ಆ್ಯಪ್ನಗರ

ರಾಜಸ್ಥಾನ ಕಾಂಗ್ರೆಸ್ ಕಾಕ್‌ಪಿಟ್ ಸೇರುವರೇ ಪೈಲಟ್? ಹೊಡೆಯುವುದೇ ಜಾಕ್‌ಪಾಟ್?

ಸಂಧಾನ ಮಾತುಕತೆಗೆ ವರಿಷ್ಠರು ಆಹ್ವಾನವನ್ನು ಧಿಕ್ಕರಿಸಿದ್ದ ಪೈಲಟ್‌ ಇದೇ ಮೊದಲ ಬಾರಿಗೆ ರಾಹುಲ್‌ ಮತ್ತು ಪ್ರಿಯಾಂಕಾ ಗಾಂಧಿ ಜೊತೆ ಮಾತುಕತೆ ನಡೆಸಿದ್ದಾರೆ. ಈ‌ ಸಂಧಾನದೊಂದಿಗೆ ಪಕ್ಷದಲ್ಲಿ ರಾಹುಲ್‌ ಗಾಂಧಿ ಅವರ ವರ್ಚಸ್ಸು ವೃದ್ಧಿಸಿದ್ದರೆ, ಇದೇ ವೇಳೆ ಬಿಜೆಪಿ ಭಾರಿ ಹಿನ್ನಡೆ ಅನುಭವಿಸಿದೆ.

Agencies 10 Aug 2020, 9:31 pm

ಹೊಸದಿಲ್ಲಿ: ರಾಜಸ್ಥಾನದಲ್ಲಿ ಮುಖ್ಯಮಂತ್ರಿ ಅಶೋಕ್‌ ಗೆಹ್ಲೋಟ್‌ ವಿರುದ್ಧ ಬಂಡಾಯ ಸಮರ ಸಾರಿ, ಸರಕಾರವನ್ನು ಪತನದಂಚಿಗೆ ತಳ್ಳಿದ್ದ ಮಾಜಿ ಉಪ ಮುಖ್ಯಮಂತ್ರಿ ಸಚಿನ್‌ ಪೈಲಟ್‌ ಕಾಂಗ್ರೆಸ್‌ಗೆ ಮರಳುವ ಎಲ್ಲಾ ಸಾಧ್ಯತೆ ಇದೆ.
Vijaya Karnataka Web Sachin Pilot


ಕಾಂಗ್ರೆಸ್‌ ಮುಖಂಡರಾದ ರಾಹುಲ್‌ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ ಅವರೊಂದಿಗೆ ಪೈಲಟ್‌ ಸೋಮವಾರ ದಿಲ್ಲಿಯಲ್ಲಿ ಸುದೀರ್ಘ ಸಮಾಲೋಚನೆ ನಡೆಸುವ ಮೂಲಕ ಕುತೂಹಲ ಮೂಡಿಸಿದ್ದಾರೆ. ಈ ಭೇಟಿ ಬಳಿಕ ಕಾಂಗ್ರೆಸ್‌ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಮೂವರು ಸದಸ್ಯರ ಸಮಿತಿ ರಚಿಸಲು ನಿರ್ಧರಿಸಿದ್ದು, ಪೈಲಟ್ ಬಣದ ಅಸಮಧಾನಗಳಿಗೆ ಸೂಕ್ತ ಉತ್ತರ ಕಂಡುಕೊಳ್ಳಲು ನಿರ್ಧರಿಸಿದ್ದಾರೆ.

'ನಾನು ಅಶೋಕ್ ಗೆಹ್ಲೋಟ್ ಜೊತೆಗಿದ್ದೇನೆ' - ಪೈಲಟ್‌ ಬಣದ ಬಂಡಾಯ ಶಾಸಕನಿಂದ ಯೂ-ಟರ್ನ್‌!

ಸಂಧಾನ ಮಾತುಕತೆಗೆ ವರಿಷ್ಠರು ಆಹ್ವಾನವನ್ನು ಧಿಕ್ಕರಿಸಿದ್ದ ಪೈಲಟ್‌ ಇದೇ ಮೊದಲ ಬಾರಿಗೆ ಮಾತುಕತೆ ನಡೆಸಿದ್ದಾರೆ. ಈ ಬಗ್ಗೆ ಮಾಹಿತಿ ನೀಡಿರುವ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್‌, "ಸಚಿನ್ ಪೈಲಟ್ ಮಾಜಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿ ತಮ್ಮ ಕುಂದುಕೊರತೆಗಳನ್ನು ವಿವರವಾಗಿ ತಿಳಿಸಿದರು. ಅವರು ಸ್ಪಷ್ಟವಾದ, ಮುಕ್ತ ಮತ್ತು ನಿರ್ಣಾಯಕ ಚರ್ಚೆಯನ್ನು ನಡೆಸಿದರು. ರಾಜಸ್ಥಾನದಲ್ಲಿ ಕಾಂಗ್ರೆಸ್ ಪಕ್ಷ ಮತ್ತು ಕಾಂಗ್ರೆಸ್ ಸರಕಾರದ ಹಿತದೃಷ್ಟಿಯಿಂದ ಕೆಲಸ ಮಾಡಲು ಸಚಿನ್ ಪೈಲಟ್ ಬದ್ಧರಾಗಿದ್ದಾರೆ," ಎಂದಿದ್ದಾರೆ.

ರಾಜಸ್ಥಾನದಲ್ಲಿ ಮಿಂಚಿನ ಬೆಳವಣಿಗೆ: ರಾಹುಲ್‌, ಪ್ರಿಯಾಂಕಾ ಗಾಂಧಿ ಭೇಟಿಯಾದ ಸಚಿನ್‌ ಪೈಲಟ್‌!

ಈ ಸಭೆಯ ನಂತರ, ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಸಚಿನ್ ಪೈಲಟ್ ಮತ್ತು ಅನ್ಯಾಯಕ್ಕೊಳಗಾದ ಶಾಸಕರು ಎತ್ತಿರುವ ಸಮಸ್ಯೆಗಳನ್ನು ಪರಿಹರಿಸಲು ಎಐಸಿಸಿ ಕಡೆಯಿಂದ ಮೂರು ಸದಸ್ಯರ ಸಮಿತಿಯನ್ನು ರಚಿಸಲು ನಿರ್ಧರಿಸಿದ್ದಾರೆ. ಇದರ ಆಧಾರದ ಮೇಲೆ ಸೂಕ್ತ ನಿರ್ಣಯಕ್ಕೆ ಬರಲಿದ್ದಾರೆ ಎಂದು ವೇಣುಗೋಪಾಲ್‌ ವಿವರಿಸಿದ್ದಾರೆ.

ಸಚಿನ್‌ ಪೈಲಟ್‌ ಸಂಧಾನದೊಂದಿಗೆ ಪಕ್ಷದಲ್ಲಿ ರಾಹುಲ್‌ ಗಾಂಧಿ ಅವರ ವರ್ಚಸ್ಸು ವೃದ್ಧಿಸಿದೆ, ಇದೇ ವೇಳೆ ಬಿಜೆಪಿಗೆ ಭಾರಿ ಹಿನ್ನಡೆಯೂ ಆಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ