ಆ್ಯಪ್ನಗರ

ಮಧ್ಯಪ್ರದೇಶ ಕಾಂಗ್ರೆಸ್‌ನಲ್ಲಿ ಫೈಟ್‌, ಜ್ಯೋತಿರಾದಿತ್ಯ ಸಿಂಧಿಯಾ ವರ್ಸಸ್‌ ಸಿಎಂ ಕಮಲ್‌ನಾಥ್‌

ಪ್ರತಿಯೊಂದು ವಿಷಯಕ್ಕೂ ಇಬ್ಬರು ನಾಯಕರ ನಡುವೆ ವಾಕ್ಸಮರ ನಡೆಯುತ್ತಿದೆ. ಚುನಾವಣೆ ಪ್ರಣಾಳಿಕೆಗಳನ್ನು ಈಡೇರಿಸದೇ ಇದ್ದರೆ ಹೋರಾಟ ನಡೆಸುವುದಾಗಿ ಜ್ಯೋತಿರಾದಿತ್ಯ ಸಿಂಧಿಯಾ ತಮ್ಮದೇ ಪಕ್ಷದ ಮುಖ್ಯಮಂತ್ರಿಗೆ ಎಚ್ಚರಿಕೆ ನೀಡಿದ್ದಾರೆ.

Vijaya Karnataka Web 15 Feb 2020, 12:13 pm
ಭೋಪಾಲ್‌: ಕಾಂಗ್ರೆಸ್‌ನಲ್ಲಿ ಎಲ್ಲವೂ ಸರಿ ಇಲ್ಲ ಎಂಬುದು ಜಗಜ್ಜಾಹೀರಾಗಿದೆ. ಚುನಾವಣೆಯಲ್ಲಿ ಸತತ ಸೋಲು ಅನುಭವಿಸುತ್ತಿರುವುದು ಒಂದು ಕಡೆಯಾದರೆ, ಬಹುತೇಕ ಎಲ್ಲ ರಾಜ್ಯಗಳಲ್ಲಿ ಸ್ಥಳೀಯ ನಾಯಕರ ಮುಸುಕಿನ ಗುದ್ದಾಟ ಈಗ ಬಹಿರಂಗವಾಗಿದೆ. ಇದು ಪಕ್ಷಕ್ಕೆ ತೀರಾ ಹೊಡೆತ ನೀಡುತ್ತಿದೆ. ಈಗ ಮಧ್ಯಪ್ರದೇಶದಲ್ಲಿ ಮತ್ತೊಂದು ಫೈಟ್‌ ನಡೆಯುತ್ತಿದೆ.
Vijaya Karnataka Web ಜ್ಯೋತಿರಾದಿತ್ಯ ಸಿಂಧಿಯಾ, ಕಮಲ್‌ನಾಥ್‌
ಜ್ಯೋತಿರಾದಿತ್ಯ ಸಿಂಧಿಯಾ, ಕಮಲ್‌ನಾಥ್‌


ಮುಖ್ಯಮಂತ್ರಿ ಕಮಲ್‌ನಾಥ್‌ ಹಾಗೂ ಜ್ಯೋತಿರಾದಿತ್ಯ ಸಿಂಧಿಯಾ ನಡುವಿನ ಗುದ್ದಾಟ ಬೀದಿಗೆ ಬಂದಿದೆ.

ಪ್ರತಿಯೊಂದು ವಿಷಯಕ್ಕೂ ಇಬ್ಬರು ನಾಯಕರ ನಡುವೆ ವಾಕ್ಸಮರ ನಡೆಯುತ್ತಿದೆ. ಚುನಾವಣೆ ಪ್ರಣಾಳಿಕೆಗಳನ್ನು ಈಡೇರಿಸದೇ ಇದ್ದರೆ ಹೋರಾಟ ನಡೆಸುವುದಾಗಿ ಜ್ಯೋತಿರಾದಿತ್ಯ ಸಿಂಧಿಯಾ ತಮ್ಮದೇ ಪಕ್ಷದ ಮುಖ್ಯಮಂತ್ರಿಗೆ ಎಚ್ಚರಿಕೆ ನೀಡಿದ್ದಾರೆ.

ಈಗ ಅತಿಥಿ ಉಪನ್ಯಾಸಕ ಬೇಡಿಕೆಗಳನ್ನು ಈಡೇರಿಸದಿದ್ದರೆ ಬೀದಿಗೆ ಇಳಿದು ಉಗ್ರ ಹೋರಾಟ ನಡೆಸಬೇಕಾಗುತ್ತದೆ ಎಂದು ಜ್ಯೋತಿರಾದಿತ್ಯ ಸಿಂಧಿಯಾ ಎಚ್ಚರಿಸಿದ್ದಾರೆ.

ಅತಿಥಿ ಉಪನ್ಯಾಸಕರು ನಡೆಸುತ್ತಿದ್ದ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿದ ಜ್ಯೋತಿರಾದಿತ್ಯ ಸಿಂಧಿಯಾ, ನೀವು ಒಬ್ಬಂಟಿ ಎಂದುಕೊಳ್ಳಬೇಡಿ. ನಿಮ್ಮ ಜತೆಗೆ ನಾನಿದ್ದೇನೆ. ಈ ಬೇಡಿಕೆಯನ್ನು ಕಾಂಗ್ರೆಸ್‌ ಪ್ರಣಾಳಿಕೆಗೆ ಸೇರಿಸಲಾಗಿದೆ. ಇದನ್ನು ಈಡೇರಿಸದೇ ಇದ್ದರೆ ಹೋರಾಟಕ್ಕೆ ಇಳಿಯೋಣ. ನಾನು ಸಾಥ್‌ ನೀಡುತ್ತೇನೆ ಎಂದು ಕಮಲ್‌ನಾಥ್‌ಗೆ ಪರೋಕ್ಷವಾಗಿ ಎಚ್ಚರಿಕೆ ನೀಡಿದ್ದಾರೆ.

ಜನರೇ ದೇವರು ಎಂದ ಸಿಂಧಿಯಾ

ಹೊಸದಿಲ್ಲಿ ಚುನಾವಣೆಯಲ್ಲಿ ಪಕ್ಷ ಹೀನಾಯವಾಗಿ ಸೋಲು ಕಂಡಿರುವ ಬಗ್ಗೆ ಜ್ಯೋತಿರಾದಿತ್ಯ ಸಿಂಧಿಯಾ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ.

ಜನತೆಯೇ ದೇವರು. ಅವರು ಕೈ ಹಿಡಿದರೆ ನಮಗೆ ವರ. ಇಲ್ಲದಿದ್ದರೆ ನೆಲಕಚ್ಚುತ್ತೇವೆ. ನಾನು ಇನ್ಮುಂದೆ ಬೇರು ಮಟ್ಟದಿಂದ ಕಾರ್ಯ ನಿರ್ವಹಿಸುತ್ತೇನೆ ಎಂದು ಜ್ಯೀತಿರಾದಿತ್ಯ ಸಿಂಧಿಯಾ ಸ್ಪಷ್ಟಪಡಿಸಿದ್ದಾರೆ.

ಇದಕ್ಕೆ ತಿರುಗೇಟು ನೀಡಿರುವ ಮುಖ್ಯಮಂತ್ರಿ ಕಮಲ್‌ನಾಥ್‌, ನಾವು ಪ್ರಣಾಳಿಕೆ ಈಡೇರಿಸಲು ನೀಡಿರುವ ಗಡುವು ಐದು ವರ್ಷಕ್ಕೆ ಹೊರತು ಐದು ತಿಂಗಳಿಗಲ್ಲ ಎಂದಿದ್ದಾರೆ.

ಹೊಸದಿಲ್ಲಿಯಲ್ಲಿ ಕಾಂಗ್ರೆಸ್‌ ವರಿಷ್ಠ ನಾಯಕಿ ಸೋನಿಯಾ ಗಾಂಧಿ ಅವರನ್ನು ಭೇಟಿ ಮಾಡಿದ ಮುಖ್ಯಮಂತ್ರಿ ಕಮಲ್‌ನಾಥ್‌ ರಾಜ್ಯದಲ್ಲಿ ನಡೆಯತ್ತಿರುವ ಬೆಳವಣಿಗೆಗಳ ಬಗ್ಗೆ ಮಾಹಿತಿ ನೀಡಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ