ಆ್ಯಪ್ನಗರ

ಮಸೀದಿ ಶಂಕುಸ್ಥಾಪನೆ ಕುರಿತು ಯೋಗಿ ಹೇಳಿಕೆ ವಿರೋಧಿಸಿದ ಸಮಾಜವಾದಿ ಪಕ್ಷ: ಕ್ಷಮೆಗೆ ಒತ್ತಾಯ!

ಹಿಂದೂವಾಗಿ ಬಾಬ್ರಿ ಮಸೀದಿ ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಾರೆ ಎಂಬ ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿಕೆಗೆ ತೀವ್ರ ವಿರೋಧ ವ್ಯಕ್ತವಾಗಿದೆ. ಯೋಗಿ ಆದಿತ್ಯನಾಥ್ ಹೇಳಿಕೆಯನ್ನು ಖಂಡಿಸಿರುವ ಸಮಾಜವಾದಿ ಪಕ್ಷ, ಯೋಗಿ ಆದಿತ್ಯನಾಥ್ ಕ್ಷಮೆ ಕೇಳಬೇಕು ಎಂದು ಒತ್ತಾಯಿಸಿದೆ.

Vijaya Karnataka Web 7 Aug 2020, 6:28 pm
ಲಖನೌ: ಹಿಂದೂವಾಗಿ ಬಾಬ್ರಿ ಮಸೀದಿ ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಾರೆ ಎಂಬ ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿಕೆಗೆ ತೀವ್ರ ವಿರೋಧ ವ್ಯಕ್ತವಾಗಿದೆ.
Vijaya Karnataka Web Yogi Adityanath
ಸಂಗ್ರಹ ಚಿತ್ರ


ಯೋಗಿ ಆದಿತ್ಯನಾಥ್ ಹೇಳಿಕೆಯನ್ನು ಖಂಡಿಸಿರುವ ಸಮಾಜವಾದಿ ಪಕ್ಷ, ಮುಖ್ಯಮಂತ್ರಿಯಾಗಿ ಯೋಗಿ ಆದಿತ್ಯನಾಥ್ ಇಂತಹ ಹೇಳಿಕೆ ನೀಡಿರುವುದು ಖಂಡನೀಯ ಎಂದು ಗುಡುಗಿದೆ.

ಯೋಗಿ ಆದಿತ್ಯನಾಥ್ ಸಮಸ್ತ ಉತ್ತರ ಪ್ರದೇಶದ ನಾಗರಿಕರ ಮುಖ್ಯಮಂತ್ರಿಯೇ ಹೊರತು ನಿರ್ದಿಷ್ಟ ಕೋಮಿನ ಜನರ ಮುಖ್ಯಮಂತ್ರಿಯಲ್ಲ. ಅವರಿಂದ ಇಂತಹ ಹೇಳಿಕೆ ನಿರೀಕ್ಷಿಸಿರಲಿಲ್ಲ ಎಂದು ಸಮಾಜವಾದಿ ಪಕ್ಷ ಕಿಡಿಕಾರಿದೆ.

ಸಿಎಂ ಆಗಿ ತಾರತಮ್ಯ ಮಾಡಲ್ಲ, ಹಿಂದೂವಾಗಿ ಮಸೀದಿ ಕಾರ್ಯಕ್ರಮಕ್ಕೆ ಹೋಗುವುದಿಲ್ಲ: ಸಿಎಂ ಯೋಗಿ

ಈ ಕುರಿತು ಮಾತನಾಡಿರುವ ಸಮಾಜವಾದಿ ಪಕ್ಷದ ವಕ್ತಾರ ಪವನ್ ಪಾಂಡೆ, ಹಿಂದೂವಾಗಿ ಬಾಬ್ರಿ ಮಸೀದಿ ಶಿಲಾನ್ಯಾಸ ಕಾರ್ಯಕ್ರಮಕ್ಕೆ ಹೋಗುವುದಿಲ್ಲ ಎಂಬ ಯೋಗಿ ಆದಿತ್ಯನಾಥ್ ಹೇಳಿಕೆಯನ್ನು ಖಂಡಿಸುವುದಾಗಿ ಹೇಳಿದರು.

ಮುಖ್ಯಮಂತ್ರಿಯಾಗಿ ತಾರತಮ್ಯ ಮಾಡುವುದಿಲ್ಲ ಆದರೆ ಓರ್ವ ಹಿಂದೂವಾಗಿ ಬಾಬ್ರಿ ಮಸೀದಿ ಭೂಮಿ ಪೂಜೆಯಲ್ಲಿ ಪಾಲ್ಗೊಳ್ಳಲು ಸಾಧ್ಯವಿಲ್ಲ ಎಂದು ಯೋಗಿ ಆದಿತ್ಯನಾಥ್ ಖಾಸಗಿ ವಾಹಿನಿಗೆ ನೀಡಿದ ಸಂದರ್ಶನವೊಂದರಲ್ಲಿ ಹೇಳಿದ್ದರು.

ಉತ್ತರಪ್ರದೇಶದ ಮುಖ್ಯಮಂತ್ರಿಯಾಗಿ ಯೋಗಿ ಆದಿತ್ಯನಾಥ್ ರಾಮ ಮಂದಿರ ಭೂಮಿ ಪೂಜೆಯಲ್ಲಿ ಪಾಲ್ಗೊಳ್ಳು ಸಾಧ್ಯವಾಗುವುದಾದರೆ, ಬಾಬ್ರಿ ಮಸೀದಿ ಭೂಮಿ ಪೂಜೆಯಲ್ಲಿ ಭಾಗವಗಹಿಸಲು ಏಕೆ ಸಾಧ್ಯವಿಲ್ಲ ಎಂದು ಪ್ರತಿಪಕ್ಷಗಳು ಪ್ರಶ್ನಿಸಿವೆ.

ರಾಮಮಂದಿರ ನಿರ್ಮಾಣ ಆಗಬೇಕೆಂದು ದಶಕಗಳ ಕನಸು, ತಲೆಮಾರುಗಳ ಆಶಯ ಈಡೇರಿದೆ: ಯೋಗಿ ಆದಿತ್ಯನಾಥ್‌

ಒಟ್ಟಿನಲ್ಲಿ ಯೋಗಿ ಆದಿತ್ಯನಾಥ್ ಅವರ ಹೇಳಿಕೆ ವಿಪಕ್ಷಗಳಿಗೆ ಆಹಾರ ಒದಗಿಸಿದ್ದು, ಉತ್ತರಪ್ರದೇಶದ ಪ್ರಮುಖ ವಿರೋಧ ಪಕ್ಷ ಸಮಾಜವಾದಿ ಪಕ್ಷ ಯೋಗಿ ಹೇಳಿಕೆಯನ್ನು ಟೀಕಿಸಿದ್ದರೆ ಕಾಂಗ್ರೆಸ್ ಯಾವುದೇ ಪ್ರತಿಕ್ರಿಯೆ ನೀಡುವ ಗೋಜಿಗೆ ಹೋಗಿಲ್ಲ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ