ಆ್ಯಪ್ನಗರ

ಕಪ್ಪು ಹಣ: ಪ್ರಧಾನಿ ಅಂಗಳಕ್ಕೆ ಜಗನ್-ಚಂದ್ರಬಾಬು ಜಗಳ

ಕಪ್ಪು ಹಣದ ವಿಷಯಕ್ಕೆ ಸಂಬಂಧಿಸಿದಂತೆ ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್.ಚಂದ್ರಬಾಬು ನಾಯ್ಡು ಹಾಗೂ ಪ್ರತಿಪಕ್ಷನಾಯಕ ವೈಎಸ್ ಜಗನ್ಮೋಹನ್ ರೆಡ್ಡಿ ಅವರ ನಡುವಿನ ರಾಜಕೀಯ ಸಮರ ಇದೀಗ ಪ್ರಧಾನಿ ನರೇಂದ್ರ ಮೋದಿ ಅವರ ಅಂಗಳ ತಲುಪಿದೆ.

ಏಜೆನ್ಸೀಸ್ 14 Oct 2016, 4:00 am
ಹೈದರಾಬಾದ್: ಕಪ್ಪು ಹಣದ ವಿಷಯಕ್ಕೆ ಸಂಬಂಧಿಸಿದಂತೆ ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್.ಚಂದ್ರಬಾಬು ನಾಯ್ಡು ಹಾಗೂ ಪ್ರತಿಪಕ್ಷನಾಯಕ ವೈಎಸ್ ಜಗನ್ಮೋಹನ್ ರೆಡ್ಡಿ ಅವರ ನಡುವಿನ ರಾಜಕೀಯ ಸಮರ ಇದೀಗ ಪ್ರಧಾನಿ ನರೇಂದ್ರ ಮೋದಿ ಅವರ ಅಂಗಳ ತಲುಪಿದೆ.
Vijaya Karnataka Web rs 10000 crore black money disclosure chandrababu naidu jagan reddy slugfest reaches pm modi
ಕಪ್ಪು ಹಣ: ಪ್ರಧಾನಿ ಅಂಗಳಕ್ಕೆ ಜಗನ್-ಚಂದ್ರಬಾಬು ಜಗಳ


ಕೇಂದ್ರ ಸರಕಾರದ ‘ಕಪ್ಪು ಹಣ ಘೋಷಣೆ ಯೋಜನೆ’(ಐಡಿಎಸ್) ಅಡಿ ಹೈದರಾಬಾದಿನ ವ್ಯಕ್ತಿಯೊಬ್ಬರು 10 ಸಾವಿರ ಕೋಟಿ ರೂ. ಕಪ್ಪುಹಣ ಘೋಷಿಸಿಕೊಂಡ ಬೆನ್ನಲ್ಲೇ, ಈ ಬಗ್ಗೆ ಚಂದ್ರಬಾಬು ನೀಡಿದ ಹೇಳಿಕೆ ವಿವಾದಕ್ಕೆ ದಾರಿ ಮಾಡಿದೆ.

ಕಪ್ಪು ಹಣದ ಬಗ್ಗೆ ಪ್ರತಿಕ್ರಿಯಿಸಿದ್ದ ಚಂದ್ರಬಾಬು ‘‘ಈ ಕಪ್ಪುಹಣ ಬಹುಶಃ ನನ್ನ ರಾಜಕೀಯ ವೈರಿಗಳ ಖಾತೆಯದ್ದೇ ಇರಬಹುದು,’’ ಎಂದು ಪರೋಕ್ಷವಾಗಿ ವೈಎಸ್‌ಆರ್ ಕಾಂಗ್ರೆಸ್ ನಾಯಕನ ವಿರುದ್ಧ ವಾಗ್ದಾಳಿ ನಡೆಸಿದ್ದರು.

ಪ್ರಧಾನಿಗೆ ಜಗನ್ ಪತ್ರ:

ನಾಯ್ಡು ಅವರ ಆರೋಪವನ್ನು ತಳ್ಳಿಹಾಕಿರುವ ಜಗನ್, ಈ ಸಂಬಂಧ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ. 2016 ಐಡಿಎಸ್ ಪಟ್ಟಿಯನ್ನು ಪ್ರಕಟಿಸುವಂತೆ ಮತ್ತು ಆಂಧ್ರ ಮುಖ್ಯಮಂತ್ರಿ ವಿರುದ್ಧದ ಭ್ರಷ್ಟಾಚಾರ ಆರೋಪದ ಬಗ್ಗೆ ತನಿಖೆ ನಡೆಸುವಂತೆ ಆಗ್ರಹಿಸಿದ್ದಾರೆ.

ಈ ಮಧ್ಯೆ, ಚಂದ್ರಬಾಬು ನಾಯ್ಡು ಸಹ ಪ್ರಧಾನಿಗೆ ಪತ್ರ ಬರೆದಿದ್ದು, ಕಪ್ಪು ಹಣ ತಡೆ, ನಕಲಿ ನೋಟು ತಡೆಗಟ್ಟಲು 500 ರೂ. ಹಾಗೂ 1,000 ರೂ. ಮುಖಬೆಲೆಯ ನೋಟುಗಳ ಮುದ್ರಣ ಹಾಗೂ ಚಲಾವಣೆ ನಿಲ್ಲಿಸುವಂತೆ ಸಲಹೆ ನೀಡಿದ್ದಾರೆ.

ಬುಧವಾರ ಹೈದರಾಬಾದ್‌ನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ದ ಚಂದ್ರಬಾಬು ಅವರು ‘‘ಐಡಿಎಸ್ ಯೋಜನೆಯಡಿ ಹೈದರಾಬಾದಿನಿಂದ ಒಟ್ಟಾರೆ 13,000 ಕೋಟಿ ರೂ. ಕಪ್ಪುಹಣ ಘೋಷಣೆಯಾಗಿದೆ. ಈ ಪೈಕಿ 10 ಸಾವಿರ ಕೋಟಿ ರೂ. ಹೈದರಾಬಾದ್ ಮೂಲದ ಉದ್ಯಮಿ ಹೆಸರಿನಿಂದ ಘೋಷಣೆಯಾಗಿದೆ. ಆದರೆ, ಕಾನೂನಿನ ಪ್ರಕಾರ ಆ ವ್ಯಕ್ತಿಯ ವಿವರಗಳನ್ನು ಬಹಿರಂಗಪಡಿಸುವಂತಿಲ್ಲ,’’ ಎಂದಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ