ಆ್ಯಪ್ನಗರ

Sabarimala Temple: ಶಬರಿಮಲೆಗೆ ಮಹಿಳೆಯರಿಗೆ ಪ್ರವೇಶ; ಸುಪ್ರೀಂಗೆ ಪುನರ್ ಪರಿಶೀಲನಾ ಅರ್ಜಿ ಸಲ್ಲಿಕೆ

ಶಬರಿಮಲೆ ಅಯ್ಯಪ್ಪ ದೇಗುಲಕ್ಕೆ ಎಲ್ಲ ವಯೋಮಾನದ ಮಹಿಳೆಯರ ಪ್ರವೇಶಕ್ಕೆ ಅನುಮತಿ ನೀಡಿರುವ ತೀರ್ಪನ್ನು ಪುನರ್‌ಪರಿಶೀಲಿಸುವಂತೆ ಸುಪ್ರೀಂ ಕೋರ್ಟ್‌ಗೆ ರಾಷ್ಟ್ರೀಯ ಅಯ್ಯಪ್ಪ ಭಕ್ತಾದಿಗಳ ಸಂಘ ಸೋಮವಾರ (ಅಕ್ಟೋಬರ್ 8) ಅರ್ಜಿ ಸಲ್ಲಿಸಿದೆ.

TIMESOFINDIA.COM 8 Oct 2018, 12:36 pm
ಹೊಸದಿಲ್ಲಿ: ಶಬರಿಮಲೆ ಅಯ್ಯಪ್ಪ ದೇಗುಲಕ್ಕೆ ಎಲ್ಲ ವಯೋಮಾನದ ಮಹಿಳೆಯರ ಪ್ರವೇಶಕ್ಕೆ ಅನುಮತಿ ನೀಡಿರುವ ತೀರ್ಪನ್ನು ಪುನರ್‌ಪರಿಶೀಲಿಸುವಂತೆ ಸುಪ್ರೀಂ ಕೋರ್ಟ್‌ಗೆ ರಾಷ್ಟ್ರೀಯ ಅಯ್ಯಪ್ಪ ಭಕ್ತಾದಿಗಳ ಸಂಘ ಸೋಮವಾರ (ಅಕ್ಟೋಬರ್ 8) ಅರ್ಜಿ ಸಲ್ಲಿಸಿದೆ.
Vijaya Karnataka Web suprem


ಸಿಎಂ ಪಿಣರಾಯಿ ವಿಜಯನ್‌ ಅವರು ಸೋಮವಾರ ಕರೆದಿರುವ ಸಂಧಾನ ಸಭೆಯಲ್ಲಿ ಭಾಗವಹಿಸಲು ದೇವಸ್ಥಾನದ ತಂತ್ರಿ ಕುಟುಂಬ ಮತ್ತು ರಾಜ ಮನೆತನಗಳು ನಿರಾಕರಿಸಿದ್ದವು. ಈ ನಡುವೆ, ತೀರ್ಪಿನ ವಿರುದ್ಧ ಮೇಲ್ಮನವಿ ಸಲ್ಲಿಸಲು ಆಗ್ರಹಿಸಿ ಕೇರಳ, ದಿಲ್ಲಿ ಸೇರಿದಂತೆ ದೇಶದ ಹಲವೆಡೆ ಸೋಮವಾರ ಭಕ್ತರ ಪ್ರತಿಭಟನೆ ಸಹ ನಡೆದಿತ್ತು.

ಕೇರಳದ ಐತಿಹಾಸಿಕ ಶಬರಿಮಲೆ ದೇವಾಲಯಕ್ಕೆ ಎಲ್ಲ ವಯೋಮಾನದ ಮಹಿಳೆಯರ ಪ್ರವೇಶಕ್ಕೆ ಅನುಮತಿ ನೀಡಿರುವ ತೀರ್ಪುನ್ನು ಪುನರ್‌ಪರಿಶೀಲಿಸುವಂತೆ ಕೋರಿ ಸುಪ್ರೀಂಕೋರ್ಟ್ ಮೆಟ್ಟಿಲೇರಿವೆ.

ವಿರೋಧ ಪಕ್ಷಗಳಾದ ಬಿಜೆಪಿ ಹಾಗೂ ಕಾಂಗ್ರೆಸ್ ಬೆಂಬಲದೊಂದಿದೆ ಹಿಂದೂಪರ ಸಂಘಟನೆಗಳು ಕೇರಳ ರಾಜ್ಯಾದ್ಯಂತ ಬೃಹತ ಪ್ರತಿಭಟನೆಯನ್ನು ಸಹ ನಡೆಸಿವೆ.

ಏತನ್ಮಧ್ಯೆ, ನ್ಯಾಯಾಲಯದ ಆದೇಶದಂತೆ ಶಬರಿಮಲೆಗೆ ಮಹಿಳೆಯರ ಪ್ರವೇಶಕ್ಕೆ ಅನುಮತಿಸಲು ಅಗತ್ಯವಾದ ಕ್ರಮ ಕೈಗೊಳ್ಳಲಾಗುವುದು ಎಂದು ಕೇರಳ ಸರಕಾರ ಮುಂದಾಗಿದೆ.

ಶಬರಿಮಲೆ ಅಯ್ಯಪ್ಪ ದೇಗುಲಕ್ಕೆ ಎಲ್ಲ ವಯೋಮಾನದ ಮಹಿಳೆಯರ ಪ್ರವೇಶಿಸಬಹುದು ಎಂದು ಸುಪ್ರೀಂಕೋರ್ಟ್ ಸೆಪ್ಟೆಂಬರ್ 28ರಂದು ತೀರ್ಪು ನೀಡಿತ್ತು.

ಸುಪ್ರೀಂ ತೀರ್ಪು ಏನಿತ್ತು?

ದೈಹಿಕ ಕಾರಣಗಳಿಗಾಗಿ ಮಹಿಳೆಯರಿಗೆ ದೇವಳ ಪ್ರವೇಶ ಹಕ್ಕು ನಿರಾಕರಿಸುವಂತಿಲ್ಲ.
ಧರ್ಮದ ಪರದೆ ಬಳಸಿ ಪೂಜಾ ಹಕ್ಕು ಕಸಿಯುವುದು ಮಾನವ ಘನತೆಗೆ ವಿರೋಧ.
ದೇಗುಲದ ನಿರ್ಬಂಧಗಳು ಧಾರ್ಮಿಕ ಆಚರಣೆಯಲ್ಲಿ ಇರಲೇಬೇಕಾದ್ದೇನೂ ಅಲ್ಲ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ