕೈಗೊಳ್ಳಲಾಗುವ ಕ್ರಮಗಳ ಮಾಹಿತಿಯನ್ನು ಮುಂದಿನ ಬುಧವಾರ ಸಲ್ಲಿಸುವಂತೆ ಸಚಿವಾಲಯ ತಿಳಿಸಿದೆ.

ರಸ್ತೆ ಅಪಘಾತ ವರದಿ 2014ರ ಪ್ರಕಾರ ರಸ್ತೆ ಉಬ್ಬಿನ ಕಾರಣಕ್ಕೆ ಸಂಭವಿಸಿದ ಅಪಘಾತದಲ್ಲಿ 4,726 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ ಎಂದು ಸಚಿವಾಲಯ ತಿಳಿಸಿದೆ. ಗುಂಡಿಗಳು ಮತ್ತು ವೇಗ ನಿಯಂತ್ರಕಗಳಿಂದಾಗಿ 6,672 ಮಂದಿ ಅಸು ನೀಗಿದ್ದಾರೆ ಎಂದು ವರದಿ ವಿವರಿಸಿದೆ.

ಮಾರ್ಗದರ್ಶಿ ಸೂತ್ರಗಳನ್ನು ಪ್ರಕಟಿಸಿದ್ದರೂ ಸ್ಥಳೀಯ ಪ್ರಾಧಿಕಾರಗಳು ರಾಷ್ಟ್ರೀಯ ಹೆದ್ದಾರಿಗಳಲ್ಲಿ ವೇಗ ನಿಯಂತ್ರಣಕ್ಕೆ ಬ್ರೇಕರ್ಗಳನ್ನು ಅಳವಡಿಸುವುದು ಅನಪೇಕ್ಷಿತ. ಇವು ಗಂಭೀರ ಅಪಾಯಗಳಿಗೆ ದಾರಿ ಮಾಡಿ ಕೊಡುತ್ತಿದೆ ಎಂದು ಸಚಿವಾಲಯ ಹೇಳಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ