ಆ್ಯಪ್ನಗರ

ಕಾಶ್ಮೀರ ಗಡಿಯಲ್ಲಿ ಸಿಡಿಲು ಬಡಿದು ಸಾವನ್ನಪ್ಪಿದ ಯೋಧ!

ಜಮ್ಮು ಮತ್ತು ಕಾಶ್ಮೀರದ ಗಡಿಯಲ್ಲಿ ಕರ್ತವ್ಯದಲ್ಲಿದ್ದ ಯೋಧನಿಗೆ ಸಿಡಿಲು ಬಡಿದು ಸಾವನ್ನಪ್ಪಿದ್ದಾರೆ. ರೈಫಲ್‌ಮ್ಯಾನ್ ಲೋಕೇಂದ್ರ ಸಿಂಗ್ ಅವರನ್ನು ಬಾರಾಮುಲ್ಲಾದ ಗುಲ್ಮಾರ್ಗ್ ಸೆಕ್ಟರ್‌ನ ಎಲ್‌ಒಸಿಯ ಫಾರ್ವರ್ಡ್ ಪೋಸ್ಟ್‌ನಲ್ಲಿ ನಿಯೋಜಿಸಲಾಗಿತ್ತು.

Vijaya Karnataka Web 12 Jun 2022, 11:00 pm
ಹೊಸದಿಲ್ಲಿ: ಜಮ್ಮು ಮತ್ತು ಕಾಶ್ಮೀರದ ಗಡಿಯಲ್ಲಿ ಕರ್ತವ್ಯದಲ್ಲಿದ್ದ ಯೋಧನಿಗೆ ಸಿಡಿಲು ಬಡಿದು ಸಾವನ್ನಪ್ಪಿದ್ದಾರೆ. ರೈಫಲ್‌ಮ್ಯಾನ್ ಲೋಕೇಂದ್ರ ಸಿಂಗ್ ಅವರನ್ನು ಬಾರಾಮುಲ್ಲಾದ ಗುಲ್ಮಾರ್ಗ್ ಸೆಕ್ಟರ್‌ನ ಎಲ್‌ಒಸಿಯ ಫಾರ್ವರ್ಡ್ ಪೋಸ್ಟ್‌ನಲ್ಲಿ ನಿಯೋಜಿಸಲಾಗಿತ್ತು.
Vijaya Karnataka Web Lokendra Singh


ಲೋಕೇಂದ್ರ ಸಿಂಗ್ ಅವರು ಕರ್ತವ್ಯದಲ್ಲಿದ್ದಾಗ ಜೂನ್ 10ರಂದು ಸಿಡಿಲು ಬಡಿದು, ಅವರ ಆರೋಗ್ಯ ಸ್ಥಿತಿ ಗಂಭೀರವಾಗಿತ್ತು. ಹತ್ತಿರದ ಸೇನಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಶನಿವಾರ ರಾತ್ರಿ 11:45ಕ್ಕೆ ಮೃತಪಟ್ಟಿರುವುದಾಗಿ ಶ್ರೀನಗರದ ರಕ್ಷಣಾ ಪಿಆರ್‌ಒ ತಿಳಿಸಿದ್ದಾರೆ.



ಯೋಧನೊಬ್ಬ ಹೀಗೆ ಪ್ರಾಕೃತಿಕ ವಿಕೋಪದಿಂದ ದುರ್ಮರಣ ಹೊಂದಿರುವುದು ದುಃಖದ ಸಂಗತಿಯಾಗಿದೆ. ಈ ಕುರಿತು ಎಎನ್‌ಐ ಸುದ್ದಿ ಸಂಸ್ಥೆ ಟ್ವೀಟ್‌ ಮಾಡಿದ್ದು, ಇದಕ್ಕೆ ನೂರಾರು ಮಂದಿ ಕಂಬನಿ ಮಿಡಿದಿದ್ದಾರೆ. ಭಾರತದ ವೀರ ಪುತ್ರರು ಅಮರರಾಗಿ ಉಳಿಯಲಿ. ಭಾರತಮಾತೆ ಚಿರಾಯುವಾಗಲಿ ಎಂದು ಪ್ರತಿಕ್ರಿಯೆ ನೀಡಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ