ಆ್ಯಪ್ನಗರ

ಮತ್ತೊಮ್ಮೆ ಮಾತುಕತೆ ವಿಫಲ; ಗಣರಾಜ್ಯೋತ್ಸವದಂದು ಅನ್ನದಾತರ ‘ಟ್ರ್ಯಾಕ್ಟರ್ ಪರೇಡ್’ ನಡೆಯೋದು ಪಕ್ಕಾ..!

ದಿಲ್ಲಿ ಹೊರಗಡೆ ಹೋಗಿ ಟ್ರ್ಯಾಕ್ಟರ್‌ ರ‍್ಯಾಲಿ ನಡೆಸಿ ಎಂದು ಪೊಲೀಸರು ಹೇಳುತ್ತಿದ್ದಾರೆ. ಆದನ್ನು ಒಪ್ಪಲಾಗದು. ದಿಲ್ಲಿ ಒಳಗಡೆಯೇ ನಾವು ಶಾಂತಿಯುತ ರೀತಿಯಲ್ಲಿ ಟ್ರ್ಯಾಕ್ಟರ್‌ ರ‍್ಯಾಲಿ ನಡೆಸುತ್ತೇವೆ ಎಂದು ಪ್ರತಿಭಟನೆಯಲ್ಲಿ ಪಾಲ್ಗೊಂಡಿರುವ ಸ್ವರಾಜ್‌ ಅಭಿಯಾನ್‌ ಸಂಘಟನೆ ಮುಖಂಡ ಯೋಗೇಂದ್ರ ಯಾದವ್‌ ಮಾತುಕತೆ ಬಳಿಕ ತಿಳಿಸಿದರು.

Vijaya Karnataka Web 22 Jan 2021, 7:58 am
ಹೊಸದಿಲ್ಲಿ: ಪ್ರತಿಭಟನಾನಿರತ ರೈತರು ಕೃಷಿ ಕಾಯಿದೆಗಳನ್ನು ವಿರೋಧಿಸಿ ಜನವರಿ 26ರಂದು ನಡೆಸಲು ಉದ್ದೇಶಿಸಿರುವ ಟ್ರ್ಯಾಕ್ಟರ್‌ ರ‍್ಯಾಲಿಗೆ ಸಂಬಂಧಿಸಿದಂತೆ ದಿಲ್ಲಿ ಪೊಲೀಸರು ಮತ್ತು ರೈತ ಮುಖಂಡರ ನಡುವೆ ಗುರುವಾರ ನಡೆದ ಎರಡನೇ ಸುತ್ತಿನ ಮಾತುಕತೆಯೂ ವಿಫಲಗೊಂಡಿದೆ.
Vijaya Karnataka Web Farmers participate in a tractor rally


ನೂತನ ಕೃಷಿ ಕಾಯಿದೆಗಳನ್ನು ರದ್ದುಗೊಳಿಸಬೇಕೆಂದು ಆಗ್ರಹಿಸಿ ಎರಡು ತಿಂಗಳಿಂದ ದಿಲ್ಲಿ ಗಡಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರು ಗಣರಾಜ್ಯೋತ್ಸವ ದಿನದಂದು ದಿಲ್ಲಿಯ ಹೊರ ವರ್ತುಲ ರಸ್ತೆಯಲ್ಲಿ ಟ್ರ್ಯಾಕ್ಟರ್‌ ಪರೇಡ್‌ ನಡೆಸಲು ಮುಂದಾಗಿದ್ದಾರೆ. ಈ ರಸ್ತೆ ಅತಿ ವಾಹನ ದಟ್ಟಣೆಯಿಂದ ಕೂಡಿರುವ ಕಾರಣ ಪರ್ಯಾಯ ಮಾರ್ಗದಲ್ಲಿ ರ‍್ಯಾಲಿ ನಡೆಸಿ ಎಂದು ದಿಲ್ಲಿ ಪೊಲೀಸರು ಮನವಿ ಮಾಡಿದ್ದಾರೆ. ಈ ವಿಷಯ ಕುರಿತು ಸತತ ಎರಡು ದಿನಗಳಿಂದ ಮಾತುಕತೆ ನಡೆದವು. ಪೊಲೀಸರು ಎಷ್ಟೇ ಮನವಿ ಮಾಡಿದರೂ ಮಾರ್ಗ ಬದಲಾವಣೆ ಅಸಾಧ್ಯ ಎಂದು ರೈತರು ಪಟ್ಟುಹಿಡಿದಿದ್ದಾರೆ.
ಕರ್ನಾಟಕ ಸೇರಿ 8 ರಾಜ್ಯಗಳ ರೈತರೊಂದಿಗೆ ಸುಪ್ರೀಂ ತಜ್ಞರ ಸಮಿತಿಯಿಂದ ಮಾತುಕತೆ
ದಿಲ್ಲಿ ಹೊರಗಡೆ ಹೋಗಿ ಟ್ರ್ಯಾಕ್ಟರ್‌ ರ‍್ಯಾಲಿ ನಡೆಸಿ ಎಂದು ಪೊಲೀಸರು ಹೇಳುತ್ತಿದ್ದಾರೆ. ಆದನ್ನು ಒಪ್ಪಲಾಗದು. ದಿಲ್ಲಿ ಒಳಗಡೆಯೇ ನಾವು ಶಾಂತಿಯುತ ರೀತಿಯಲ್ಲಿ ಟ್ರ್ಯಾಕ್ಟರ್‌ ರ‍್ಯಾಲಿ ನಡೆಸುತ್ತೇವೆ ಎಂದು ಪ್ರತಿಭಟನೆಯಲ್ಲಿ ಪಾಲ್ಗೊಂಡಿರುವ ಸ್ವರಾಜ್‌ ಅಭಿಯಾನ್‌ ಸಂಘಟನೆ ಮುಖಂಡ ಯೋಗೇಂದ್ರ ಯಾದವ್‌ ಮಾತುಕತೆ ಬಳಿಕ ತಿಳಿಸಿದರು.
18 ತಿಂಗಳು ಕೃಷಿ ಕಾಯಿದೆ ಜಾರಿ ಮುಂದೂಡಿಕೆ ಪ್ರಸ್ತಾವ ತಿರಸ್ಕರಿಸಿದ ರೈತರು
ಸಂಧಾನ ಶುರು ಮಾಡಿದ ಸಮಿತಿ: ಸುಪ್ರೀಂ ಕೋರ್ಟ್‌ ನಿಯೋಜಿತ ತಜ್ಞರ ಸಮಿತಿ ಗುರುವಾರ ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳ ರೈತ ಸಂಘಟನೆಗಳ ಪ್ರತಿನಿಧಿಗಳ ಜತೆ ಸಮಾಲೋಚನೆ ಆರಂಭಿಸಿದೆ. ಕರ್ನಾಟಕ, ಕೇರಳ, ಮಧ್ಯಪ್ರದೇಶ, ಮಹಾರಾಷ್ಟ್ರ, ಒಡಿಶಾ, ತೆಲಂಗಾಣ, ತಮಿಳುನಾಡು ಮತ್ತು ಉತ್ತರಪ್ರದೇಶಗಳಲ್ಲಿನ 10 ರೈತ ಸಂಘಟನೆಗಳ ಪ್ರತಿನಿಧಿಗಳು ವಿಡಿಯೊ ಕಾನ್ಫರೆನ್ಸ್‌ನಲ್ಲಿ ಪಾಲ್ಗೊಂಡು ಅಭಿಪ್ರಾಯ ಮಂಡಿಸಿದರು. ರೈತ ಪ್ರತಿಭಟನೆಯಿಂದ ಉದ್ಭವಿಸಿರುವ ಬಿಕ್ಕಟ್ಟು ನಿವಾರಣೆಗೆ ಮಧ್ಯಪ್ರವೇಶ ಮಾಡಿರುವ ಸುಪ್ರೀಂ ಕೋರ್ಟ್‌, ಜ.11ರಂದು ನಾಲ್ವರು ಸದಸ್ಯರ ಸಮಾಲೋಚನಾ ಸಮಿತಿ ರಚಿಸಿ ಆದೇಶ ಹೊರಡಿಸಿತ್ತು. ಆ ಪೈಕಿ ಭುಪೀಂದರ್‌ ಸಿಂಗ್‌ ಮಾನ್‌ ಹಿಂದೆ ಸರಿದಿರುವುದರಿಂದ ಸಮಿತಿಯಲ್ಲಿ ಈಗ ಮೂವರು ಸದಸ್ಯರು ಮಾತ್ರ ಉಳಿದಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ