ಆ್ಯಪ್ನಗರ

ಸದೈವ ಅಟಲ್‌ ಸ್ಮಾರಕ ಲೋಕಾರ್ಪಣೆ

ರಾಷ್ಟ್ರಪತಿ ರಾಮನಾಥ್‌ ಕೋವಿಂದ್‌, ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು ಮತ್ತು ಪ್ರಧಾನಿ ನರೇಂದ್ರ ಮೋದಿ ಅವರು ರಾಷ್ಟ್ರೀಯ ಸ್ಮೃತಿ ಸ್ಥಳ ಸಮೀಪದ 'ಸುದೈವ ಅಟಲ್‌' ಸ್ಮಾರಕಕ್ಕೆ ಪುಷ್ಪ ನಮನ ಸಲ್ಲಿಸಿ, ಧೀಮಂತ ನಾಯಕನನ್ನು ಸ್ಮರಿಸಿದರು.

Vijaya Karnataka 26 Dec 2018, 5:00 am
ಹೊಸದಿಲ್ಲಿ: ಮಾಜಿ ಪ್ರಧಾನಿ ದಿವಂಗತ ಅಟಲ್‌ ಬಿಹಾರಿ ವಾಜಪೇಯಿ ಸ್ಮರಣಾರ್ಥ ಇಲ್ಲಿ ನಿರ್ಮಿಸಿರುವ 'ಸುದೈವ ಅಟಲ್‌' ಸ್ಮಾರಕ ಅವರ 94ನೇ ಜನ್ಮದಿನದ ಅಂಗವಾಗಿ ಮಂಗಳವಾರ ಲೋಕಾರ್ಪಣೆಗೊಂಡಿತು.
Vijaya Karnataka Web atal


ರಾಷ್ಟ್ರಪತಿ ರಾಮನಾಥ್‌ ಕೋವಿಂದ್‌, ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು ಮತ್ತು ಪ್ರಧಾನಿ ನರೇಂದ್ರ ಮೋದಿ ಅವರು ರಾಷ್ಟ್ರೀಯ ಸ್ಮೃತಿ ಸ್ಥಳ ಸಮೀಪದ 'ಸುದೈವ ಅಟಲ್‌' ಸ್ಮಾರಕಕ್ಕೆ ಪುಷ್ಪ ನಮನ ಸಲ್ಲಿಸಿ, ಧೀಮಂತ ನಾಯಕನನ್ನು ಸ್ಮರಿಸಿದರು.

ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌, ಬಿಜೆಪಿ ಅಧ್ಯಕ್ಷ ಅಮಿತ್‌ ಶಾ ಮತ್ತು ವಾಜಪೇಯಿ ಕುಟುಂಬ ಸದಸ್ಯರು ಸ್ಮಾರಕ ಸ್ಥಳಕ್ಕೆ ತೆರಳಿ ಗೌರವ ಸಲ್ಲಿಸಿದರು. ಈ ವೇಳೆ, ಖ್ಯಾತ ಗಾಯಕ ಪಂಕಜ್‌ ಉಧಾಸ್‌ ಭಕ್ತಿಗೀತೆಗಳ ಮೂಲಕ ಶ್ರದ್ಧಾಂಜಲಿ ಸಲ್ಲಿಸಿದರು.

ದೀರ್ಘ ಕಾಲದ ಅನಾರೋಗ್ಯದ ಬಳಿಕ ಅಟಲ್‌ ಬಿಹಾರಿ ವಾಜಪೇಯಿ ಕಳೆದ ಆಗಸ್ಟ್‌ 16ರಂದು ದಿಲ್ಲಿಯಲ್ಲಿ ನಿಧನ ಹೊಂದಿದ್ದರು.

''ಅಟಲ್‌ ಜೀ ಅವರಿಗೆ ನಮ್ಮ ಭಾವಪೂರ್ಣ ಶ್ರದ್ಧಾಂಜಲಿ. ಭಾರತ ನಿರ್ಮಾಣದ ಹಾದಿಯಲ್ಲಿ ಅವರು ಕಂಡಿದ್ದ ಕನಸು ನನಸಾಗಿಸುವ ನಮ್ಮ ಬದ್ಧತೆ ಅಚಲ,'' ಎಂದು ಪ್ರಧಾನಿ ಮೋದಿ ಟ್ವೀಟ್‌ ಮಾಡಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ