ಆ್ಯಪ್ನಗರ

ಸರ್ದಾರ್‌ ಪಟೇಲ್‌ ಹೆಸರು ಅಳಿಸಿಹಾಕಲು ಯತ್ನಿಸಲಾಗಿತ್ತು: ಪ್ರಧಾನಿ ಮೋದಿ

ರಾಷ್ಟ್ರೀಯ ಏಕತಾ ದಿವಸ್ ಅಂಗವಾಗಿ ಮೇಜರ್ ಧ್ಯಾನ್‌ಚಂದ್ ಕ್ರೀಡಾಂಗಣದಲ್ಲಿ ಏಕತಾ ಓಟಕ್ಕೆ ಮೋದಿ ಚಾಲನೆ ನೀಡಿದರು.

Vijaya Karnataka Web 31 Oct 2017, 3:59 pm
ಹೊಸದಿಲ್ಲಿ: ದೇಶದ ಏಕತೆ ಮತ್ತು ಐಕ್ಯತೆಗಾಗಿ ಶ್ರಮಿಸಿದ ಉಕ್ಕಿನ ಮನುಷ್ಯ, ಮಾಜಿ ಉಪಪ್ರಧಾನಿ ಸರ್ದಾರ್ ವಲ್ಲಭಭಾಯ್ ಪಟೇಲ್ ಅವರ ಕೊಡುಗೆ ಅಪಾರವಾಗಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ.
Vijaya Karnataka Web run for unity on rashtriya ekta diwas
ಸರ್ದಾರ್‌ ಪಟೇಲ್‌ ಹೆಸರು ಅಳಿಸಿಹಾಕಲು ಯತ್ನಿಸಲಾಗಿತ್ತು: ಪ್ರಧಾನಿ ಮೋದಿ


ಹೊಸದಿಲ್ಲಿಯಲ್ಲಿ ಆಯೋಜಿಸಿದ್ದ ರಾಷ್ಟ್ರೀಯ ಏಕತಾ ದಿವಸ್ ಅಂಗವಾಗಿ ಮೇಜರ್ ಧ್ಯಾನ್‌ಚಂದ್ ಕ್ರೀಡಾಂಗಣದಲ್ಲಿ ಏಕತಾ ಓಟಕ್ಕೆ ಚಾಲನೆ ನೀಡಿದ ನಂತರ ಮೋದಿ ಮಾತನಾಡಿದರು.

ಸಣ್ಣ ಸಣ್ಣ ರಾಜ್ಯಗಳನ್ನು ಒಗ್ಗೂಡಿಸಿ ಬಲಿಷ್ಠ ಭಾರತ ನಿರ್ಮಾಣ ಮಾಡಲು ಶ್ರಮಿಸಿದ ಮಹಾನ್ ನಾಯಕನೆಂದು ಸರ್ದಾರ್ ಪಟೇಲ್ ಅವರ ಸೇವೆಯನ್ನು ಸ್ಮರಿಸಿಕೊಂಡರು.

ಇಂಥ ಮಹಾನ್‌ ನಾಯಕನ ಹೆಸರು, ಸಾಧನೆಗಳನ್ನು ಇತಿಹಾಸದಿಂದಲೇ ಅಳಿಸಿ ಹಾಕುವ ಯತ್ನ ಈ ಹಿಂದೆ ನಡೆದಿತ್ತು ಎಂದು ಪರೋಕ್ಷವಾಗಿ ಕಾಂಗ್ರೆಸ್‌ಗೆ ಮೋದಿ ಟಾಂಗ್‌ ಕೊಟ್ಟರು

ಸರ್ದಾರ್ ಪಟೇಲ್‌ರ 143ನೇ ಜನ್ಮದಿನ ಅಂಗವಾಗಿ ರಾಷ್ಟ್ರೀಯ ಏಕತಾ ಓಟಕ್ಕೆ ದೇಶಾದ್ಯಂತ ವ್ಯಾಪಕ ಬೆಂಬಲ ವ್ಯಕ್ತವಾಗಿದೆ. 2022ರ 75ನೇ ಸ್ವಾತಂತ್ರ್ಯ ದಿನಾಚರಣೆಯೊಳಗಾಗಿ ನವಭಾರತ ನಿರ್ಮಾಣಕ್ಕೆ ಎಲ್ಲರ ಸಹಕಾರ ಅತ್ಯಗತ್ಯವಾಗಿದೆ ಎಂದು ಅವರು ಪ್ರತಿಪಾದಿಸಿದರು.

ಇದೇ ಸಂದರ್ಭದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ, ಏಕತೆಗಾಗಿ ಸಾವಿರಾರು ಮಕ್ಕಳ ಸಮ್ಮುಖದಲ್ಲಿ ಪ್ರತಿಜ್ಞಾ ವಿಧಿ ಬೋಧಿಸಿದರು. ಏಕತೆಗಾಗಿ ಓಟ ಸಂದರ್ಭದಲ್ಲಿ ಅನೇಕ ಕ್ರೀಡಾಪಟುಗಳು, ಸಾರ್ವಜನಿಕರು ದೊಡ್ಡ ಪ್ರಮಾಣದಲ್ಲಿ ಪಾಲ್ಗೊಂಡಿದ್ದು ವಿಶೇಷವಾಗಿತ್ತು.

ಗೃಹ ಸಚಿವ ರಾಜನಾಥ್‌ಸಿಂಗ್, ಏಕ್ ಭಾರತ್ ಶ್ರೇಷ್ಠ್ ಭಾರತ್ ನಿರ್ಮಾಣಕ್ಕೆ ಎಲ್ಲರ ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.

'Run For Unity' on Rashtriya Ekta Diwas

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ