ಆ್ಯಪ್ನಗರ

ಪೌರತ್ವ ಕಾಯಿದೆ ವಿರೋಧಿಸಿದ್ದಕ್ಕೆ ಪ.ಬಂಗಾಳ ಸ್ತಬ್ಧಚಿತ್ರ ನಿರಾಕರಿಸಿದ ಕೇಂದ್ರ

ಆರಂಭದಿಂದಲೂ 'ಪೌರತ್ವ ತಿದ್ದುಪಡಿ ಕಾಯಿದೆಗೆ ಪ್ರಬಲ ವಿರೋಧ ಒಡ್ಡುತ್ತಲೇ ಬಂದಿರುವ ಪಶ್ಚಿಮ ಬಂಗಾಳದ ಸ್ತಬ್ಧಚಿತ್ರವನ್ನು ಕೇಂದ್ರ ಸರಕಾರ ನಿರಾಕರಿಸಿದೆ. ತೃಣಮೂಲ ಕಾಂಗ್ರೆಸ್‌ ಸರಕಾರ ರಾಜ್ಯದಲ್ಲಿ ಕಾನೂನು ಪಾಲನೆ ಮಾಡುತ್ತಿಲ್ಲ. ಕೇಂದ್ರ ಸರಕಾರವು ಸ್ತಬ್ಧಚಿತ್ರವನ್ನು ನಿರಾಕರಿಸಲು ಇದೇ ಪ್ರಮುಖ ಕಾರಣ ಎಂದು ಬಿಜೆಪಿ ಆರೋಸಿದೆ.

Vijaya Karnataka Web 2 Jan 2020, 4:58 pm
ಹೊಸದಿಲ್ಲಿ: ಆರಂಭದಿಂದಲೂ 'ಪೌರತ್ವ ತಿದ್ದುಪಡಿ ಕಾಯಿದೆಗೆ ಪ್ರಬಲ ವಿರೋಧ ಒಡ್ಡುತ್ತಲೇ ಬಂದಿರುವ ಪ. ಬಂಗಾಳದ ತೃಣಮೂಲ ಕಾಂಗ್ರೆಸ್‌ ಸರಕಾರಕ್ಕೆ ಕೇಂದ್ರ ಸರಕಾರ ಬಿಸಿ ಮುಟ್ಟಿಸಿದೆ. ಗಣರಾಜ್ಯೋತ್ವದಂದು ದಿಲ್ಲಿ ಪರೇಡ್‌ನಲ್ಲಿ ಪಾಲ್ಗೊಳ್ಳಬೇಕಿದ್ದ ಪಶ್ಚಿಮ ಬಂಗಾಳದ ಸ್ತಬ್ಧಚಿತ್ರವನ್ನು ಕೇಂದ್ರ ಸರಕಾರ ನಿರಾಕರಿಸಿದೆ.
Vijaya Karnataka Web Mamata Banerjee


ಪೌರತ್ವ ತಿದ್ದುಪಡಿ ಕಾಯಿದೆಗೆ ವಿರೋಧ ಒಡ್ಡುತ್ತಿರುವುದು ಆ ರಾಜ್ಯದ ಜನತೆಗೆ ಅವಮಾನ ಮಾಡಿದಂತೆ ಎಂದು ಹೇಳಿರುವ ಕೇಂದ್ರ ಸರಕಾರ ಈ ಬಾರಿಯ ಗಣರಾಜ್ಯೋತ್ಸವ ಪರೇಡ್‌ಗೆ ಪ.ಬಂಗಾಳದ ಸ್ತಬ್ಧಚಿತ್ರವನ್ನು ಬ್ಯಾನ್‌ ಮಾಡಿದೆ.

ಈ ಬೆನ್ನ ಪ. ಬಂಗಾಳ ರಾಜ್ಯ ಬಿಜೆಪಿ ಪ್ರತಿಕ್ರಿಯಿಸಿದ್ದು, ತೃಣಮೂಲ ಕಾಂಗ್ರೆಸ್‌ ಸರಕಾರ ರಾಜ್ಯದಲ್ಲಿ ಕಾನೂನು ಪಾಲನೆ ಮಾಡುತ್ತಿಲ್ಲ. ಕೇಂದ್ರ ಸರಕಾರವು ಸ್ತಬ್ಧಚಿತ್ರವನ್ನು ನಿರಾಕರಿಸಲು ಇದೇ ಪ್ರಮುಖ ಕಾರಣವಾಗಿದೆ ಎಂದು ಹೇಳಿದೆ.

ಗಣರಾಜ್ಯೋತ್ಸವದ ಕೇಂದ್ರಬಿಂದುವಾಗಲಿದೆ ಕರ್ನಾಟಕದ 'ಅನುಭವ ಮಂಟಪ' ಸ್ತಬ್ಧಚಿತ್ರ

ಪ.ಬಂಗಾಳ ಸಲ್ಲಿಸಿದ್ದ ಸ್ತಬ್ಧಚಿತ್ರದ ಪ್ರಸ್ತಾವನೆಯನ್ನು ಬುಧವಾರ ರಕ್ಷಣಾ ಸಚಿವಾಲಯವು ತಿರಸ್ಕರಿಸಿತ್ತು. ತಜ್ಞ ಸಮಿತಿಯೊಟ್ಟಿಗೆ ಸಮಾಲೋಚನೆ ನಡೆಸಿದ ನಂತರ ತಿರಸ್ಕರಿಸಲಾಗಿದೆ.

ರಕ್ಷಣಾ ಸಚಿವಾಲಯಕ್ಕೆ ಈ ಬಾರಿಯ ಗಣರಾಜ್ಯೋತ್ಸವ ಪಥಸಂಚಲನಕ್ಕೆ 56 ಪ್ರಸ್ತಾವನೆಗಳು ಸಲ್ಲಿಕೆಯಾಗಿವೆ. ಇದರಲ್ಲಿ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಂದ 32 ಹಾಗೂ ಕೇಂದ್ರ ಸಚಿವಾಲಯಗಳಿಂದ 22 ಪ್ರಸ್ತಾವನೆಗಳು ಸಲ್ಲಿಕೆಯಾಗಿದ್ದವು. ಈ ಪೈಕಿ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಿಂದ 16 ಹಾಗೂ ಕೇಂದ್ರ ಸಚಿವಾಲಯಗಳ 6 ಸ್ತಬ್ಧಚಿತ್ರಗಳು ಅಂತಿಮವಾಗಿ ಆಯ್ಕೆಯಾಗಿವೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ