ಆ್ಯಪ್ನಗರ

ಎಸ್‌ಪಿಯಲ್ಲಿ ಬಿರುಕು: ಅಪ್ಪ ಕೋವಿಂದ್ ಪರ, ಮಗ ಮೀರಾ ಪರ

ರಾಷ್ಟ್ರಪತಿ ಚುನಾವಣೆ ಸಂಬಂಧ ಸಮಾಜವಾದಿ ಪಕ್ಷದಲ್ಲಿ ಬಿರುಕು ಮೂಡಿದ್ದು, ಮುಲಾಯಂ ಸಿಂಗ್ ಯಾದವ್ ಹಾಗೂ ಅಖಿಲೇಶ್ ಯಾದವ್ ಬಣ ಅಡ್ಡಮತದಾನ ಮಾಡುವ ಸಾಧ್ಯತೆ ಇದೆ.

ಟೈಮ್ಸ್ ಆಫ್ ಇಂಡಿಯಾ 16 Jul 2017, 4:15 pm
ಲಖನೌ: ರಾಷ್ಟ್ರಪತಿ ಚುನಾವಣೆ ಸಂಬಂಧ ಸಮಾಜವಾದಿ ಪಕ್ಷದಲ್ಲಿ ಬಿರುಕು ಮೂಡಿದ್ದು, ಮುಲಾಯಂ ಸಿಂಗ್ ಯಾದವ್ ಹಾಗೂ ಅಖಿಲೇಶ್ ಯಾದವ್ ಬಣ ಅಡ್ಡಮತದಾನ ಮಾಡುವ ಸಾಧ್ಯತೆ ಇದೆ.
Vijaya Karnataka Web samajwadi party divided in two camps on presidential poll eve cross voting likely
ಎಸ್‌ಪಿಯಲ್ಲಿ ಬಿರುಕು: ಅಪ್ಪ ಕೋವಿಂದ್ ಪರ, ಮಗ ಮೀರಾ ಪರ


ಮುಲಾಯಂ ಸಿಂಗ್ ಯಾದವ್ ಬಣ ಎನ್‌ಡಿಎ ಅಭ್ಯರ್ಥಿ ರಾಮನಾಥ್ ಕೋವಿಂದ್ ಅವರನ್ನು ಬೆಂಬಲಿಸಲು ನಿರ್ಧರಿಸಿದರೆ, ಅಖಿಲೇಶ್ ಯಾದವ್ ಬಣ ಯುಪಿಎ ಮೈತ್ರಿಕೂಟದ ಮೀರಾ ಕುಮಾರ್ ಅವರನ್ನು ಬೆಂಬಲಿಸಲು ಚಿಂತಿಸುತ್ತಿದ್ದಾರೆ.

ಪಕ್ಷದಲ್ಲಿನ ವಿಭಜನೆ ರಾಷ್ಟ್ರಪತಿ ಚುನಾವಣೆಯ ಮೇಲೆ ಯಾವುದೇ ಪರಿಣಾವಮ ಬೀರದಿದ್ದರೂ, ಪಕ್ಷದ ಆಂತರಿಕ ಕಲಹವನ್ನು ಮತ್ತಷ್ಟು ಹೆಚ್ಚಿಸಲಿದೆ ಎಂದು ವಿಶ್ಲೇಷಿಸಲಾಗಿದೆ.

ಎನ್‌ಡಿಎ ರಾಷ್ಟ್ರಪತಿ ಅಭ್ಯರ್ಥಿಯನ್ನು ಘೋಷಣೆ ಮಾಡಿದ ಬಳಿಕ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಆಯೋಜಿಸಿದ್ದ ಔತಣ ಕೂಟದಲ್ಲಿ ಭಾಗವಹಿಸುವ ಮೂಲಕ ಮುಲಾಯಂ ಸಿಂಗ್ ಯಾದವ್ ಅವರು ರಾಮನಾಥ್ ಕೋವಿಂದ್ ಅವರಿಗೆ ಬೆಂಬಲ ನೀಡುವ ಸೂಚನೆ ನೀಡಿದ್ದರು.

ಗಮನಾರ್ಹವಾಗಿ, ಅಖಿಲೇಶ್ ಯಾದವ್ ಹಾಗೂ ಮಾಯಾವತಿ ಅವರು ಔತಣಕೂಟದಿಂದ ದೂರು ಉಳಿಯವ ಮೂಲಕ ಯುಪಿಎ ಅಭ್ಯರ್ಥಿ ಮೀರಾ ಕುಮಾರ್ ಅವರನ್ನು ಬೆಂಬಲಿಸುವ ಸುಳಿವು ನೀಡಿದ್ದರು.

'ರಾಮನಾಥ್ ಕೋವಿಂದ್ ಅವರು ಉತ್ತಮ ಅಭ್ಯರ್ಥಿಯಾಗಿದ್ದು, ನನ್ನ ಆತ್ಮೀಯರಾಗಿದ್ದಾರೆ. ರಾಷ್ಟ್ರಪತಿ ಚುನಾವಣೆಯಲ್ಲಿ ಬಿಜೆಪಿ ಬಲವಾದ ಅಭ್ಯರ್ಥಿಯನ್ನೇ ಆಯ್ಕೆ ಮಾಡಿದೆ. ಮುಖ್ಯವಾಗಿ ಬಿಜೆಪಿ ಸ್ಪಷ್ಟ ಬಹುಮತ ಹೊಂದಿದೆ ಎಂದು ಮುಲಾಯಂ ಸಿಂಗ್ ಯಾದವ್ ಹೇಳಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ