ಆ್ಯಪ್ನಗರ

ಶಬರಿಮಲೆ ಬಾಗಿಲು ಓಪನ್‌: ಮಹಿಳೆಯರಿಗೆ ದೇಗುಲ ಪ್ರವೇಶಕ್ಕೆ ಕಾಲಾವಕಾಶ ಕೋರಿದ ದೇವಸ್ವಂ ಮಂಡಳಿ

ಮಲೆ ಏರಲು ಸಜ್ಜಾಗಿರುವ ಕೆಲವು ಮಹಿಳೆಯರು

Vijaya Karnataka Web 16 Nov 2018, 6:19 pm
ಕೊಚ್ಚಿ: ಮಂಡಲ ಪೂಜೆ ಹಿನ್ನೆಲೆಯಲ್ಲಿ ಶಬರಿಮಲೆ ದೇಗುಲದ ಬಾಗಿಲು ಶುಕ್ರವಾರ ಸಂಜೆ ತೆರೆಯಲಾಗಿದೆ. ಎರಡು ತಿಂಗಳ ಕಾಲ ದೇಗುಲದಲ್ಲಿ ಮಂಡಲ ಪೂಜೆ ನಡೆಯಲಿದೆ.
Vijaya Karnataka Web ಶಬರಿಮಲೆ
ಶಬರಿಮಲೆ


ಮಹಿಳೆಯರಿಗೆ ದೇಗುಲ ಪ್ರವೇಶಕ್ಕೆ ಅವಕಾಶ ಕಲ್ಪಿಸುವುದಕ್ಕೆ ಹೆಚ್ಚುವರಿ ಕಾಲಾವಕಾಶ ಬೇಕೆಂದು ಟ್ರಾವಂಕೂರು ದೇವಸ್ವಂ ಮಂಡಳಿ ಮನವಿ ಮಾಡಲು ಮುಂದಾಗಿದೆ. ಈ ಸಂಬಂಧ ಶನಿವಾರ ಅಥವಾ ಸೋಮವಾರ ಅರ್ಜಿ ಸಲ್ಲಿಸಲು ನಿರ್ಧರಿಸಲಾಗಿದೆ.

ಶುಕ್ರವಾರ ಸಂಜೆ 5 ಗಂಟೆಗೆ ದೇಗುಲ ಬಾಗಿಲು ತೆರೆಯಲಿದ್ದು, ಪೂಜೆ ಮಾತ್ರ ಇರಲಿವೆ. ಆದರೆ ಇಂದು ಕೆಲವೇ ಕೆಲವು ಭಕ್ತರಿಗೆ ದರ್ಶನ ಭಾಗ್ಯ ಸಿಗಲಿದೆ.

ಈ ನಡುವೆ ಕೆಲವು ಮಹಿಳಾ ಸಂಘಟನೆಯವರು ತೃಪ್ತಿ ದೇಸಾಯಿ ನೇತೃತ್ವದಲ್ಲಿ ಕೊಚ್ಚಿ ವಿಮಾನ ನಿಲ್ದಾಣಕ್ಕೆ ಆಗಮಿಸಿದಾಗ ಹಿಂದೂ ಪರ ಹೋರಾಟಗಾರರು ಪ್ರತಿಭಟನೆ ನಡೆಸಿ ತಡೆದರು.

18 ಮೆಟ್ಟಿಲು ಏರಲು ಸಜ್ಜಾಗಿರುವ ನೂತನ ತಂತ್ರಿ


ಕೊಚ್ಚಿ ವಿಮಾನ ನಿಲ್ದಾಣದಲ್ಲಿ ಶುಕ್ರವಾರ ಬೆಳಗ್ಗೆ ಭಾರಿ ಪ್ರತಿಭಟನೆ ನಡೆದವು.

ಮಂಡಲ ಪೂಜೆ ಶುಕ್ರವಾರದಿಂದ ಆರಂಭವಾಗಲಿದ್ದು, ಮಕರ ಸಂಕ್ರಾಂತಿ ದಿನದಂದು ನಡಯಲಿರುವ ಜ್ಯೋತಿ ಉತ್ಸವದವರೆಗೂ ಸಾಗಲಿದೆ.

ಅಯ್ಯಪ್ಪ ದರ್ಶನಕ್ಕೆ ಸುಮಾರು 700 ಮಹಿಳೆಯರು ನೋಂದಣಿ ಮಾಡಿಸಿಕೊಂಡಿದ್ದಾರೆ.


ದೇಗುಲಕ್ಕೆ ಮಹಿಳೆಯರ ಪ್ರವೇಶಕ್ಕೆ ಭಾರಿ ವಿರೋಧ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ ಬಿಗಿ ಪೊಲೀಸ್‌ ಬಂದೋಬಸ್ತ್‌ ವ್ಯವಸ್ಥೆ ಮಾಡಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ