ಆ್ಯಪ್ನಗರ

ರಾಜಸ್ಥಾನ ಸ್ಪೀಕರ್ ಸಿಪಿ ಜೋಷಿ ಅವರಿ‌ಗೆ ಹುಟ್ಟು ಹಬ್ಬದ ಶುಭಾಶಯ ತಿಳಿಸಿದ ಸಚಿನ್ ಪೈಲಟ್!

ರಾಜಸ್ಥಾನ ವಿಧಾನಸಭೆ ಸ್ಪೀಕರ್ ಸಿಪಿ ಜೋಷಿ ಅವರಿಗೆ ಸಚಿನ್ ಪೈಲಟ್ ಹುಟ್ಟು ಹಬ್ಬದ ಶುಭಾಶಯ ಕೋರಿದ್ದಾರೆ. ರಾಜಕಾರಣ ಹಾಗೂ ವೈಯಕ್ತಿಕ ಸಂಬಂಧಗಳನ್ನು ಬೇರೆ ಬೇರೆ ದೃಷ್ಟಿಯಿಂದ ನೋಡುವ ಮೂಲಕ ಪೈಲಟ್ ಮಾದರಿಯಾಗಿದ್ದಾರೆ.

Vijaya Karnataka Web 29 Jul 2020, 12:24 pm
ಜೈಪುರ್: ರಾಜಕಾರಣ ಬೇರೆ, ವೈಯಕ್ತಿಕ ಸಂಬಂಧಗಳು ಬೇರೆ ಎಂಬ ಮಾತಿದೆ. ಅದಕ್ಕೆ ರಾಜಸ್ಥಾನ ರಾಜಕೀಯ ಬಿಕ್ಕಟ್ಟಿನ ಸೂತ್ರದಾರ ಸಚಿನ್ ಪೈಲಟ್ ಸಾಕ್ಷಿ ಒದಗಿಸಿದ್ದಾರೆ.
Vijaya Karnataka Web CP Joshi
ಸಂಗ್ರಹ ಚಿತ್ರ


ಬಂಡಾಯಕ್ಕೆ ವಿರೋಧವಾಗಿ ತಮಗೆ ಅನರ್ಹತೆ ನೋಟಿಸ್ ಜಾರಿ ಮಾಡಿದ್ದ ಮತ್ತು ನ್ಯಾಯಾಲಯಗಳಲ್ಲಿ ತಮ್ಮ ವಿರುದ್ಧ ಕಾನೂನು ಸಮರ ಸಾರಿದ್ದ ರಾಜಸ್ಥಾನ ವಿಧಾನಸಭೆ ಸ್ಪೀಕರ್ ಸಿಪಿ ಜೋಷಿ ಅವರಿಗೆ ಸಚಿನ್ ಪೈಲಟ್ ಹುಟ್ಟು ಹಬ್ಬದ ಶುಭಾಶಯ ಕೋರಿದ್ದಾರೆ.

ಸಈ ಕುರಿತು ಟ್ವೀಟ್ ಮಾಡಿರುವ ಸಚಿನ್ ಪೈಲಟ್, ಸಿಪಿ ಜೋಷಿ ಅವರಿಗೆ ದೀರ್ಘಾಯುಷ್ಯ ಮತ್ತು ಆರೋಗ್ಯವನ್ನು ಬಯಸುವುದಾಗಿ ಹೇಳಿದ್ದಾರೆ. ಇದಕ್ಕೆ ಸಿಪಿ ಜೋಷಿ ಕೂಡ ಧನ್ಯವಾದ ಅರ್ಪಿಸಿದ್ದಾರೆ.

ರಾಜಸ್ಥಾನ ಬಿಕ್ಕಟ್ಟು: ಯಥಾಸ್ಥಿತಿ ಕಾಯ್ದುಕೊಳ್ಳಲು ಹೈಕೋರ್ಟ್‌ ಆದೇಶ; ಪೈಲಟ್‌ ಕ್ಯಾಂಪ್‌ಗೆ ಬಿಗ್‌ ರಿಲೀಫ್‌

ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ವಿರುದ್ಧ ಬಂಡಾಯ ಎದ್ದಿರುವ ಸಚಿನ್ ಪೈಲಟ್ ಹಾಗೂ ಅವರ 18 ಬೆಂಬಲಿಗ ಶಾಸಕರಿಗೆ ಸಿಪಿ ಜೋಷಿ ಸನರ್ಹತೆ ನೋಟಿಸ್ ಜಾರಿ ಮಾಡಿದ್ದರು.

ಇದನ್ನು ಪ್ರಶ್ನಿಸಿ ಸಚಿನ್ ಪೈಲಟ್ ಹೈಕೋರ್ಟ್ ಮೆಟ್ಟಿಲೇರಿದ್ದರು. ಆದರೆ ರಾಜಸ್ಥಾನ ಹೈಕೋರ್ಟ್ ಈ ಕುರಿತು ತೀರ್ಪು ಪ್ರಕಟಿಸದಂತೆ ಕೋರಿ ಸಿಪಿ ಜೋಷಿ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು.

ಆದರೆ ಸಿಪಿ ಜೋಷಿ ಅರ್ಜಿ ತಿರಸ್ಕರಿಸಿದ್ದ ಸುಪ್ರೀಂಕೋರ್ಟ್, ಹೈಕೋರ್ಟ್‌ಗೆ ತೀರ್ಪು ಪ್ರಕಟಿಸಲು ಸೂಚನೆ ನೀಡಿತು. ಅದರಂತೆ ಸಚಿನ್ ಪೈಲಟ್ ಬಣದ ವಿರುದ್ಧ ಸದ್ಯಕ್ಕೆ ಯಾವುದೇ ಕ್ರಮ ಬೇಡ ಎಂದು ರಾಜಸ್ಥಾನ ಹೈಕೋರ್ಟ್ ತೀರ್ಪು ನೀಡಿತ್ತು.

ಸಚಿನ್‌ ಪೈಲಟ್‌ಗೆ ಗೆಲುವು: ನೋಟಿಸ್‌ ಬಗ್ಗೆ ಹೈ ಕೋರ್ಟ್ ಆದೇಶ ನೀಡಬಹುದು ಎಂದ ಸುಪ್ರೀಂಕೋರ್ಟ್‌

ಈ ಎಲ್ಲ ಬೆಳವಣಿಗೆಗಳಿಂದಾಗಿ ಸಿಪಿ ಜೋಷಿ ಹಾಗೂ ಸಚಿನ್ ಪೈಲಟ್ ನಡುವಿನ ಸಂಬಂಧ ಹಳಿಸಿದೆ ಎಂದೇ ಎಲ್ಲರೂ ಭಾವಿಸಿದ್ದರು. ಆದರೆ ಜೋಷಿ ಅವರಿಗೆ ಹುಟ್ಟುಹಬ್ಬದ ಶುಭಾಶಯ ಕೋರುವ ಮೂಲಕ ಸಚಿನ್ ಪೈಲಟ್ ರಾಜಕಾರಣ ಮತ್ತು ವೈಯಕ್ತಿಕ ಸಂಬಂಧಗಳನ್ನು ಬೆರೆಸದಿರುವ ನಿರ್ಧಾರ ಕೈಗೊಂಡಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ