ಆ್ಯಪ್ನಗರ

ಪತಿ ಮನೆಯಲ್ಲಿ ವಾಸಿಸಲು ಕನಕದುರ್ಗಾಗೆ ಅವಕಾಶ

ಜ.2ರಂದು ಅಯ್ಯಪ್ಪ ದೇಗುಲ ಪ್ರವೇಶಿಸಿದ್ದ ಋುತುಮತಿ ವಯಸ್ಸಿನ ಮಹಿಳೆ ಕನಕದುರ್ಗಾ (44) ಅವರು ಮನೆಗೆ ಮರಳುತ್ತಿದ್ದಂತೆ ಅತ್ತೆ ಮತ್ತು ಕುಟುಂಬ ಸದಸ್ಯರು ಹಲ್ಲೆ ನಡೆಸಿದ್ದರು.

Vijaya Karnataka 6 Feb 2019, 7:55 am
ಮಲಪ್ಪುರಂ: ಶಬರಿಮಲೆ ಅಯ್ಯಪ್ಪ ಸ್ವಾಮಿ ದೇಗುಲ ಪ್ರವೇಶಿಸಿದ್ದ ಕನಕದುರ್ಗಾ ಅವರಿಗೆ ವಾಸಿಸಲು ಅವಕಾಶ ನೀಡುವಂತೆ ಆಕೆಯ ಪತಿ ಮನೆಯವರಿಗೆ ಸ್ಥಳೀಯ ಗ್ರಾಮ ನ್ಯಾಯಾಲಯ ಮಂಗಳವಾರ ಆದೇಶಿಸಿದೆ. ಜ.2ರಂದು ಅಯ್ಯಪ್ಪ ದೇಗುಲ ಪ್ರವೇಶಿಸಿದ್ದ ಋುತುಮತಿ ವಯಸ್ಸಿನ ಮಹಿಳೆ ಕನಕದುರ್ಗಾ (44) ಅವರು ಮನೆಗೆ ಮರಳುತ್ತಿದ್ದಂತೆ ಅತ್ತೆ ಮತ್ತು ಕುಟುಂಬ ಸದಸ್ಯರು ಹಲ್ಲೆ ನಡೆಸಿದ್ದರು. ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ ಬಿಡುಗಡೆಯಾದ ಬಳಿಕ ಪುನಃ ಮನೆಗೆ ಸೇರಿಸಿಕೊಳ್ಳಲು ನಿರಾಕರಿಸಿದ್ದರು.
Vijaya Karnataka Web kanaka


ಪತಿ ಮನೆಯಲ್ಲಿ ವಾಸಿಸಲು ತನಗೆ ಹಕ್ಕಿದೆ ಎಂದು ಪ್ರತಿಪಾದಿಸಿ ಕನಕದುರ್ಗಾ ಆಂತರಿಕ ಹಿಂಸಾಚಾರ ತಡೆ ಕಾಯ್ದೆ ಅಡಿಯಲ್ಲಿ ದೂರು ದಾಖಲಿಸಿದ್ದರು. ಈ ನಡುವೆ, ಕನಕದುರ್ಗಾ ಹಾಗೂ ಬಿಂದು (42) ಪ್ರವೇಶದ ಬಳಿಕ ದೇಗುಲಕ್ಕೆ ಬೀಗ ಹಾಕಿ ಶುದ್ಧೀಕರಣ ಕಾರ್ಯ ಕೈಗೊಂಡಿದ್ದರ ಬಗ್ಗೆ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಪ್ರಧಾನ ಅರ್ಚಕ ಕುಂದರಾರು ರಾಜೀವಾರು ಅವರು ತಿರುವಾಂಕೂರು ದೇವಸ್ವಂ ಮಂಡಳಿಗೆ ವಿವರಣೆ ನೀಡಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ